ವಿಜಯನಗರ ಕಾಲುವೆ ದುರಸ್ತಿಗೆ ಸ್ಮಶಾನದ ಮಣ್ಣು ಸಾಗಾಣಿಕೆಗೆ ಬಂಡಿಬಸಪ್ಪ ಗ್ರಾಮಸ್ಥರಿಂದ ವಿರೋಧ
Team Udayavani, Jun 28, 2020, 5:55 PM IST
ಗಂಗಾವತಿ: ವಿಜಯನಗರ ಕಾಲುವೆ ದುರಸ್ತಿ ಕಾರ್ಯಕ್ಕೆ ಬಂಡಿಬಸಪ್ಪ ಕ್ಯಾಂಪ್ ಸ್ಮಶಾನ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಸ್ಮಶಾನ ಒಟ್ಟು 2.17ಎಕರೆ ಪ್ರದೇಶವಿದ್ದು ಬಂಡಿ ಬಸಪ್ಪ ಕ್ಯಾಂಪ್ ಜನಸಂಖ್ಯೆ ಮೂರು ಸಾವಿರ ಇದೆ. ಸ್ಮಶಾನ ಸಣ್ಣದಿರುವ ಕಾರಣ ಇಲ್ಲಿ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದರಿಂದ ಗ್ರಾಮದ ಮೃತದೇಹಗಳನ್ನು ಸಂಸ್ಕಾರ ಮಾಡಲು ಸ್ಥಳದ ಅಭಾವ ಉಂಟಾಗುತ್ತದೆ.
ಜಿಲ್ಲಾಡಳಿತದ ಪರವಾನಿಗೆ ಇಲ್ಲದೇ ಕಾಲುವೆ ಕಾಮಗಾರಿ ಗುತ್ತಿಗೆ ಪಡೆದವರು ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದು ಜಿಲ್ಲಾಡಳಿತ ಕೂಡಲೇ ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ: ಸ್ಮಶಾನದ ಮಣ್ಣು ಅಕ್ರಮ ಸಾಗಾಣಿಕೆ ಕುರಿತು ಗ್ರಾಮಸ್ಥರು ತಹಸೀಲ್ದಾರ ಎಲ್.ಡಿ.ಚಂದ್ರಕಾಂತ ಅವರ ಗಮನಕ್ಕೆ ತಂದ ತಕ್ಷಣ ಅವರು ಗ್ರಾಮ ಲೆಕ್ಕಾಧಿಕಾರಿ ಅಸ್ಲಾಂ ಪಾಷಾ ಅವರನ್ನು ಸ್ಥಳಕ್ಕೆ ಕಳುಹಿಸಿದ್ದಾರೆ. ಸ್ಮಶಾನದ ಪಕ್ಕದಲ್ಲಿ ಸರಕಾರಿ ಜಾಗದಲ್ಲಿ ಮಣ್ಣನ್ನು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದು ಸ್ಮಶಾನ ಮತ್ತು ಸರಕಾರಿ ಜಾಗದ ಸರ್ವೆ ಮಾಡುವ ತನಕ ಮಣ್ಣು ಸಾಗಿಸುವುದನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಅಸ್ಲಾಂಪಾಷಾ ಉದಯವಾಣಿ ಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರಾಮು, ಬಸವರಾಜ ನಾಯಕ, ರವಿ.ವೈರಮಣಿ, ಬೂತೆಪ್ಪ, ಗುನ್ನೆಪ್ಪ,ಕೃಷ್ಣಾ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!