ಜಿಲ್ಲಾದ್ಯಂತ ಕೋವಿಡ್‌ ಲಸಿಕಾ ಜಾಗೃತಿ


Team Udayavani, Mar 17, 2021, 4:50 PM IST

ಜಿಲ್ಲಾದ್ಯಂತ ಕೋವಿಡ್‌ ಲಸಿಕಾ ಜಾಗೃತಿ

ಕೊಪ್ಪಳ: ಬೆಟಗೇರಿ ಗ್ರಾಮದಲ್ಲಿ ವೃದ್ಧರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಡಂಗೂರ ಬಾರಿಸಿದ ಗ್ರಾಮ ಸೇವಕ.

ಕೊಪ್ಪಳ: ಕೋವಿಡ್ ಮಹಾಮಾರಿ ನಿಯಂತ್ರಿಸಲು ಸರ್ಕಾರ ಕಟಿಬದ್ಧವಾಗಿದ್ದು, 2ನೇ ಹಂತದಲ್ಲಿಲಸಿಕಾ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರು ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಳ್ಳಿ ಹಳ್ಳಿಯಲ್ಲೂ ಡಂಗೂರ ಹೊಡೆಸಿ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸುತ್ತಿದೆ.

ಜಿಲ್ಲೆಯಲ್ಲಿ ಒಂದೆಡೆ ಕೋವಿಡ್‌ ಆತಂಕ ಮರೆಯಾಗುತ್ತಿದ್ದರೆ ಇನ್ನೊಂದೆಡೆ ಎರಡನೇ ಅಲೆಎದುರಾಗುವ ಸಣ್ಣ ಆತಂಕ ಕಾಣಿಸಿಕೊಳ್ಳುತ್ತಿದೆ.ಈ ಮಧ್ಯೆಯೂ ಜಿಲ್ಲಾದ್ಯಂತ ಮೊದಲ ಹಂತದಲ್ಲಿ11 ಸಾವಿರ ಜನರಿಗೆ ಕೋವಿಡ್‌ ಲಸಿಕೆ ಹಾಕಿಸಲು ಯೋಜನೆ ರೂಪಿಸಿ ಶೇ. 80ರಷ್ಟು ಜನರಿಗೆ ಲಸಿಕೆ ಹಾಕುವಲ್ಲಿ ಯಶಸ್ವಿಯಾಗಿದೆ.

ಆದರೆ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲು 2ನೇ ಹಂತದ ಅಭಿಯಾನ ಆರಂಭವಾಗಿದ್ದು, ಜಿಲ್ಲಾಡಳಿತವು ಈ ಕುರಿತಂತೆ ಅಧಿಕಾರಿಗಳ ಸಭೆನಡೆಸಿ ಜನರಲ್ಲಿ ಜಾಗೃತಿ ಮೂಡಿಸಿ ಲಸಿಕೆ ಬಗ್ಗೆಜನರಲ್ಲಿ ಇರುವ ಭಯ ಹೋಗಲಾಡಿಸುವಂತೆಸೂಚನೆ ನೀಡಿದೆ. ಹಾಗಾಗಿ ಪ್ರತಿ ಹಳ್ಳಿಯಲ್ಲೂವೃದ್ಧರು ಲಸಿಕೆ ಪಡೆಯುವಂತೆ ಮಾಡಲು ಆಶಾ,ಅಂಗನವಾಡಿ ಕಾರ್ಯಕರ್ತೆಯರ ಮೂಲಕಜಾಗೃತಿ ಮೂಡಿಸುವ ಜೊತೆಗೆ ಡಂಗೂರ ಸಾರಿ ಎಚ್ಚರಿಸ ಲಾಗುತ್ತಿದೆ. ಪ್ರತಿ ಹಳ್ಳಿಗಳಲ್ಲಿ ಗ್ರಾಪಂವ್ಯಾಪ್ತಿಯ ನೀರಗಂಟಿಗಳು, ಸ್ವಯಂ ಸೇವಕರುಹಳ್ಳಿಗಳಲ್ಲಿ ಡಂಗೂರ ಸಾರಿ, ವೃದ್ಧರು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ತಮ್ಮಆರೋಗ್ಯ ತಪಾಸಣೆ ಮಾಡಿಸಿಕೊಂಡು ಬಳಿಕ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ತಿಳಿಸುತ್ತಿದ್ದಾರೆ.

ಲಸಿಕೆ ಬಗ್ಗೆ ಯಾವುದೇ ಆತಂಕ ಪಡೆಯುವ ಅಗತ್ಯವಿಲ್ಲ. ಜನಪ್ರತಿನಿಧಿಗಳು ಅಧಿಕಾರಿಗಳು ಸೇರಿ ಗಣ್ಯಾತೀತರು ಲಸಿಕೆ ಹಾಕಿಸಿಕೊಂಡಿದ್ದಾರೆ. ಭಯವಿಲ್ಲದೇ ಲಸಿಕೆ ಪಡೆದು ಕೊರೊನಾ ದೂರಮಾಡಿ ಎಂದು ಜಿಲ್ಲಾಡಳಿತ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

60 ವರ್ಷ ಮೇಲ್ಪಟವರು ತಪ್ಪ ದೇ ಲಸಿಕೆ ಪಡೆಯಿರಿ :

ಕುಷ್ಟಗಿ: ಗ್ರಾಮೀಣ ಪ್ರದೇಶ 60 ವರ್ಷ ಮೇಲ್ಪಟ್ಟವರನ್ನು ಕೋವಿಶಿಲ್ಡ್‌ಲಸಿಕೆ ಹಾಕಲು ಹತ್ತಿರದ ಸರ್ಕಾರಿಆಸ್ಪತ್ರೆಗೆ ಕರೆ ತರಲು ಶಾಲಾ ಬಸ್‌ಬಳಸಿಕೊಳ್ಳುವ ಚಿಂತನೆ ನಡೆಸಲಾಗಿದೆಎಂದು ತಹಶೀಲ್ದಾರ್‌ ಎಂ. ಸಿದ್ದೇಶ ಹೇಳಿದರು.

ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕುಆಸ್ಪತ್ರೆ ಸೇರಿದಂತೆ ತಾಲೂಕಿನ 11ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಲಸಿಕೆ ಹಾಕಲಾಗುತ್ತಿದೆ. 60ವರ್ಷ ಮೇಲ್ಪಟ್ಟ 18 ಸಾವಿರ ಜನರಿದ್ದು,ಸದ್ಯ 1 ಸಾವಿರ ಜನರಿಗೆ ಲಸಿಕೆ ಹಾಕಲಾಗಿದೆ.

ಈ ಹಿನ್ನೆಲೆಯಲ್ಲಿ ನಿಗದಿತ ಗುರಿ ತಲುಪುವ ಉದ್ದೇಶದ ಹಿನ್ನೆಲೆಯಲ್ಲಿಗ್ರಾಮೀಣ ಪ್ರದೇಶದಲ್ಲಿ 60 ವರ್ಷದ ಮೇಲ್ಪಟ್ಟವರನ್ನು ಹತ್ತಿರದಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಕರೆತಂದು ಲಸಿಕೆ ನೀಡು ಅರ್ಧ ಗಂಟೆನಿಗಾ ಘಟಕದಲ್ಲಿರಿಸಲಾಗುವುದು. ನಂತರ ಅವರ ಗ್ರಾಮಕ್ಕೆಕರೆದೊಯ್ಯುವ ವ್ಯವಸ್ಥೆಮಾಡಲಾಗುವುದು ಎಂದರು.

ನೋಡಲ್‌ ಅಧಿಕಾರಿ ಡಾ| ಮಹೇಶ ಮಾತನಾಡಿ, ಮಹಾರಾಷ್ಟ್ರದಲ್ಲಿಕೋವಿಡ್‌-19 ಎರಡನೇ ಅಲೆ ತೀವ್ರ ಗೊಳ್ಳುತ್ತಿದೆ. ಇದರಿಂದ ರಕ್ಷಣೆಪಡೆಯಲು ಕೋವಿಶಿಲ್ಡ್‌ ಲಸಿಕೆ ನಮ್ಮಲ್ಲಿರುವ ಅಸ್ತ್ರ. 60 ವರ್ಷ ಮೇಲ್ಟಟ್ಟ ಹಾಗ ಬಿಪಿ, ಸಕ್ಕರೆ ಕಾಯಿಲೆಯಿಂದ ಬಳಲುವ 45ರಿಂದ 60 ವರ್ಷದವರಿಗೆ ಹಾಗೂ 60 ಮೇಲ್ಟಟ್ಟ ವೃದ್ಧರನ್ನು ಸುರಕ್ಷಿತವಾಗಿಡಲು ಲಸಿಕೆ ಹಾಕಲಾಗುತ್ತಿದೆ.

ಕಳೆದ ಜನವರಿ 16ರಿಂದ ಲಸಿಕೆ ಹಾಕಲಾಗುತ್ತಿದೆ. ಆರಂಭದಲ್ಲಿ ಕೋವಿಡ್ ವಾರಿಯರ್ಸ್‌, ಫ್ರಂಟ್‌ ಲೈನ್‌ ವರ್ಕರ್ಸ್‌ಗೆ ಮಾತ್ರ ಲಸಿಕೆ ಹಾಕಲಾಗಿದೆ. ಇದೀಗ ಮೂರನೇಹಂತದ ವ್ಯವಸ್ಥೆಯಲ್ಲಿ ಕೊಪ್ಪಳಜಿಲ್ಲೆಯಲ್ಲಿ 1,03,580 ಗುರಿ ಇದೆ.ಇದರಲ್ಲಿ ನಿಗದಿತ ಗುರಿ ಸಾಧಿ ಸಲಾಗಿಲ್ಲ.ರಾಜ್ಯಮಟ್ಟದಲ್ಲೂ ಈ ಸಾಧನೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚುಜನರನ್ನು ಸಂಪರ್ಕಿಸಿ ಆದಷ್ಟು ಬೇಗನೆವೃದ್ಧರು, ಸಹ ಅಸ್ವಸ್ಥ ರೋಗಿಗಳಿಗೆ,ಎಲ್ಲರಿಗೂ ಲಸಿಕೆ ಹಾಕಲಾಗುತ್ತದೆ ಎಂದರು.

ಟಾಪ್ ನ್ಯೂಸ್

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.