ಕೆಲಸದ ಒತ್ತಡದಲ್ಲಿ ಆರೋಗ್ಯ ನಿರ್ಲಕ್ಷ್ಯ ಸಲ್ಲ: ಬೆನ್ನೂರ


Team Udayavani, Dec 13, 2018, 3:28 PM IST

13-december-17.gif

ಯಲಬುರ್ಗಾ: ಗ್ರಾಮೀಣ ಭಾಗದ ಜನತೆ ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಪರಿಣಾಮ ರೋಗ ರುಜಿನಗಳು ಆವರಿಸುತ್ತಿವೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಹೇಳಿದರು.

ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಜನಜಾಗೃತಿ ಕಲಾರಂಗ ಸಂಸ್ಥೆ ಕುಷ್ಟಗಿ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜನಜಾಗೃತಿ ನಿಮಿತ್ಯ ಏರ್ಪಡಿಸಲಾಗಿದ್ದ ಬೀದಿನಾಟಕ ಹಾಗೂ ಜಾನಪದ ಗೀತೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಜನತೆ ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಪರಿಣಾಮ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಅನಾರೋಗ್ಯ ಪೀಡಿತರಾಗಿ ಸಮಸ್ಯೆ ಎದುರಿಸುವ ಮುನ್ನ ಮುನ್ನೆಚ್ಚರಿಕೆ ವಹಿಸಿದರೆ ಹಣದ ಜತೆಗೆ ಸಮಯವನ್ನು ಉಳಿಸಬಹುದು. ಬಹುತೇಕ ರೋಗಗಳು ನಾವು ಸೇವಿಸುವ ಆಹಾರ ಹಾಗೂ ನೀರಿನಿಂದ ಹರಡುತ್ತವೆ ಎಂದರು. ಎಪಿಎಂಸಿ ಮಾಜಿ ಸದಸ್ಯ ಶಿವಸಂಗಪ್ಪ ಹುಚನೂರು ಮಾತನಾಡಿ, ಗ್ರಾಮೀಣ ಭಾಗದ ಜನತೆ ಕಾಲಕಾಲಕ್ಕೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕಿರುವುದು ಅತ್ಯಗತ್ಯವಾಗಿದೆ. ರೋಗಗಳ ಬಗ್ಗೆ ಅರಿವಿಲ್ಲದೆ ಕೊನೆಯ ಹಂತದಲ್ಲಿ ಪ್ರಾಣವನ್ನೇ ಕಳೆದುಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅದಕ್ಕೆ ಅವಕಾಶ ನೀಡಬಾರದು, ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಗಾಗ ಹಮ್ಮಿಕೊಳ್ಳಬೇಕು ಎಂದರು.

ಗ್ರಾಪಂ ಸದಸ್ಯ ಚನ್ನಪ್ಪ ಗೇದಗೇರಿ, ಜಿಲ್ಲಾ ತಾಯ್ತನ ರಕ್ಷಣಾ ವೇದಿಕೆಯ ಸದಸ್ಯ ಆದಪ್ಪ ಮುರಡಿ, ಮುಖಂಡರಾದ ಬಸವಂತಪ್ಪ ಕುದರಿಮೋತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿ ಮಧು ಎಸ್‌.ಎಂ., ಆರೋಗ್ಯಮಿತ್ರ ಗೋವಿಂದರಾವ್‌ ಮರಾಠೆ, ಆರೋಗ್ಯ ಸಹಾಯಕಿ ಪಿ. ಸುಶೀಲಾ, ಆರೋಗ್ಯ ಸಹಾಯಕ ಮಲ್ಲಯ್ಯ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು, ಶಾಲಾ ಮಕ್ಕಳು ಹಾಜರಿದ್ದರು. ಕಲಾ ತಂಡದವರು ತಾಯಿ ಮರಣ, ಶಿಶು ಮರಣ ಕಡಿಮೆ ಮಾಡುವ ಉದ್ದೇಶದಿಂದ ಬೀದಿ ನಾಟಕ ಹಾಗೂ ಜಾನಪದ ಗೀತೆಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.