ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಮನವಿ
Team Udayavani, Jul 26, 2020, 9:25 AM IST
ಕನಕಗಿರಿ: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದ ದಲಿತ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕನಕಗಿರಿ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್ ಕಾರ್ಯಾಲಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನೀಲಕಂಠ ಬಡಿಗೇರ ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ಜಾತಿನಿಂದನೆ, ಹಲ್ಲೆ, ಅತ್ಯಾಚಾರಗಳಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ. ಇಂತಹ ಘಟನೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದಲ್ಲಿ ದಲಿತ ಯುವಕ ದ್ವಿಚಕ್ರ ವಾಹನ ಮುಟ್ಟಿದ ಎನ್ನುವ ಕಾರಣಕ್ಕೆ ಸವರ್ಣೀಯರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ಕೇಸಿಗೆ ಪ್ರತಿ ಕೇಸು ದಾಖಲಿಸುತ್ತಿರುವುದು ಖೇದಕರ ಸಂಗತಿ ಎಂದರು.
ಈ ಸಂದರ್ಭದಲ್ಲಿ ಪಾಮಣ್ಣ ಅರಳಿಗನೂರು, ಶೇಷಪ್ಪ ಪೂಜಾರ, ನಾಗರಾಜ ದೊಡ್ಡಮನಿ, ಮುದಿಯಪ್ಪ, ಸಣ್ಣ ಹನುಮಂತ ಹುಲಿಹೈದರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ