ದೃಷ್ಟಿ ತೆಗೆದರು…ತಮಟೆ ಬಾರಿಸಿದರು…!


Team Udayavani, Apr 3, 2020, 1:28 PM IST

ದೃಷ್ಟಿ ತೆಗೆದರು…ತಮಟೆ ಬಾರಿಸಿದರು…!

ಕೊಪ್ಪಳ: ಕೋವಿಡ್ 19 ವೈರಸ್‌ ನಿಯಂತ್ರಣಕ್ಕಾಗಿ ಜಿಲ್ಲೆ ಲಾಕ್‌ಡೌನ್‌ ಆಗಿದೆ. ದಯವಿಟ್ಟು ಯಾರೂ ಹೊರೆಗೆಸುತ್ತಾಡಬೇಡಿ ಎಂದು ಕೊಪ್ಪಳದ ಪೊಲೀಸ್‌ ತುಕಡಿ, ರಸ್ತೆಯಲ್ಲಿ ಅನಗತ್ಯವಾಗಿ ಬೈಕ್‌ನಲ್ಲಿ ಸುತ್ತಾಡುವವರಿಗೆ ತೆಂಗಿನಕಾಯಿಂದ ದೃಷಿ ತೆಗೆದು, ಹಲಗಿ ಬಾರಿಸುವ ಮೂಲಕ ಜಾಗೃತಿ ಮೂಡಿಸಿದರು.

ಜನರು ರಸ್ತೆಗಿಳಿಯದಂತೆ ತಡೆಯಲು ಪೊಲೀಸರು ಪ್ರತಿದಿನ ಒಂದಿಲ್ಲೊಂದು ವಿಭಿನ್ನ ಹಾಗೂ ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. ಗುರುವಾರ ಕೊಪ್ಪಳದಲ್ಲಿ ಡಿಎಸ್‌ಪಿ ವೆಂಕಟಪ್ಪ ನಾಯಕ್‌ ನೇತೃತ್ವದಲ್ಲಿ ಬೈಕ್‌ ಸವಾರರಿಗೆ ಕಾಯಿ ಹಿಡಿದು ಅವರ ದೃಷ್ಟಿ ತೆಗೆದಂತೆ ಮಾಡಿ, ನಾಲ್ಕು ಸುತ್ತು ತಿರುವಿ ನೆಲಕ್ಕೆ ಕಾಯಿ ಹೊಡೆದು ಅವರನ್ನು ಮುಂದೆ ಹೋಗುವಂತೆ ಕಳುಹಿಸಿಕೊಟ್ಟು ಮುಜುಗುರಕ್ಕೆ ಒಳಗಾಗುವಂತೆ ಮಾಡಿದರು.

ಈ ಹಿಂದೆ ಮಹಿಳಾ ಪೊಲೀಸ್‌ ಪಡೆ ಲಾಠಿ ರುಚಿ ತೋರಿಸಿತ್ತು. ಲಾಠಿ ಏಟು ಬಿಳುತ್ತಿದ್ದಂತೆ ಹಲವರು ಬೈಕ್‌ ನಲ್ಲಿ ರಸ್ತೆಗೆ ಇಳಿಯಲೇ ಇಲ್ಲ. ನಂತರ ಬಸ್ಕಿ ಹೊಡೆಸುವುದು, ರಸ್ತೆಯಲ್ಲಿನ ಕಸ ಗೂಡಿಸುವ, ಠಾಣೆಯನ್ನು ಸ್ವತ್ಛ ಮಾಡಿಸುವುದು ಅಲ್ಲದೇ, ಮಹಿಳಾ ಪೊಲೀಸರು ಬೈಕ್‌ ಸವಾರರಿಗೆ ತಿಲಕವಿಟ್ಟು ಮಂಗಳಾರತಿ ಮಾಡಿ ಮುಜುಗುರಕ್ಕೆ ಒಳಗಾಗುವಂತೆ ಮಾಡಿದ್ದರು.

ಗ್ರಾಮೀಣ ಠಾಣೆ ಸಿಪಿಐ ರವಿ ಉಕ್ಕುಂದ, ನಗರ ಠಾಣೆ ಪಿಐ ಮೌನೇಶ್ವರ ಪಾಟೀಲ್‌ ಸೇರಿ ಪೇದೆಗಳು ರಸ್ತೆಯಲ್ಲಿ ಸುತ್ತಾಡುವ ಬೈಕ್‌ ಸವಾರರನ್ನು ತಡೆದು ಕಾಯಿ ಇಳೆತೆಗೆದು ಒಡೆಯುತ್ತಿದ್ದರು. ಸಾಮಾನ್ಯವಾಗಿ ಈ ಪದ್ಧತಿ ಗ್ರಾಮೀಣ ಭಾಗದಲ್ಲಿ ಹೆಚ್ಚಿರುತ್ತದೆ. ಹಬ್ಬ, ಹರಿದಿನಗಳಲ್ಲಿ ದೃಷ್ಟಿ ತೆಗೆಯಲು ಕಾಯಿ ಒಡೆಯುತ್ತಾರೆ.

ಹಲಗಿ ಬಾರಿಸಿ ಜಾಗೃತಿ: ಅಶೋಕ ವೃತ್ತದಿಂದ ಗಡಿಯಾರ ಕಂಬದವರೆಗೂ ಹಲಗಿ ಬಾರಿಸುವ ಮೂಲಕ ಕೋವಿಡ್ 19 ನಿಯಂತ್ರಣಕ್ಕೆ ಎಲ್ಲರ ಸಹಕಾರವೂ ಅಷ್ಟೆ ಮುಖ್ಯವಾಗಿದೆ. ದಯವಿಟ್ಟು ಏ. 14ರವರೆಗೂ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಇರಿ. ರೋಗ ದೂರ ಮಾಡಿ ಎಂದು ಪೊಲೀಸರು ಸೇರಿದಂತೆ ಯುವಕರು ಹಲಿಗೆ ಬಾರಿಸುವ ಮೂಲಕ ಜಾಗೃತಿ ಮೂಡಿಸಿದರು.

79 ಜನರ ಮೇಲೆ ನಿಗಾ: ಜಿಲ್ಲಾಡಳಿತವು 79 ಜನರ ಮೇಲೆ ನಿಗಾ ಇರಿಸಿದೆ. 79 ಜನರು 14 ದಿನ ಪೂರೈಸಿದ್ದು, 52 ಜನರು 14 ದಿನ ಐಸೋಲೇಟೆಡ್‌ ಪೂರೈಸಿದ್ದಾರೆ. 34 ಜನರು 28 ದಿನಗಳ ಕಾಲ ಐಸೋಲೇಟೆಡ್‌ ಪೂರೈಸಿದ್ದಾರೆ. ಮೂರು ಜನರ ಗಂಟಲು ದ್ರವ್ಯವನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದು, ಮೂರು ನೆಗಟಿವ್‌ ವರದಿ ಎಂದು ಬಂದಿವೆ. ಇನ್ನೂ 27 ಜನರ ಮೇಲೆ ಮನೆಯಲ್ಲೇ ನಿಗಾ ಇರಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.