ಪಾಳುಬಿದ್ದ ಕಟ್ಟಡ್ಡದಲ್ಲಿ ಅಂಗನವಾಡಿ


Team Udayavani, Dec 28, 2018, 5:01 PM IST

28-december-16.jpg

ದೋಟಿಹಾಳ: ಕೇಂದ್ರ, ರಾಜ್ಯ ಸರಕಾರಗಳು ಮಕ್ಕಳ ಶಿಕ್ಷಣಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿವೆ. ಆದರೆ ಈ ಗ್ರಾಮದ ಚಿಕ್ಕಮಕ್ಕಳ ಸಮಸ್ಯೆ ಬಗ್ಗೆ ಯಾವ ಅಧಿಕಾರಿ, ಜನಪ್ರತಿನಿಧಿಗಳೂ ಗಮನ ಹರಿಸದಿರುವುದು ದುರದೃಷ್ಟ ಸಂಗತಿಯಾಗಿದೆ. ಜಿಲ್ಲೆಯ ಗಡಿಭಾಗದಲ್ಲಿರುವ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಜೂಲಕುಂಟಿ ಗ್ರಾಮದ ಅಂಗವನಾಡಿ ಕೇಂದ್ರದ ಅವ್ಯವಸ್ಥೆ ಕಥೆ ಇದು.

ಜೂಲಕುಂಟಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳ ಗೋಳು ಕೇಳುವರ್ಯಾರು ಎಂಬತ್ತಾಗಿದೆ. ಕಳೆದ ಎರಡು ವರ್ಷಗಳಿಂದ ಗ್ರಾಮದಲ್ಲಿ ಪಾಳುಬಿದ್ದ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿದೆ. ಈ ಕಟ್ಟಡದ ಮೇಲ್ಛಾವಣಿ ಶಿಥಿಲಗೊಂಡಿದೆ. ಕಟ್ಟಡದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿವೆ. ಕಳೆಭಾಗದ ಪಾಟಿಕಲ್ಲುಗಳು ಕಿತ್ತು ಗುಂಡಿಗಳು ನಿರ್ಮಾಣವಾಗಿವೆ. ಈ ಗುಂಡಿಗಳ ಮೂಲಕ ಅನೇಕ ಬಾರಿ ಹಾವು, ಚೇಳು ಬಂದ ಉದಾಹರಣೆಗಳಿವೆ.

ಮೊಟ್ಟೆಗಳ ವಾಸನೆಯಿಂದಾಗಿ ವಿಷಜಂತುಗಳು ಅಂಗನವಾಡಿ ಕೇಂದ್ರದೊಳಗೆ ಬರುತ್ತಿವೆ. ಇದರಿಂದ ಈ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಕಷ್ಟವಾಗಿದೆ. ಮಕ್ಕಳು ಕುಳಿತುಕೊಳ್ಳಲು ಜಾಗೆಯಿಲ್ಲ. ಆಹಾರ ಧಾನ್ಯ ಸಂಗ್ರಹಿಸಿಡಲು ಹಾಗೂ ದಾಖಲೆಗಳನ್ನು ಇಡಲು ಸೂಕ್ತ ಸ್ಥಳಾವಕಾಶವಿಲ್ಲ. ವಿಷ ಜಂತುಗಳ ಭಯದಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳನ್ನು ಬಿಟ್ಟು ಹೊರಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇಂತಹ ಪರಿಸ್ಥಿತಿ ಇರುವುದರಿಂದ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಸರಸ್ವತಿ ತಿಳಿಸಿದರು.

ಜೂಲಕುಂಟಿ ಗ್ರಾಮದ ಅಂಗನವಾಡಿ ಕೇಂದ್ರವನ್ನು 10 ವರ್ಷಗಳ ಹಿಂದೆ ಜಮೀನು ಮಾಲೀಕರ ಒಪ್ಪಿಗೆ ಪಡೆಯದೇ ನಿರ್ಮಿಸಲಾಗಿತ್ತು. ಎರಡು ವರ್ಷಗಳ ಹಿಂದೇ ಜಮೀನು ಮಾಲೀಕ ಈ ಕೇಂದ್ರದ ಕಟ್ಟಡ ನಮ್ಮ ಜಮೀನಲ್ಲಿದೆ ಎಂದು ಖಾಲಿ ಮಾಡಿಸಿದರು. ಆಗ ಗ್ರಾಮದಲ್ಲಿ ಕೇಂದ್ರವನ್ನು ನಡೆಸಲು ಬಾಡಿಗೆ ಕಟ್ಟಡ ಸಿಗಲಿಲ್ಲ. ಹೀಗಾಗಿ ಗ್ರಾಮದಲ್ಲಿ ಏಳೆಂಟು ವರ್ಷಗಳಿಂದ ಪಾಳುಬಿದ್ದ ಹಳೇ ಶಾಲೆಯ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಆರಂಭಿಸಲಾಗಿದೆ.

ಇದರ ಬಗ್ಗೆ ಕೇಂದ್ರದ ಮೇಲ್ವಿಚಾರಕರಾದ ಶ್ರೀದೇವಿ ಅವರನ್ನು ವಿಚಾರಿಸಿದಾಗ, ನಿಜವಾಗಿ ಅಂಗನವಾಡಿ ಕೇಂದ್ರವನ್ನು ಇಲ್ಲಿ ನಡೆಸುವುದು ತಪ್ಪು. ಗ್ರಾಮದಲ್ಲಿ ಬಾಡಿಗೆ ಮನೆ-ಕಟ್ಟಡ ಸಿಗದ ಕಾರಣ ಅನಿವಾರ್ಯವಾಗಿ ನಡೆಸುತ್ತಿದ್ದೇವೆ. ತಾಪಂ ಇಒ ಅವರು ಅಂಗನವಾಡಿ ಕೇಂದ್ರವನ್ನು ಆರಂಭಿಸಲು ಒಂದು ಕೊಠಡಿ ನೀಡಿ ಎಂದು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಪತ್ರ ಬರೆದಿದ್ದಾರೆ. ಆದರೆ ಶಾಲೆಯ ಮುಖ್ಯೋಪಾಧ್ಯಾಯರು ಕೊಠಡಿ ನೀಡಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅನಿವಾರ್ಯವಾಗಿ ಪಾಳುಬಿದ್ದ ಕೊಠಡಿಯಲ್ಲಿ ಅಂಗನವಾಡಿ ನಡೆಸುತ್ತಿದೇವೆ. ಹೀಗೆ ಮುಂದುವರಿದರೆ ಮಕ್ಕಳಿಗೆ ತೊಂದರೆಯಾಗುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು. ದೊಡ್ಡ ಅನಾಹುತವಾಗುವ ಮೊದಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತು ಅಂಗನವಾಡಿ ಕೇಂದ್ರವನ್ನು ಸೂಕ್ತ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಆರೋಪಿಸಿದರು.

ಜೂಲಕುಂಟಿ ಗ್ರಾಮದ ಅಂಗನವಾಡಿ ಕೇಂದ್ರದ ಸಮಸ್ಯೆ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರಾಮದ ಸರಕಾರಿ ಶಾಲೆ ಹೆಚ್ಚುವರಿ ಕೊಠಡಿಯನ್ನು ನೀಡಲು ಅಧಿಕಾರಿಗಳು ತಿಳಿಸಿದರೂ ಶಾಲಾ ಮುಖ್ಯೋಪಾಧ್ಯಾಯರು ಕೊಠಡಿಯನ್ನು ನೀಡಲಿಲ್ಲ. ಹೀಗಾಗಿ ಸಮಸ್ಯೆಗೆ ಕಾರಣವಾಗಿದೆ. ಕೂಡಲೇ ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ತಿಳಿಸುತ್ತೇನೆ.
ವಿರೇಂದ್ರ ನಾವದಗಿ, ಸಿಡಿಪಿಒ.

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.