ಡೆಂಘೀ ಜ್ವರ ತಡೆಗೆ ನಿಗಾ ವಹಿಸಿ
•ವಸತಿ ನಿಲಯಗಳಿಗೆ ಸೊಳ್ಳೆ ಪರದೆ ವಿತರಿಸಿ•ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಿ
Team Udayavani, Jul 27, 2019, 9:24 AM IST
ಕೊಪ್ಪಳ: ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ಸಭೆಯಲ್ಲಿ ಜಿಪಂ ಸಿಇಒ ರಘುನಂದನ್ ಮೂರ್ತಿ ಮಾತನಾಡಿದರು.
ಕೊಪ್ಪಳ: ಜಿಲ್ಲೆಯಲ್ಲಿ ಡೆಂಘೀ ಜ್ವರ ಬಾರದಂತೆ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಜಿಪಂ ಸಿಇಒ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಡೆಂಘೀ ವಿರೋಧಿ ಮಾಸಾಚರಣೆ-2019ರ ಅಂಗವಾಗಿ ನಡೆದ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಪಂ, ಬಾಪೂಜಿ ಸೇವಾ ಕೇಂದ್ರ, ಅಟಲ್ಜಿ ಸೇವಾ ಕೇಂದ್ರ, ಅಂಗನವಾಡಿ, ಶಾಲಾ ಕಾಲೇಜು ಹಾಗೂ ಜನನಿಬೀಡ ಸ್ಥಳಗಳಲ್ಲಿ ಡೆಂಘೀ ಜ್ವರದ ಲಕ್ಷಣಗಳು, ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಭಿತ್ತಿಪತ್ರ ಅಂಟಿಸಬೇಕು. ಕಾಲೇಜು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಹೆಚ್ಚಾಗಿ ಬಳಸುವುದರಿಂದ ಆ ಮಾಧ್ಯಮವನ್ನು ಜಾಗೃತಿ ಮೂಡಿಸಲು ಬಳಸಿಕೊಳ್ಳಿ. ಡೆಂಘೀ ವಿರೋಧಿ ಮಾಸಾಚರಣೆ ಕುರಿತ ಜಾಥಾ ಮಾತ್ರವಲ್ಲದೇ ವಿವಿಧ ಇಲಾಖೆಗಳಿಂದ ಹಮ್ಮಿಕೊಳ್ಳುವ ವಿವಿಧ ಜಾಥಾಗಳಲ್ಲಿ ಡೆಂಘೀ ಕುರಿತು ಜಾಗೃತಿ ಮೂಡಿಸುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದರು.
ಜಿಲ್ಲೆ ಈಗಾಗಲೇ ಮಲೇರಿಯಾ ಮುಕ್ತದತ್ತ ಸಾಗುತ್ತಿದೆ. ಅದರಂತೆ ಡೆಂಘೀ ಜ್ವರ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಪರಸ್ಪರ ಸಮನ್ವಯತೆಯಿಂದ ಮುನ್ನಡೆಯಬೇಕು. ಡೆಂಘೀ ಜಾಗೃತಿ ಕುರಿತು ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳಿಗೆ ಚರ್ಚಾ ಸ್ಪರ್ಧೆ, ಪ್ರಾರ್ಥನೆ ಸಮಯದಲ್ಲಿ ಡೆಂಘೀ ಕುರಿತು 5 ನಿಮಿಷಗಳ ಜಾಗೃತಿ ಭಾಷಣ ಏರ್ಪಡಿಸುವಂತೆ, ಶಾಲಾ ಸುತ್ತಲಿನ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ ಕ್ರಮಕೈಗೊಂಡು, ಸ್ವಚ್ಛತೆ ನಿರ್ವಹಿಸಲು ಸೂಚನೆ ನೀಡಬೇಕು. ವಸತಿ ಶಾಲೆಗಳ ಕಿಟಕಿಗಳಿಗೆ ಸೊಳ್ಳೆಗಳು ಪ್ರವೇಶವಾಗದಂತೆ ಪರದೆ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಬೇಕು. ಡೆಂಘೀ ಬಾಧಿತ ಪ್ರದೇಶಗಳಲ್ಲಿ ಧೂಮೀಕರಣ (ಫಾಗಿಂಗ್) ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಕೃಷಿ ಇಲಾಖೆ ಅಧಿಕಾರಿಗಳಿಂದ ಜಿಲ್ಲೆಯ ಕೃಷಿ ಹೊಂಡಗಳ ಮಾಹಿತಿ ಪಡೆದು ಕೃಷಿ ಹೊಂಡಗಳಲ್ಲಿ ಲಾರ್ವಾಹಾರಿ ಮೀನು ಬಿಡಬೇಕು. ಜಿಲ್ಲೆಯಲ್ಲಿ ಸ್ಥಳಾವಕಾಶದ ಲಭ್ಯತೆ ಅನುಸಾರ ಲಾರ್ವಾಹಾರಿ ಮೀನುಗಳ ಉತ್ಪಾದನೆ ಹಾಗೂ ಅಭಿವೃದ್ಧಿಗೆ ಮೀನಿನ ಹೊಂಡಗಳನ್ನು ನಿರ್ಮಿಸಬೇಕು ಮತ್ತು ಲಾರ್ವಾಹಾರಿ ಮೀನುಗಳನ್ನು ಅವಶ್ಯಕತೆ ಇರುವೆಡೆ ಬಳಸಬೇಕು. ಅನುಪಯುಕ್ತ ಮತ್ತು ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ನಗರದ ಸ್ವಚ್ಛತೆ, ಸೂಕ್ತ ಒಳಚರಂಡಿ ವ್ಯವಸ್ಥೆ, ನೀರು ಸರಬರಾಜು ಪೈಪ್ ಪರೀಕ್ಷಿಸುವುದು, ಅಲ್ಲಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸೊಳ್ಳೆಗಳ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ಸಿಂಪಡಿಸಬೇಕು. ರೋಗಗಳು ಉಲ್ಬಣವಾದ ಸಂದರ್ಭದಲ್ಲಿ ಒಳಾಂಗಣ ಧೂಮೀಕರಣ ಅಥವಾ ಒಳಾಂಗಣ ಕೀಟನಾಶಕಗಳನ್ನು ಸಿಂಪರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರಕಾಶ ಮಾತನಾಡಿ, ಡೆಂಘೀ ಜ್ವರವು ಈಡೀಸ್ ಸೊಳ್ಳೆಯಿಂದ ಹರಡುತ್ತದೆ. ಇದು ಹಗಲು ಹೊತ್ತಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಮಕ್ಕಳು, ಗರ್ಭಿಣಿಯರು ಹಾಗೂ ವಯಸ್ಸಾದವರಲ್ಲಿ ಈ ಜ್ವರದ ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತವೆ. ಸಾರ್ವಜನಿಕರು ಮನೆಯಲ್ಲಿ ಹಾಗೂ ಮನೆಯ ಸುತ್ತಲಿನ ಪ್ರದೇಶದಲ್ಲಿ ನೀರನ್ನು ಹೆಚ್ಚು ದಿನ ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಸಂಗ್ರಹಣಾಧಿಕಾರಿಗಳನ್ನು ಆಗಾಗ ಸ್ವಚ್ಛಗೊಳಿಸಬೇಕು. ನೀರು ಸಂಗ್ರಹವಾಗುವ ಅನುಪಯುಕ್ತ ವಸ್ತುಗಳಾದ ತೆಂಗಿನ ಕಾಯಿ ಚಿಪ್ಪು, ಅನುಪಯುಕ್ತ ಟೈರು, ಬಳಕೆ ಇಲ್ಲದ ನೀರಿನ ಟ್ಯಾಂಕ್ಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು ಎಂದರು.
ತೀವ್ರ ಮೈ-ಕೈ ನೋವು, ತಲೆನೋವು, ಕಣ್ಣಿನ ನೋವು ಈ ಜ್ವರದ ಲಕ್ಷಣವಾಗಿದ್ದು, ಯಾವುದೇ ಜ್ವರ ಕಾಣಿಸಿದರೂ ಕೂಡಲೇ ರಕ್ತಪರೀಕ್ಷೆ ಮಾಡಿಸಬೇಕು. ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗದ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ಕೃಷಿ ಹೊಂಡದಂತಹ ನೀರಿನ ಸಂಗ್ರಹದ ಅಗತ್ಯವಿರುವೆಡೆ ಗಪ್ಪಿ ಹಾಗೂ ಗ್ಯಾಂಬ್ಯೂಸಿಯಾ ಎಂಬ ಲಾರ್ವಾಹಾರಿ ಮೀನು ಬಿಡಲಾಗುತ್ತದೆ. ಈ ಮೀನುಗಳು ಸೊಳ್ಳೆಯು ಲಾರ್ವಾ ಹಂತದಲ್ಲಿರುವಾಗಲೇ ಅವನ್ನು ಭಕ್ಷಿಸುವುದರಿಂದ ಸೊಳ್ಳೆಗಳ ಉತ್ಪಾದನೆ ನಿಯಂತ್ರಿಸಬಹುದು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜಕುಮಾರ ಯರಗಲ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ಲಿಂಗರಾಜ ಸೇರಿದಂತೆ ಆರೋಗ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ