ಜನರ ಸೇವೆ, ದೇವರ ಸೇವೆಯಿದ್ದಂತೆ: ಅಣ್ಣಾ ಹಜಾರೆ
Team Udayavani, Jan 6, 2018, 3:56 PM IST
ಕೊಪ್ಪಳ: ಜನರ ಸೇವೆಯು ದೇವರ ಸೇವೆಯಿದ್ದಂತೆ. ಇಂದಿನ ಯುವ ಜನಾಂಗದಲ್ಲಿ ಜನರ ಸೇವೆ ಮಾಡಬೇಕು ಎನ್ನುವ ಭಾವನೆ ಮೂಡಬೇಕು. ನನ್ನ ಜನ, ನನ್ನ ದೇಶ ಎನ್ನುವ ಮನೋಭಾವನೆ ಎಲ್ಲರಲ್ಲೂ ಮೂಡಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಯುವ ಜನಾಂಗಕ್ಕೆ ಸಲಹೆ ನೀಡಿದರು.
ನಗರದ ಕೈಲಾಸ ಮಂಟಪದಲ್ಲಿ ಬುಧವಾರ ಸಂಜೆ ಅನುಭಾವಿಗಳ ಅಮೃತ ಚಿಂತನ ಗೋಷ್ಠಿಯಲ್ಲಿ ಭಕ್ತ ಸಮೂಹವನ್ನುದ್ದೇಶಿಸಿ ಅವರು ಮಾತನಾಡಿದರು. ರೈತರ ಪ್ರಮುಖ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಇದೇ ಮಾ.23ರಿಂದ ದೆಹಲಿಯ ರಾಮಲೀಲಾ ಮಂದಿರದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ.
ದೇಶದ ರೈತರು ತೀವ್ರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ರೈತರು ದೇಶದ ಬೆನ್ನೆಲುಬು ಎಂದು ಹೇಳಿಕೊಳ್ಳುವ ಈ ದೇಶದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆಯಿಲ್ಲದೆ ನಿತ್ಯ ಸಾಯುತ್ತಿದ್ದಾರೆ. ದೇಶದ ಎಲ್ಲ ರೈತರು ಸಾಲದಿಂದ ಬಳಲುತ್ತಿದ್ದಾರೆ.
ನಮ್ಮದು ಕೃಷಿ ಪ್ರಧಾನವಾದ ದೇಶವಾದರೂ ಸಹಿತ ರೈತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ನಾವು ಸ್ಪಂದಿಸಬೇಕಿದೆ. ರೈತರ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟು ಹೋರಾಟ ರೂಪಿಸಲಾಗುತ್ತಿದೆ ಎಂದರು.
ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಹೋರಾಟದ ಕುರಿತು ಚರ್ಚಿಸಲಾಗಿದೆ. ನಮ್ಮ ಹೋರಾಟಕ್ಕೆ ಕರ್ನಾಟಕದಲ್ಲಿ ಸಂಪೂರ್ಣ ಬೆಂಬಲವಿದೆ.
ಯುವಕರು ತಮ್ಮ ಗ್ರಾಮ, ನಾಡು ಹಾಗೂ ದೇಶಾಭಿಮಾನ ಮೆರೆಯಬೇಕಾಗಿದೆ. ದುಶ್ಚಟಗಳಿಂದ ದೂರವಿರಬೇಕು. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ನಾವೆಲ್ಲ ಹೋರಾಟಕ್ಕಿಳಿಯಬೇಕಿದೆ ಎಂದರು. ಆನಂದ ನಮಗೆ ಎಲ್ಲಿಯೂ ಸಿಗುವುದಿಲ್ಲ. ಆಂತರಿಕವಾಗಿಯೇ ನಮಗೆ ಆನಂದ ಸಿಗುತ್ತದೆ.
ಆದರೆ ಅದನ್ನು ನಾವು ಕಂಡುಕೊಳ್ಳಬೇಕಿದೆ. ಜೀವನದಲ್ಲಿ ಪ್ರತಿಯೊಬ್ಬರು ಶುದ್ಧ ಆಚಾರ- ವಿಚಾರದ ಅಂಶಗಳನ್ನು ಮೈಗೂಡಿಸಿಕೊಂಡರೆ ಜಗತ್ತನ್ನೆ ಗೆಲ್ಲಬಹುದು. ಅಲ್ಲದೆ, ಪ್ರತಿವೊಬ್ಬರು ಸ್ವತ್ಛತೆಗೆ ಹೆಚ್ಚಿನ ಆಧ್ಯತೆ ನೀಡುವ ಜೊತೆಗೆ ತಮ್ಮ ಗ್ರಾಮಗಳನ್ನು ಸಾರಾಯಿ ಮುಕ್ತ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ