ನವಲಿ ಗ್ರಾಮದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
Team Udayavani, Jul 6, 2019, 4:17 PM IST
ಕನಕಗಿರಿ: ನವಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು.
ಕನಕಗಿರಿ: ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ಗ್ಲೋಬಲ್ ಎಡ್ಜ್ ಸಂಸ್ಥೆಯು ಕಲಿಕೋಪಕರಣ ವಿತರಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದು ಭಾರತೀಯ ಪುರತತ್ವ ಇಲಾಖೆ ನಿವೃತ ಅಧಿಕಾರಿ ಹಾಗೂ ಸಂಸ್ಥೆಯ ಪ್ರತಿನಿಧಿ ಆನಂದ ತೀರ್ಥ ಹೇಳಿದರು.
ಸಮೀಪದ ನವಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಕ್ಕಳಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆ ಮಕ್ಕಳಲ್ಲಿ ಹೆಚ್ಚಿನ ಸೃಜನಶೀಲತೆ ಇರುತ್ತದೆ. ಅವರು ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿ ಎಂದರು.
ನಂತರ ಉಪನ್ಯಾಸಕ ಪವನ ಕುಮಾರ ಗೂಂಡೂರು ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳ ಭೌತಿಕ ವಿಕಾಸದಲ್ಲಿ ಸಂಘ ಸಂಸ್ಥೆಗಳು ತೊಡಗಬೇಕು. ಬೆಂಗಳೂರಿನಿಂದ ಗ್ಲೋಬಲ್ ಎಡ್ಜ್ ಸಂಸ್ಥೆಯು ನವಲಿಯಂತಹ ಹಿಂದುಳಿದ ಹಳ್ಳಿಗಳಿಗೆ ಬಂದು ಮಕ್ಕಳಿಗೆ ಬ್ಯಾಗ್, ಕಿಟ್ ನೀಡುತ್ತಿರುವುದು ಶ್ಲಾಘನೀಯ. ಹಳ್ಳಿಯ ಮಕ್ಕಳಿಗೆ ಸರಿಯಾದ ಪ್ರೋತ್ಸಾಹ ಸಿಕ್ಕರೆ ಉನ್ನತ ಸಾಧನೆ ಮಾಡುತ್ತಾರೆ. ಹಳ್ಳಿ ಮಕ್ಕಳು ಬಹುಮುಖ ಪ್ರತಿಭೆ ಉಳ್ಳವರು ಎಂದರು. ಇದೇ ವೇಳೆ ಸಂಸ್ಥೆಯವರಿಗೆ ಶಾಲೆಯವತಿಯಿಂದ ಸನ್ಮಾನಿಸಲಾಯಿತು.
ವಿಷ್ಣು ತೀರ್ಥ ಆದಾಪುರ, ಮುಖ್ಯ ಶಿಕ್ಷಕ ಕನಕಪ್ಪ ದಾಸರ, ವಿಜಯಲಕ್ಷ್ಮೀ, ವೆಂಕಟೇಶ ನವಲಿ, ಶಿಕ್ಷಕ ಪ್ರಶಾಂತ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ