ಭಿಕ್ಷುಕರ ಕಾಟಕ್ಕೆ ರೋಸಿ ಹೋದ ಪ್ರವಾಸಿಗರು

ಅನ್ಯ ಊರುಗಳಿಂದ ಭಿಕ್ಷಾಟನೆಗಾಗಿ ಮಕ್ಕಳನ್ನು ತರುವ ಮಹಿಳೆಯರು ;ಪ್ರವಾಸಿಗರಿಗೆ ಮುಜುಗರವಾಗುವ ವರ್ತನೆ

Team Udayavani, Jul 25, 2022, 5:11 PM IST

16

ಗಂಗಾವತಿ: ತಾಲೂಕಿನ ಪ್ರಸಿದ್ಧ ಪ್ರವಾಸಿ ಯಾತ್ರಾ ಸ್ಥಳಗಳಲ್ಲಿ ಮಕ್ಕಳು ಮತ್ತು ಮಹಿಳೆಯರಿಂದ ಭಿಕ್ಷಾಟನೆ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಭಿಕ್ಷಾಟನೆಯನ್ನು ತಡೆಯುವಲ್ಲಿ ಮುಂದಾಗುತ್ತಿಲ್ಲ.

ಕಿಷ್ಕಿಂದಾ ಅಂಜನಾದ್ರಿ, ಪಂಪಾ ಸರೋವರ, ಆದಿಶಕ್ತಿ ದೇಗುಲಗಳಿಗೆ ಬರುವ ಪ್ರವಾಸಿಗರನ್ನು ಅಡ್ಡಗಟ್ಟಿ ಪ್ರವಾಸಿಗರಿಗೆ ಮುಜುಗರವಾಗುವ ರೀತಿಯಲ್ಲಿ ಹಣ ಕೊಡುವಂತೆ ಭಿಕ್ಷುಕರು ಪೀಡಿಸುತ್ತಿದ್ದರೂ ಅಲ್ಲಿರುವ ದೇಗುಲಗಳ ಸಿಬ್ಬಂದಿ ಕ್ರಮಕೈಗೊಳ್ಳುತ್ತಿಲ್ಲ. ಪ್ರವಾಸಿ ತಾಣಗಳಲ್ಲಿ ಭಿಕ್ಷಾಟನೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಭಿಕ್ಷಾಟನೆ ನಿಷೇಧವಿದ್ದರೂ ಶನಿವಾರ, ರವಿವಾರ ಮತ್ತು ಮಂಗಳವಾರ ಹುಣ್ಣಿಮೆ, ಅಮವಾಸ್ಯೆಯಂದು ನೂರಾರು ಭಿಕ್ಷುಕರು ಜಿಲ್ಲೆ ಮತ್ತು ಹೊಸಪೇಟೆ, ಕಂಪ್ಲಿ ಭಾಗದಿಂದ ಕಿಷ್ಕಿಂದಾ, ಅಂಜನಾದ್ರಿ ಬೆಟ್ಟ ಪ್ರದೇಶ ಹಾಗೂ ಸುತ್ತಲಿನ ಸ್ಥಳಗಳಿಗೆ ಬೆಳಗ್ಗೆ ಆಗಮಿಸಿ ಇಡೀ ದಿನ ಭಿಕ್ಷಾಟನೆ ನಡೆಸಿ ಸಂಜೆಗೆ 500ರಿಂದ 1000 ರೂ. ವರೆಗೆ ಹಣ ಸಂಗ್ರಹಿಸಿಕೊಂಡು ಹೋಗುತ್ತಿದ್ದು, ಭಿಕ್ಷಾಟನೆ ವೇಳೆ ಮಹಿಳೆಯರು ಮಕ್ಕಳನ್ನು ಎತ್ತಿಕೊಂಡು ಹಣ ನೀಡುವಂತೆ ಕೇಳುತ್ತಾರೆ. ಹಣ ಕೊಡದಿದ್ದರೆ ಕೊಡುವ ತನಕವೂ ಬಿಡದೇ ಪ್ರವಾಸಿಗರ ಹಿಂದೆ ದುಂಬಾಲು ಬೀಳುತ್ತಾರೆ.

ಪ್ರವಾಸಿ ತಾಣಗಳಲ್ಲಿ ಇತ್ತೀಚೆಗೆ ಭಿಕ್ಷಾಟನೆ ದಂಧೆ ಹೆಚ್ಚಾಗಿದ್ದು, ಭಿಕ್ಷೆ ಬೇಡುವವರನ್ನು ಸಂರಕ್ಷಣೆ ಮಾಡುವ ಕೇಂದ್ರ ಬಳ್ಳಾರಿಯಲ್ಲಿದ್ದು, ಇಂತಹ ಕೇಂದ್ರ ಕೊಪ್ಪಳ ಅಥವಾ ಗಂಗಾವತಿಯಲ್ಲೂ ರಾಜ್ಯ ಸರಕಾರ ಆರಂಭ ಮಾಡುವ ಮೂಲಕ ಭಿಕ್ಷೆ ಬೇಡುವವರನ್ನು ಸಂರಕ್ಷಣೆ ಮಾಡಿ ಆಶ್ರಯ ಕೇಂದ್ರದಲ್ಲಿರಿಸಿ ಅವರಿಗೆ ಊಟ, ವಸತಿ ಹಾಗೂ ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡಬೇಕಿದೆ.

ಸರಕಾರ ಭಿಕ್ಷಾಟನೆಯನ್ನು ನಿಷೇಧ ಮಾಡಿದ್ದರೂ ಕಿಷ್ಕಿಂದಾ ಅಂಜನಾದ್ರಿಯ ಸುತ್ತಲಿನ ಪ್ರವಾಸಿ ತಾಣಗಳಲ್ಲಿ ವ್ಯಾಪಕವಾದ ಭಿಕ್ಷಾಟನೆ ನಡೆಯುತ್ತಿದೆ. ಚಿಕ್ಕಮಕ್ಕಳನ್ನು ಕರೆದುಕೊಂಡು ಮಹಿಳೆಯರು ಇಲ್ಲಿಗೆ ಆಗಮಿಸಿ ಪ್ರವಾಸಿಗರ ಹತ್ತಿರ ಭಿಕ್ಷೆಗಾಗಿ ಪೀಡಿಸುತ್ತಾರೆ. ಇದರಿಂದ ಪ್ರವಾಸಿಗರಿಗೆ ಮುಜುಗರವಾಗುತ್ತಿದೆ. ಈ ಬಗ್ಗೆ ದೇವಾಲಯಗಳ ಆಡಳಿತಾಧಿಕಾರಿಗಳು ಕೂಡಲೇ ಕ್ರಮ ವಹಿಸುವ ಮೂಲಕ ಭಿಕ್ಷಾಟನೆ ತಪ್ಪಿಸಬೇಕಿದೆ. –ದೇವೆಂದ್ರ ಚಿಕ್ಕರಾಂಪುರ

ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಭಿಕ್ಷಾಟನೆ ಕುರಿತು ದೂರುಗಳಿದ್ದು, ಇಲ್ಲಿಗೆ ದೇಶ, ವಿದೇಶದ ಪ್ರವಾಸಿಗರು ಆಗಮಿಸುವ ಸಂದರ್ಭದಲ್ಲಿ ಭಿಕ್ಷಾಟನೆ ಮಾಡುವವರು ಹಣ ನೀಡುವಂತೆ ಪೀಡಿಸುವ ಮೂಲಕ ಮುಜುಗರ ಉಂಟು ಮಾಡುವ ಸಂಭವವಿದೆ. ದೇವಾಲಯಗಳ ಸಿಬ್ಬಂದಿಗೆ ಭಿಕ್ಷಾಟನೆ ತಡೆಯುವಂತೆ ಸೂಚನೆ ನೀಡಲಾಗಿದೆ. ಭಿಕ್ಷುಕರು ಮತ್ತು ನಿರ್ಗತಿಕರ ಕೇಂದ್ರಕ್ಕೂ ಮಾಹಿತಿ ನೀಡಿ ಇಲ್ಲಿರುವ ಭಿಕ್ಷುಕರು, ನಿರ್ಗತಿಕರನ್ನು ಸಂರಕ್ಷಣೆ ಮಾಡುವಂತೆ ಕೋರಲಾಗುತ್ತದೆ.  –ಬಸವಣ್ಣೆಪ್ಪ ಕಲಶೆಟ್ಟಿ, ಸಹಾಯಕ ಆಯುಕ್ತರು, ಕೊಪ್ಪಳ

-ಕೆ. ನಿಂಗಜ್ಜ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.