ಬಯಲು ಬಹಿರ್ದೆಸೆ ಮುಕ್ತಿಗೆ ಜಾಗೃತಿ ಮೂಡಿಸಿ

ಶುಚಿತ್ವಕ್ಕೆ ಸಂಬಂಧಿಸಿದ ಕಾನೂನು ಕಾರ್ಯ ರೂಪಕ್ಕೆ ತರುವುದು ಪಿಡಿಒ ಹೊಣೆ  

Team Udayavani, May 19, 2022, 2:07 PM IST

9

ಕೊಪ್ಪಳ: ಬಯಲು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿಸಲು ಪಿಡಿಒಗಳು ತಮ್ಮ ಅಧಿಕಾರ ಬಳಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ದೇವೇಂದ್ರ ಪಂಡಿತ್‌ ಹೇಳಿದರು.

ಜಿಪಂ, ಸ್ವತ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಇಒ, ಪಿಡಿಒ, ಕಾರ್ಯದರ್ಶಿಗಳಿಗೆ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆ ಕುರಿತು ಕಾನೂನು ಸಲಹೆಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಾಯತ್‌ ರಾಜ್‌ ಕಾಯ್ದೆ 1993ರಲ್ಲಿ ಪಿಡಿಒಗಳಿಗೆ ಗ್ರಾಮಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಅಧಿಕಾರಗಳನ್ನು ನೀಡಲಾಗಿದೆ. ಕಾಯ್ದೆಯನ್ನು ಸರಿಯಾಗಿ ಓದಿ, ಅರ್ಥೈಸಿಕೊಂಡು ಅದರಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದರೆ ಗ್ರಾಮಗಳ ಅಭಿವೃದ್ಧಿ ಕಷ್ಟವೇನಲ್ಲ. ಅದರಂತೆ ಗ್ರಾಮಗಳ ಸ್ವಚ್ಛತೆ, ಸಮುದಾಯಿಕ ಹಾಗೂ ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮುಂತಾದ ಶುಚಿತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಾಂದರ್ಭಿಕವಾಗಿ ಕಾರ್ಯರೂಪಕ್ಕೆ ತರುವುದು ಪಿಡಿಒಗಳ ಜವಾಬ್ದಾರಿಯಾಗಿದೆ ಎಂದರು.

ಗ್ರಾಮ ಸಭೆ, ಸ್ಥಾಯಿ ಸಮಿತಿಗಳ ರಚನೆ ಇನ್ನೂ ಹಲವಾರು ವಿಷಯಗಳನ್ನು ಕಾಯ್ದೆಯಲ್ಲಿ ತಿಳಿಯಬಹುದು. ಯಾವುದೇ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಮಲ ವಿಸರ್ಜನೆ ಮಾಡಿದರೆ ದಂಡ ಹಾಕಬಹುದು. ಗ್ರಾಮದಲ್ಲಿ ಮುಖ್ಯವಾಗಿ ಸ್ವಚ್ಛತೆ, ವೈಯಕ್ತಿಕ ಶೌಚಾಲಯ ಮತ್ತು ಸಮುದಾಯ ಶೌಚಾಲಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಜನರ ವರ್ತನೆಯಲ್ಲಿ ಬದಲಾವಣೆ ತರಬೇಕು. ಸಮುದಾಯ ಶೌಚಾಲಯಗಳಲ್ಲಿ ಸ್ತ್ರೀ-ಪುರುಷರಿಗೆ ಬೇರೆ ಬೇರೆ ಕಡೆ ಶೌಚಾಲಯ ನಿರ್ಮಾಣ ಮಾಡಬೇಕೆಂದರು.

ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ಮಾತನಾಡಿ, ಹಿಂದಿನ ವರ್ಷ ಚಿಲುಮೆ ಕಾರ್ಯಕ್ರಮದ ಮೂಲಕ ಶೌಚಾಲಯಗಳ ಬಳಕೆ ಕುರಿತು ಅನೇಕ ಜಾಗೃತಿ ಕಾರ್ಯಕ್ರಮ ಮಾಡಿದ್ದೇವೆ. ಹಾಗೇ ಮಹಿಳೆಯರ ವೈಯಕ್ತಿಕ ಸ್ವತ್ಛತೆ ಬಗ್ಗೆ ಜಾಗೃತಿ ಮೂಡಿಸಲು ಹೆಚ್ಚಿನ ಗಮನ ಹರಿಸಿದ್ದೇವೆ. ಘನ ಮತ್ತು ಒಣ ತ್ಯಾಜ್ಯ, ಹಸಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಾಣ ಮಾಡಿದ್ದೇವೆ. ಪ್ರತಿ ಗ್ರಾಪಂನಲ್ಲಿ ಪ್ರತಿದಿನ ರಸ್ತೆ, ಸಾರ್ವಜನಿಕ ಸ್ಥಳ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮದ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಇದರಿಂದ ಡೆಂಘೀ, ಚಿಕನ್‌ಗುನ್ಯಾ ದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳಬಹುದು. ಒಡಿಎಫ್‌ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದರು.

ವಕೀಲ ಹನುಮಂತರಾಯ ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಶರಣ ಬಸವರಾಜ, ಜಿಲ್ಲೆಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.