ಅಂಜನಾದ್ರಿ ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ : ಮುಂಬೈ ಮೂಲದ ಪ್ರವಾಸಿಗ ಸಾವು
Team Udayavani, Apr 15, 2022, 9:08 PM IST
ಗಂಗಾವತಿ : ಅಂಜನಾದ್ರಿಗೆ ಆಗಮಿಸಿದ್ದ ಮುಂಬೈ ಮೂಲದ ಪ್ರವಾಸಿಗನೊಬ್ಬ ಮೆಟ್ಟಿಲುಗಳ ಹತ್ತುವಾಗ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಜರುಗಿದೆ.
ಮುಂಬೈ ಮೂಲದ ಹಿಮಾಂಶು ಭಾಟಿಯಾ(34) ಎಂಬ ಪ್ರವಾಸಿಗ ಶುಕ್ರವಾರ ಮಧ್ಯಾಹ್ನ ಅಂಜನಾದ್ರಿ ವೀಕ್ಷಣೆ ಮಾಡಲು ಆಗಮಿಸಿ ಅಂಜನಾದ್ರಿಯ ಮೆಟ್ಟಿಲು ಏರುವಾಗ ಮಾರ್ಗಮಧ್ಯೆ ಎದೆ ನೋವಿನಿಂದ ಬಳಲಿ ಕುಸಿದು ಬಿದ್ದಿದ್ದು ಕೂಡಲೇ ಅವನ ಸ್ನೇಹಿತರು ಆನೆಗುಂದಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆನೆಗೊಂದಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣ ಹೃದಯಾಘಾತಕ್ಕೆ ಒಳಗಾಗಿದ್ದ ಹಿಮಾಂಶು ಪಾಂಡ್ಯ ಅವರಿಗೆ ಸರಿಯಾದ ಚಿಕಿತ್ಸೆ ದೊರಕದೆ ಇರುವುದಕ್ಕೆ ಅವರ ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.16 ರಂದು ಹನುಮ ಮಾಲಾಧಾರಿಗಳ ಮಾಲಾ ವಿಸರ್ಜನೆ ಕಾರ್ಯಕ್ರಮ ಇರುವುದರಿಂದ 40 ಸಾವಿರಕ್ಕೂ ಹೆಚ್ಚು ಹನುಮ ಭಕ್ತರು ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಹೆಚ್ಚಿನ ಬಿಸಿಲಿನ ತಾಪ ಇರುವುದರಿಂದ ತಾಲ್ಲೂಕು ಆಡಳಿತ ಹನುಮ ಭಕ್ತರ ಆರೋಗ್ಯ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಕಾಳಜಿ ವಹಿಸಬೇಕಿದೆ .
ಇದನ್ನೂ ಓದಿ : ಹಲವು ಪವಾಡಗಳಿಗೆ ಸಾಕ್ಷಿಯಾಗುತ್ತಿದೆ ಉಚ್ಚಿಲ ಮಹಾಲಕ್ಷ್ಮೀ ಕ್ಷೇತ್ರ