ಅಂಜನಾದ್ರಿ: ಸ್ವಪ್ರೇರಣೆಯಿಂದ ಅನ್ಯಕೋಮಿನ ವ್ಯಾಪಾರಿಗಳ ಅಂಗಡಿಗಳು ಬಂದ್

ಹನುಮಮಾಲೆ ವಿಸರ್ಜನೆ: ಅಂಗಡಿಗಳ ತಾತ್ಕಾಲಿಕ ಸ್ಥಳಾಂತರ, ಕೋಮುದ್ವೇಷ ಹರಡುವವರ ವಿರುದ್ಧ ಕ್ರಮ

Team Udayavani, Nov 30, 2022, 6:56 PM IST

1-fdfadad

ಗಂಗಾವತಿ: ತಾಲೂಕಿನ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಅನ್ಯ ಕೋಮಿನ ಜನರು ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸುವಂತೆ ಹಿಂದೂ ಜಾಗರಣಾ ವೇದಿಕೆ ಹಾಗೂ ಸಂಘ ಪರಿವಾರದವರು ತಾಲೂಕು, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಅಂಜನಾದ್ರಿಯ ಸುತ್ತ ಕಟ್ಟಿದ್ದ ಬ್ಯಾನರ್ ಹಿನ್ನೆಲೆಯಲ್ಲಿ ಅಂಜನಾದ್ರಿಯ ಹತ್ತಿರದ ತೆಂಗಿನ ಕಾಯಿ, ಪೂಜಾ ಸಾಮಾನು ಹಾಗೂ ಉಪಹಾರದಂಗಡಿಗಳನ್ನು ನಡೆಸುತ್ತಿದ್ದ ಅನ್ಯ ಕೋಮಿನ ವ್ಯಾಪಾರಿಗಳು ಸ್ವಯಂಪ್ರೇರಣೆಯಿಂದ ತಮ್ಮ ಅಂಗಡಿಗಳನ್ನು ಬಂದ್ ಮಾಡಿಕೊಂಡಿದ್ದಾರೆ.

ಹಿಂದೂ ಧರ್ಮಿಯರ ಅಂಗಡಿಗಳು ಮತ್ತು ವ್ಯಾಪಾರಿಗಳು ತೆಂಗಿನಕಾಯಿ ಕೇಸರಿ ಶಾಲು ಮಾರಾಟದಲ್ಲಿ ತಲ್ಲಿನರಾಗಿದ್ದರು. 10 ಕ್ಕೂ ಹೆಚ್ಚು ಅಂಗಡಿಗಳು ಮತ್ತು 20ಕ್ಕೂ ಹೆಚ್ಚು ಅನ್ಯಕೋಮಿನ ಮಹಿಳೆಯರು, ಪುರುಷರು ಹನುಮನಹಳ್ಳಿ, ಆನೆಗೊಂದಿ, ನಂದಯ್ಯನಕ್ರಾಸ್, ರಾಂಪೂರ, ಮಲ್ಲಾಪೂರ, ಸಾಣಾಪೂರ, ವಿರೂಪಾಪೂರಗಡ್ಡಿ ಹಾಗೂ ಗಂಗಾವತಿಯಿಂದ ಆಗಮಿಸಿ ಕಳೆದ 4 ವರ್ಷಗಳಿಂದ ಅಂಜನಾದ್ರಿಯ ಹತ್ತಿರ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ.

ಹಿಂದೂ ಜಾಗರಣಾ ವೇದಿಕೆವರು ರಾಜ್ಯದ ಇತರೆಡೆ ಹಿಂದೂ ದೇವಾಲಯಗಳ ಮುಂದೆ ಅನ್ಯ ಕೋಮಿನವರು ವ್ಯಾಪಾರ ನಡೆಸದಂತೆ ಬ್ಯಾನರ್ ಹಾಕುತ್ತಿದ್ದು ಡಿ.03,04 ಮತ್ತು 05 ರಂದು ಹನುಮಮಾಲೆ ವಿಸರ್ಜನೆ ಮಾಡುವ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಇಲ್ಲಿಯೂ ಅನ್ಯ ಕೋಮಿನವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದೆಂದು ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ನಂತರ ಆನೆಗೊಂದಿ ಅಂಜನಾದ್ರಿ ಸುತ್ತಲಿನ ಪ್ರದೇಶದಲ್ಲಿ ಅನ್ಯಕೋಮಿನವರು ವ್ಯಾಪಾರ ಮಾಡದಂತೆ ಬ್ಯಾನರ್ ಬಂಟಿಂಗ್ಸ್ ಕಟ್ಟಿದ್ದರು. ಇದರಿಂದಾಗಿ ಅಂಜನಾದ್ರಿಯಲ್ಲಿದ್ದ ಅನ್ಯಕೋಮಿನ ವ್ಯಾಪಾರಿಗಳು ಬುಧವಾರದಿಂದಲೇ ತಮ್ಮ ಅಂಗಡಿಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿಕೊಂಡಿದ್ದಾರೆ.

ವ್ಯಾಪಾರಿಗಳ ಸ್ಥಳಾಂತರ
ಡಿ.03.04 ಮತ್ತು 05 ರಂದು ಅಂಜನಾದ್ರಿಯಲ್ಲಿ ಹನುಮಮಾಲೆ ವಿಸರ್ಜನೆ ಹಿನ್ನೆಲೆಯಲ್ಲಿ ಸುಮಾರು ಒಂದು ಲಕ್ಷ ಹನುಮಭಕ್ತರು ಸೇರುವುದರಿಂದ ಜನದಟ್ಟಣೆ ಮತ್ತು ಸಂಚಾರ ಸುಗಮಗೊಳಿಸಲು ಅಂಜನಾದ್ರಿಯ ಹಾಗೂ ರಸ್ತೆಗೆ ಹೊಂದಿಕೊಂಡಿದ್ದ ಹಣ್ಣು, ಹೂವು, ತೆಂಗಿನಕಾಯಿ ಮತ್ತು ಕೇಸರಿ ಶಲ್ಯ ಮಾರಾಟ ಮಾಡುವ ಮತ್ತು ಉಪಹಾರ, ಚಹಾದಂಗಡಿಗಳನ್ನು ಪಂಪಾಸರೋವರದ ಮಾರ್ಗದಲ್ಲಿರುವ ಮೂರ್ತಿ ಹೊಲಕ್ಕೆ ಸ್ಥಳಾಂತರ ಮಾಡುವಂತೆ ತಾಲೂಕು ಆಡಳಿತ ವ್ಯಾಪಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು ಒಂದು ವೇಳೆ ಸ್ಥಳಾಂತರ ಮಾಡದಿದ್ದರೆ ತಾಲೂಕು ಆಡಳಿತವೇ ಸ್ಥಳಾಂತರ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

ಹನುಮಮಾಲೆ ವಿಸರ್ಜನೆಗೆ ಈಗಾಗಲೇ ತಾಲೂಕು, ಜಿಲ್ಲಾಡಳಿತಗಳು ಸರ್ವ ಸಿದ್ಧತೆ ಮಾಡಿಕೊಂಡಿದ್ದು ಜನದಟ್ಟಣೆ ನಿಯಂತ್ರಿಸಲು ಪೊಲೀಸ್ ಬಂದೋಬಸ್ತ್ ಹಾಗೂ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತದೆ. ಆಗಮಿಸುವ ಭಕ್ತರ ವಾಹನಗಳು ಮತ್ತು ಬೈಕ್‌ಗಳು ನಿಲ್ಲಿಸಲು ರೈತರ ಗದ್ದೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಅಂಜನಾದ್ರಿಯಲ್ಲಿ ಎಲ್ಲಾ ಕೋಮಿನವರು ಸಹ ವ್ಯಾಪಾರ ವಹಿವಾಟು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಯಾರನ್ನು ನಿಷೇಧ ಮಾಡಿಲ್ಲ. ಸೌಹಾರ್ದತೆಯಿಂದ ವ್ಯಾಪಾರ ವಹಿವಾಟು ಮಾಡಬೇಕು. ಕೋಮುದ್ವೇಷ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಈಗಾಗಲೇ ಆಕ್ಷೇಪಾರ್ಹ ಬ್ಯಾನರ್ ಬಂಟಿಂಗ್ಸ್ ಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ತೆರವುಗೊಳಿಸಲಾಗಿದೆ.
-ಬಸವಣೆಪ್ಪ ಕಲಶೆಟ್ಟಿ, ಎಸಿ ಕೊಪ್ಪಳ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.