ಅರ್ಜಿ ಹಾಕಿದವರಿಗೆಲ್ಲ ಇಲ್ಲ ಕಿಸಾನ್ ಸಮ್ಮಾನ್
•ಕುಟುಂಬಕ್ಕೊಂದೇ ಕಿಸಾನ್ ಸಮ್ಮಾನ್ ನಿಧಿ•ಜು.17ರವರೆಗೂ ಅರ್ಜಿ ಸಲ್ಲಿಸಲು ಅವಕಾಶ
Team Udayavani, Jul 14, 2019, 10:56 AM IST
ಕಿಸಾನ್ ಸಮ್ಮಾನ್ ಅರ್ಜಿ ಸಲ್ಲಿಸಲು ಸಾಲುಗಟ್ಟಿ ನಿಂತಿರುವ ರೈತರು. (ಸಾಂದರ್ಭಿಕ ಚಿತ್ರ)
ಗಂಗಾವತಿ: ದೇಶದ ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಬಜೆಟ್ನಲ್ಲಿ ಪ್ರಕಟಿಸಿರುವಂತೆ ಪ್ರತಿ ತಾಲೂಕಿನಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಜು.17ರವರೆಗೂ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರೈತರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಅರ್ಜಿ ಸಲ್ಲಿಸಿದವರಿಗೆಲ್ಲ ಈ ಯೋಜನೆಯ ಫಲ ಸಿಗಲ್ಲ. ಕುಟುಂಬದಲ್ಲಿರುವ ಪತ್ನಿ, ಮಕ್ಕಳ ಹೆಸರಿನಲ್ಲಿ ಭೂಮಿ ಇದ್ದರೆ ಮುಖ್ಯಸ್ಥನಿಗೆ ಮಾತ್ರ ಯೋಜನೆ ಲಾಭ ಸಿಗಲಿದೆ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ವಾರ್ಷಿಕ 6 ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆ ಕೇಂದ್ರ ಸರಕಾರ ನೇರವಾಗಿ ಜಮಾ ಮಾಡಲಿದೆ.
ಅರ್ಜಿಗಳನ್ನು ಗ್ರಾಪಂ ಗ್ರಾಮಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕ ಕಚೇರಿ, ನಾಡಕಚೇರಿಗಳಲ್ಲಿ ರೈತರು ನಿಗದಿತ ಅರ್ಜಿಯೊಂದಿಗೆ ಭೂಮಿ, ಬ್ಯಾಂಕ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ವಿವರ ಸಲ್ಲಿಸಬೇಕಿದೆ. ಈಗಾಗಲೇ ಅರ್ಜಿ ಸಲ್ಲಿಸುವ ದಿನಾಂಕವನ್ನು ಸರಕಾರ ಎರಡು ಭಾರಿ ಮುಂದೂಡಿದ್ದು ಜು. 17 ಕೊನೆಯ ಅವಕಾಶವಾಗಿದೆ. ಸಾಮಾನ್ಯವಾಗಿ ಒಂದು ಕುಟುಂಬದಲ್ಲಿ ಪತಿ, ಪತ್ನಿ ಮಕ್ಕಳ ಹೆಸರಿನಲ್ಲಿ ಭೂಮಿಯ ಪಹಣಿ ಮಾಡಿಸಲಾಗಿರುತ್ತದೆ. ಇವರೆಲ್ಲ ಒಂದೇ ಕುಟುಂಬ ಹಾಗೂ ಒಂದೇ ಮನೆಯಲ್ಲಿ ವಾಸವಾಗಿದ್ದರೆ ಅಂತಹವರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆ ಕುಟುಂಬದಲ್ಲಿ ಒಬ್ಬರನ್ನು ಯೋಜನಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದುವರೆಗೂ ತಮ್ಮ ಹೆಸರಿನಲ್ಲಿ ಭೂಮಿ ಇದ್ದವರೆಲ್ಲರೂ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಮೇಲಾಧಿಕಾರಿಗಳ ಮೌಖೀಕ ಆದೇಶದಂತೆ ಎಲ್ಲಾ ಅರ್ಜಿಗಳನ್ನು ಪರಿಷ್ಕರಿಸಿ ಒಂದು ಕುಟುಂಬಕ್ಕೆ ಒಂದರಂತೆ ಅರ್ಜಿಗಳನ್ನು ಕ್ರೋಢೀಕರಿಸುವ ಕಾರ್ಯವನ್ನು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಗಲು ರಾತ್ರಿ ಮಾಡುತ್ತಿದ್ದಾರೆ. ಅರ್ಜಿ ಸ್ವೀಕಾರಕ್ಕೂ ಮೊದಲೇ ರೈತ ಕುಟುಂಬದಲ್ಲಿ ಒಬ್ಬರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರೆ ಗೊಂದಲವುಂಟಾಗುತ್ತಿರಲಿಲ್ಲ.
•ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ