ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಮನವಿ
Team Udayavani, Nov 6, 2019, 2:39 PM IST
ಕೊಪ್ಪಳ: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಇತರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ. ಚಂದ್ರಶೇಖರ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕೊಪ್ಪಳದಲ್ಲಿ ಮನವಿ ಸಲ್ಲಿಸಿದರು.
ನಗರದ ಹೊರವಲಯದಲ್ಲಿರುವ ಬೆಟ್ಟಗಳ ಸಾಲುಗಳ ಮಧ್ಯದಲ್ಲಿ ಪುರಾಣ ಪ್ರಸಿದ್ಧ ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿದ ಮಳೆಮಲ್ಲೇಶ್ವರ ದೇವಸ್ಥಾನವಿದೆ. ಇದಕ್ಕೆ ಇಂದ್ರಕಿಲ ಪರ್ವತವೆಂದು ಉಲ್ಲೇಖವಿದೆ. ಪರ್ವತದಲ್ಲಿ ಈಶ್ವರ ತಪಸ್ಸುಗೈದು ಅರ್ಜುನನಿಗೆ ಪಾಶುಪಶಾಸ್ತ್ರ ನೀಡಿದ ಸ್ಥಳವೆಂಬ ಪ್ರತೀತಿಯಿದೆ. ದೇವಸ್ಥಾನ ಗರ್ಭಗುಡಿಯ ಸ್ವಾಮಿಯ ಪೀಠದಿಂದ ಹರಿದುಬರುವ ಪವಿತ್ರ ತೀರ್ಥದ ಸಂಗ್ರಹಣೆಗೆ ಪುಷ್ಕರಣಿ ಅವಶ್ಯಕತೆ ಇರುವುದರಿಂದ ಅನುದಾನ ನೀಡಿ ನಿರ್ಮಾಣಕ್ಕೆ ಸಹಕರಿಸಬೇಕು. ಕೋಟೆ ಹಾಗೂ ಹುಲಿಕೆರಿ ಕುರಿತಂತೆ ಮಾಹಿತಿ ತಿಳಿಸಿದರು.
ಮನವಿ ಸ್ವೀಕರಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಬಿಜೆಪಿ ಮುಖಂಡರಾದ ಅಪ್ಪಣ್ಣ ಪದಕಿ, ಸುರೇಶ ದೇಸಾಯಿ, ಹಾಲೇಶ ಕಂದಾರಿ, ದೇವರಾಜ ಹಾಲಸಮುದ್ರ, ರಾಘವೇಂದ್ರ, ರಾಜಕುಮಾರ ಹಾಗೂ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್