ನೇಮಕಾತಿ ಅಕ್ರಮ: ತಪ್ಪೆಸಗಿದವರಿಗೆ ಶಿಕ್ಷೆಯಾಗಲಿ
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವರ ಪಾತ್ರ ಖಚಿತ: ಅನ್ಸಾರಿ
Team Udayavani, May 4, 2022, 2:59 PM IST
ಗಂಗಾವತಿ: ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದರಲ್ಲಿ ಹಲವು ಸಚಿವರ ಪಾತ್ರವಿದೆ. ಅವರ ತಲೆ ದಂಡ ಖಚಿತವಾಗಿದ್ದು, ಸಚಿವ ಅಶ್ವತ್ಥ ನಾರಾಯಣ ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಒತ್ತಾಯಿಸಿದರು.
ಅವರು ಸುದ್ದಿಗಾರರೊಂದಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಬಿಜೆಪಿ ಬಹುತೇಕ ಮುಖಂಡರು ನೇಮಕಾತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿದ್ದಾರೆ. ಸಿವಿಲ್ ಎಂಜಿನಿಯರ್, ಪ್ರಾಧ್ಯಾಪಕರು, ಪಿಎಸ್ಐ ಹಾಗೂ ನವೋದಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಆಯ್ಕೆಯಂತಹ ಪ್ರಮುಖ ಪರೀಕ್ಷೆಯಲ್ಲಿಯೂ ಬಿಜೆಪಿಯ ಪ್ರಮುಖರು ನಕಲಿ ಮಾಡಿಸಿ ತಮಗೆ ಬೇಕಾದವರಿಗೆ ನೌಕರಿ ಕೊಡಿಸುವ ದಂಧೆ ನಡೆಸಿದ್ದಾರೆ. ನಿಜವಾಗಿ ಶ್ರಮ ವಹಿಸಿ ಓದಿದ ಪ್ರತಿಭಾನ್ವಿತರಿಗೆ ಅನ್ಯಾಯವಾಗಿದೆ. ಸಚಿವ ಅಶ್ವಥ ನಾರಾಯಣ ಅವರ ಸಹೋದರರ ಪಾತ್ರವಿದ್ದು ಸರಕಾರ ಕೂಡಲೇ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ರಿಂದ ತನಿಖೆ ನಡೆಸಬೇಕು. ಈ ಹಿಂದೆ ಕೆಪಿಎಸ್ಸಿಯಲ್ಲಿ ನಡೆದ ಹಗರಣದಲ್ಲಿ ನೇಮಕವಾದವರನ್ನು ಕೈ ಬಿಟ್ಟಂತೆ ಈಗಲೂ ಪಿಎಸ್ಐ ನೇಮಕಾತಿ ಕೈ ಬಿಡಬೇಕು. ಸಚಿವ ಎಂ.ಟಿ.ಬಿ. ನಾಗರಾಜ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿದ್ದು ತಪ್ಪಾಗಿದೆ ಎಂದು ಈಗ ಪಶ್ಚಾತಾಪ ಪಡುತ್ತಿದ್ದಾರೆ. ಬಿಜೆಪಿ ನರಕ ಎಂದು ಎಂಟಿಬಿಯವರಿಗೆ ಈಗ ತಿಳಿದಿದೆ. ಕಾಂಗ್ರೆಸ್ ಬಿಟ್ಟೋದವರನ್ನು ವಾಪಸ್ ಕರೆದುಕೊಳ್ಳುವ ಕುರಿತು ಮುಖಂಡರಾದ ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ ಸೇರಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ