ನಿಡಶೇಸಿ ಕೆರೆಯಲ್ಲಿ ಬಾನಾಡಿಗಳ ಕಲರವ


Team Udayavani, Oct 15, 2019, 2:19 PM IST

kopala-tdy-2

ಕುಷ್ಟಗಿ: ತಾಲೂಕಿನ ನಿಡಶೇಸಿ ಕೆರೆ ಭರ್ತಿಯಾಗಿದ್ದು, ಬಾನಾಡಿಗಳ ಆಶ್ರಯ ತಾಣವಾಗುತ್ತಿದೆ. ಕೆರೆಯಲ್ಲಿ ಈಗ ಬಾನಾಡಿಗಳ ಚಿಲಿಪಿಲಿ ಕೇಳಿ ಬರುತ್ತಿದ್ದು, ಪಕ್ಷಿ ಪ್ರಿಯರನ್ನು ಸಂತಸಗೊಳಿಸಿದೆ. ಪಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕೆರೆಯಂಗಳದಲ್ಲಿ ಪಕ್ಷಿಗಳಿಗಾಗಿಯೇ ನಿರ್ಮಿಸಿದ ನಡುಗಡ್ಡೆಗಳಲ್ಲಿ ಅವು ಆಶ್ರಯ ಪಡೆದಿವೆ.

ಪಕ್ಷಿಗಳ ಸಂತಾನಾಭಿವೃದ್ಧಿಗೆ ಪ್ರಸಕ್ತ ಸ್ಥಳವೆನಿಸಿದ ಈ ಕೆರೆಗೆ ಚುಕ್ಕೆ ಬಾತು, ಬಣ್ಣದ ಕೊಕ್ಕರೆ, ಬೆಳ್ಳಕ್ಕಿ, ಬಿಳಿ, ಕರಿ ಬಣ್ಣದ ಕೆಂಬರಲ್ಲು ಬೂದುಬಕ, ಹುಲ್ಲಂಕಿ, ಗುಳ ಮುಳಕ, ಮೆಟ್ಟಗಾಲು ಹಕ್ಕಿ, ಟಿಟ್ಟಿಬಾ ಮೊದಲಾದ ಪಕ್ಷಿಗಳು ಕಂಡು ಬಂದಿವೆ. ಕೆರೆ ಸುತ್ತಲೂ ಗಿಡಗಳಿಲ್ಲದೇ ಇರುವುದರಿಂದ ಪಕ್ಷಿಗಳು ಬಹುತೇಕ ಸಮಯವನ್ನು ಕೆರೆ ನಡುಗಡ್ಡೆಗಳಲ್ಲಿ ಕಳೆಯುತ್ತಿವೆ. ಕೆಲ ಪಕ್ಷಿಗಳು ತೋಟ  ಪಟ್ಟಿಗಳಲ್ಲಿರುವ ಗಿಡಗಳನ್ನೇ ಆಶ್ರಯಿಸುತ್ತಿವೆ.

ಕಂಗೊಳಿಸುತ್ತಿದೆ ಕೆರೆ: ನಿಡಶೇಸಿ ಕೆರೆ 320 ಎಕರೆ ವಿಸ್ತೀರ್ಣ ಹೊಂದಿದ್ದು, ಈ ಬಾರಿ ಸುರಿದ ಮಳೆಗೆ 250 ಎಕರೆ ಪ್ರದೇಶದಲ್ಲಿ ನೀರು ಆವರಿಸಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಂಡ ಈ ಕೆರೆ ಸುತ್ತಮುತ್ತ ತೋಟಪಟ್ಟಿಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ಅಂತರ್ಜಲವೂ ವೃದ್ಧಿಸಿದೆ. ಎರಡು ವರ್ಷಗಳಿಂದ ಬತ್ತಿದ್ದ ಕೆರೆಯತ್ತ ಪ್ರಾಣಿ-ಪಕ್ಷಿಗಳು ಮುಖ ಮಾಡಿರಲಿಲ್ಲ. ಹೀಗಾಗಿ ಅಲ್ಲಲ್ಲಿ ನೀರಿನ ಅರವಟ್ಟಿಗೆ ಇಡಲಾಗಿತ್ತು. ಆದರೀಗ ಕೆರೆ ಭರ್ತಿಯಾಗಿ ಸಂತಸ ಇಮ್ಮಡಿಗೊಳಿಸಿದೆ.

ಸತತ ಬರದಿಂದ ನಿಡಶೇಸಿ ಕೆರೆ ಬತ್ತಿದ್ದರಿಂದ ದೇಶ, ವಿದೇಶದ ಹಕ್ಕಿಗಳು ಬರಲಿಲ್ಲ. ಇದೀಗ ಕೆರೆಗೆ ಭರಪೂರ ನೀರು ಬಂದಿದ್ದು, ಸದ್ಯ ದೇಶಿ ಹಕ್ಕಿಗಳನ್ನು ಮಾತ್ರ ಕಾಣಬಹುದಾಗಿದೆ. ನವೆಂಬರ್‌, ಡಿಸೆಂಬರ್‌ ವೇಳೆ ಚಳಿ ಹೆಚ್ಚಾಗುವ ಹಿನ್ನೆಲೆಯಲ್ಲಿ ವಿದೇಶಿ ಹಕ್ಕಿಗಳ ಆಗಮನ ನಿರೀಕ್ಷೆ ಇದೆ. ಕೆರೆ ಅಭಿವೃದ್ಧಿ ಸಂದರ್ಭದಲ್ಲಿ ಕೆರೆ ದಡದಲ್ಲಿದ್ದ ಗಿಡಗಳನ್ನು ತೆರವುಗೊಳಿಸಲಾಗಿದ್ದು, ಸದ್ಯ ಪಕ್ಷಿಗಳು ಕೂರಲು ಗಿಡಗಳ ವ್ಯವಸ್ಥೆ ಇಲ್ಲ. ಅರಣ್ಯ ಇಲಾಖೆ ಈ ಪ್ರದೇಶದಲ್ಲಿ ಬೇಗ ಬೆಳೆಯುವ ಗಿಡ, ಪೊದೆ ಸಸ್ಯಗಳನ್ನು ನೆಡುವುದರಿಂದ ಪಕ್ಷಿಗಳ ವಿಶ್ರಾಂತಿ-ಗೂಡು ಕಟ್ಟಲು ಸಹಕಾರಿಯಾಗಲಿದೆ. ಅಮರೇಗೌಡ ಪಾಟೀಲ ಜಾಲಿಹಾಳ, ಪಕ್ಷಿತಜ್ಞ

 

-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.