ಸೌಲಭ್ಯ ನಿರೀಕ್ಷೆಯಲ್ಲಿ ಅಂಗನವಾಡಿ ಕೇಂದ್ರಗಳು

ದಶಕಗಳಿಂದ ಬಾಡಿಗೆ ಮನೆಗಳಲ್ಲಿ ಅಂಗನವಾಡಿ ಕೇಂದ್ರ ; ಕಟ್ಟಿಗೆ ಕಪಾಟಿನಲ್ಲಿ ಮಕ್ಕಳಿಗೆ ಅಡುಗೆ ತಯಾರಿ

Team Udayavani, Nov 14, 2022, 11:29 AM IST

6

ದೋಟಿಹಾಳ: ಒಂದು ಸಣ್ಣ ಕೊಠಡಿಯಲ್ಲಿ ಒಂದೆಡೆ ವಿದ್ಯಾರ್ಥಿಗಳು, ಮತ್ತೂಂದೆಡೆ ಪೌಷ್ಟಿಕ ಆಹಾರದ ಚೀಲಗಳು. ಅತ್ತ ಕುಡಿಯುವ ನೀರಿನ ಬಿಂದಿಗೆಗಳು, ಇತ್ತ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಮಾಹಿತಿಯ ಚಾರ್ಟ್ ಗಳು… ಇದು ಹಿರೇಮನ್ನಾಪುರ ಗ್ರಾಮದ ಅಂಗನವಾಡಿ ಕೇಂದ್ರಗಳಲ್ಲಿ ಕಂಡು ಬರುವ ದೃಶ್ಯ.. ಹಿರೇಮನ್ನಾಪುರ ಗ್ರಾಮದ ಅಂಗನವಾಡಿ ಕೇಂದ್ರಗಳು ದಶಕಗಳಿಂದ ಮೂಲಸೌಕರ್ಯ ವಂಚಿತವಾಗಿವೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿದ್ದರೂ ಅನೇಕ ಹಳ್ಳಿಗಳಲ್ಲಿ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳಿಲ್ಲದೇ, ಬಾಡಿಗೆ ಮನೆಗಳಲ್ಲಿ ನಡೆಯುತ್ತಿರುವುದು ದುರಂತವಾಗಿದೆ. ಗ್ರಾಮದಲ್ಲಿ ಒಟ್ಟು 7 ಅಂಗನವಾಡಿ ಕೇಂದ್ರಗಳ ಪೈಕಿ 4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ನಡೆಯುತ್ತಿವೆ. ಈ ಕೇಂದ್ರಗಳು ಸುಮಾರು 15 ವರ್ಷಗಳಿಂದ ಇಕ್ಕಟ್ಟಿನ ಪ್ರದೇಶ ಹಾಗೂ ಜಾಗಗಳಲ್ಲಿ ನಡೆಯುತ್ತಿವೆ. ಈ ಗ್ರಾಮದ 2, 3, 4 ಮತ್ತು 7ನೇ ಕೇಂದ್ರಗಳು ಬಾಡಿಗೆ ಮನೆಯಲ್ಲಿ ನಡೆಯುತ್ತಿವೆ. ಇದರಲ್ಲಿ 2, 3, 4ನೇ ಕೇಂದ್ರಗಳು ಆರಂಭವಾಗಿ ಸುಮಾರು 17ವರ್ಷಗಳು ಕಳೆದರು ಇನ್ನೂ ಇವುಗಳಿಗೆ ಸ್ವಂತ ಕಟ್ಟಡಗಳಿಲ್ಲ. ಈ ಕೇಂದ್ರಗಳು ನಾಟಕದ ಕಂಪನಿಯಂತೆ 2-3 ವರ್ಷಕ್ಕೊಮ್ಮೆ ಮನೆಗಳನ್ನು ಬದಲಾವಣೆ ಮಾಡುತ್ತ ಕೇಂದ್ರವನ್ನು ಕಾರ್ಯಕರ್ತೆಯರು ನಡೆಸುತ್ತಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಕಲ್ಪಿಸುವಂತೆ ಕಳೆದ 10 ವರ್ಷಗಳಿಂದ ಗ್ರಾಪಂಗೆ ಮನವಿ ಮಾಡಲಾಗುತ್ತಿದೆ. ಆದರೆ ನಿವೇಶನ ಮಾತ್ರ ಸಿಗುತ್ತಿಲ್ಲ. ಹೀಗಾಗಿ ಬಾಡಿಗೆ ಮನೆಗಳಲ್ಲಿ ಕೇಂದ್ರ ನಡೆಸುತ್ತಿದ್ದೇವೆ. 2-3 ವರ್ಷಕ್ಕೊಮ್ಮೆ ಮನೆಗಳನ್ನು ಬದಲಾವಣೆ ಮಾಡಿದ್ದೇವೆ ಎಂದು ಕೇಂದ್ರ ಕಾರ್ಯಕರ್ತೆಯರು ತಿಳಿಸಿದರು.

ಇಲ್ಲಿಯ 7ನೇ ಅಂಗನವಾಡಿ ಕೇಂದ್ರ ಚಿಕ್ಕ ಕೊಠಡಿಯಲ್ಲಿದೆ. ಇಲ್ಲಿಯ ಮಕ್ಕಳಿಗೆ ಕಟ್ಟಿಗೆಯ ಕಪಾಟಿನಲ್ಲಿ ಮಕ್ಕಳಿಗೆ ಅಡುಗೆ ತಯಾರಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರದ ಕಾರ್ಯಕರ್ತೆಯನ್ನು ವಿಚಾರಿಸಿದಾಗ. ಏನ್‌ ಮಾಡುವುದು, ಬಾಡಿಗೆ ಮನೆ ಸಿಗುತ್ತಿಲ್ಲ ಸ್ವಂತ ಕಟ್ಟಡವೂ ಇಲ್ಲ. ಅನಿವಾರ್ಯವಾಗಿ ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ನಡೆಸುತ್ತಿದ್ದೇವೆ ಎಂದು ತಮ್ಮ ನೋವು ತೋಡಿಕೊಂಡರು.

ಇಲ್ಲಿಯ ನಾಲ್ಕು ಕೇಂದ್ರಗಳು ಹಳೆಯ ಮನೆಗಳಲ್ಲಿ ನಡೆಯುತ್ತಿವೆ. ಈ ಮನೆಗೆ ವಿದ್ಯುತ್‌ ಸಂಪರ್ಕ, ಶೌಚಾಲಯ ಹಾಗೂ ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲ. ಇಕ್ಕಟ್ಟಾದ ಸ್ಥಳದಲ್ಲಿ ಕೇಂದ್ರ ನಡೆಯುತ್ತಿದೆ. ಕೊಠಡಿಯ ಒಂದು ಮೂಲೆಯಲ್ಲಿ ಅಡುಗೆ ಮಾಡಿದರೆ, ಇನ್ನೊಂದು ಮೂಲೆಯಲ್ಲಿ ಸಾಮಗ್ರಿಗಳು ಹಾಗೂ ಮಕ್ಕಳ ಕಲಿಕೆಗೆ ಅಗತ್ಯ ಪರಿಕರಗಳನ್ನು ಸಂಗ್ರಹಿಸಲಾಗಿದೆ. ಮೇಲ್ಛಾವಣಿ ದುರಸ್ತಿಯಲ್ಲಿದೆ. ಮಳೆ ಬಂದರೆ ನೀರು ಕೇಂದ್ರದೊಳಗೆ ಸುರಿಯುತ್ತದೆ. ಇಂತಹ ಸ್ಥಿತಿಯಲ್ಲಿ ಮಧ್ಯಾಹ್ನ ಮಕ್ಕಳಿಗೆ ಊಟ ಮಾಡಲು ಸ್ಥಳಾವಕಾಶವಿಲ್ಲದೇ, ಗರ್ಭಿಣಿಯರಿಗೆ ನೀಡುವ ಊಟವನ್ನು ಅವರ ಮನೆಗಳಿಗೆ ಕೊಂಡೊಯ್ಯುತ್ತಿದ್ದಾರೆ.

ಹಿರೇಮನ್ನಾಪುರ ಗ್ರಾಮದ ನಾಲ್ಕು ಅಂಗನವಾಡಿ ಕೇಂದ್ರಗಳು ಸುಮಾರು 10-15 ವರ್ಷಗಳಿಂದ ಬಾಡಿಗೆ ಮನೆಗಳಲ್ಲಿ ನಡೆಯುತ್ತಿವೆ. ಅಲ್ಲಿಯ ಗ್ರಾಪಂಗೆ ನಿವೇಶನ ನೀಡಲು ಮನವಿ ಮಾಡಿದರು ಇದುವರೆಗೂ ಯಾವುದೂ ಪ್ರಯೋಜನವಾಗಿಲ್ಲ.  –ನಾಗಮ್ಮ, ಅಂಗನವಾಡಿ ಮೇಲ್ವಿಚಾರಕಿ

ತಾಲೂಕಿನಲ್ಲಿ ಸುಮಾರು 13 ಕೇಂದ್ರಗಳು ಬಾಡಿಗೆ ಮನೆಗಳಲ್ಲಿವೆ. ಹಿರೇಮನ್ನಾಪುರ ಗ್ರಾಮದ 4 ಕೇಂದ್ರಗಳು 10-15 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ನಡೆಯುತ್ತಿವೆ. ಸದ್ಯ ರಾಜ್ಯ ಪಂಚಾಯತ್‌ ರಾಜ್‌ ಆಯುಕ್ತಾಲಯ ಬೆಂಗಳೂರು ಅವರು ಸ್ವಂತ ಕಟ್ಟಡಗಳಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಸಮೀಪದ ಶಾಲೆಗಳಲ್ಲಿ ಕೊಠಡಿ ಒದಗಿಸಲು ತಿಳಿಸಿದ್ದಾರೆ. -ವಿರೂಪಾಕ್ಷಯ್ಯ, ಸಿಡಿಪಿಒ ಕುಷ್ಟಗಿ

„ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.