ತರಾತುರಿಯಲ್ಲಿ ಕ್ರಿಯಾಯೋಜನೆ ಅನುಮೋದನೆ: ಆರೋಪ
Team Udayavani, Jun 6, 2019, 2:45 PM IST
ಕನಕಗಿರಿ: ಪಟ್ಟಣ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಸದಸ್ಯರು ಸಭೆ ನಡೆಸಿದರು.
ಕನಕಗಿರಿ: ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಶಾಸಕ ಬಸವರಾಜ ದಢೇಸುಗೂರು ಅವರು ಮುಖ್ಯಮಂತ್ರಿ ವಿಮೋಚನಾ ನಿಧಿಯಡಿ 2018-19ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನವನ್ನು ಸದಸ್ಯರ ಗಮಕ್ಕೆ ತರದೆ ಮೇ 24ರಂದು ಶಾಸಕರ ಅಧ್ಯಕ್ಷತೆಯಲ್ಲಿ ಪಪಂಯಲ್ಲಿ ಕ್ರಿಯಾ ಯೋಜನೆ ಮಾಡಿದ್ದಾರೆ. ತರಾತುರಿಯಲ್ಲಿ ಚುನಾವಣೆ ನೀತಿ ಸಂಹಿತೆಯಿರುವಾಗ ಕ್ರಿಯಾ ಯೋಜನೆ ಅವಸರವೇನಿತ್ತು ಎಂದು ಪಪಂ ಕಾಂಗ್ರೆಸ್ ಸದಸ್ಯ ಶರಣಪ್ಪ ಭತ್ತದ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಬಂದಿರುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸದಸ್ಯರ ಗಮನಕ್ಕೆ ತರದೇ ಕ್ರಿಯಾ ಯೋಜನೆ ಮಾಡದಿರುವುದು ಸರಿಯಲ್ಲ. ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಏಕ ಪಕ್ಷೀಯವಾಗಿ ಶಾಸಕರು ಈ ರೀತಿ ಮಾಡಿರುವುದು ಖಂಡನೀಯ. ಸಭೆ ಕರೆದು ಜೂ. 4ರಂದು ಕ್ರಿಯಾ ಯೋಜನೆ ವಿರುದ್ಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪಪಂ ಸದಸ್ಯರಾದ ಕಾಂಗ್ರೆಸ್ ಹುಲುಗಪ್ಪ ವಾಲೇಕಾರ, ರವಿ ಭಜಂತ್ರಿ, ಮಂಜುನಾಥ ಗಡಾದ್, ಸೈಯದ್ ಮಹ್ಮದ್ ಪಾಷಾ, ಹುಸೇನಸಾಬ್ ಸುಳೇಕಲ್, ಖಾಜಾ ಮೈನುದ್ದೀನ್, ಇಬ್ರಾಹಿಂಸಾಬ್, ಪರಸಪ್ಪ ಚೌಡ್ಕಿ, ಕನಕದಾಸ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
MUST WATCH
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ