ಬಿಸರಳ್ಳಿ ನೀರಿನ ಸಮಸ್ಯೆ ಉಲ್ಬಣ

•ತೋಟದ ಪಂಪ್‌ಸೆಟ್ ಆಸರೆ•ಅಂತರ್ಜಲ ಕುಸಿತ-ಬತ್ತಿದ ಬೋರ್‌ವೆಲ್

Team Udayavani, May 18, 2019, 2:04 PM IST

kopala-tdy-1..

ಕೊಪ್ಪಳ: ಬಿಸರಳ್ಳಿ ಗ್ರಾಮಸ್ಥರು ದೂರದಿಂದ ಕುಡಿಯುವ ನೀರು ತರುತ್ತಿರುವುದು.

ಕೊಪ್ಪಳ: ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದರೂ ಕುಡಿಯುವ ನೀರಿನ ಸಮಸ್ಯೆ ತಗ್ಗಿಲ್ಲ. ಜಿಲ್ಲಾಡಳಿತ ಮಾತ್ರ ಕೋಟಿ ಕೋಟಿ ಅನುದಾನ ವ್ಯಯಿಸಿ ಲೆಕ್ಕ-ಬಾಕಿ ತೋರಿಸುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿನ ಜನತೆ ಇಂದಿಗೂನೀರಿಗಾಗಿ ಹೊಲ, ಗದ್ದೆ, ಕೆರೆ, ಕಟ್ಟೆಗಳಿಗೆ ಅಲೆದಾಡುವಂತಾಗಿದೆ.

ತಾಲೂಕಿನ ಬಿಸರಳ್ಳಿ ಗ್ರಾಮವು ಕುಡಿಯುವ ನೀರಿನ ಸಮಸ್ಯೆಗೆ ಹೊರಗಾಗಿಲ್ಲ. ಈ ಗ್ರಾಮ ಸಮೀಪದಲ್ಲೇ ತುಂಗಭದ್ರಾ ಡ್ಯಾಮ್‌ ಹಿನ್ನೀರು ಇದ್ದರೂ ಸಹಿತ ನೀರಿನ ಭವಣೆ ನೀಗಿಲ್ಲ. ಕಳೆದ 2-3 ವರ್ಷಗಳಿಂದಲೂ ನೀರಿನ ಸಮಸ್ಯೆಯಿದೆ. ಪ್ರಸಕ್ತ ಬೇಸಿಗೆ ಅವಧಿಯಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ಜನತೆಗೆ ಒಂದು ಹೊತ್ತಿನ ಊಟ ಇಲ್ಲವೆಂದರೂ ಸಮಸ್ಯೆಯಾಗದು, ಆದರೆ ನೀರು ಇಲ್ಲವೆಂದರೆ ಬದುಕೇ ದುಸ್ತರವಾಗಲಿದೆ. ಅಲ್ಲದೇ, ಜಿಲ್ಲೆಯಲ್ಲಿ ಪದೇ ಪದೆ ಬರ ಆವರಿಸುತ್ತಿದೆ. ವರ್ಷದಿಂದ ವರ್ಷಕ್ಕೆ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಹೊಲ, ಗದ್ದೆಗಳಲ್ಲಿನ ಪಂಪ್‌ಸೆಟ್‌ಗಳು ನೀರಿಲ್ಲದೇ ಒಣಗಿವೆ. ಹೀಗಾಗಿ ಜನರು ನೀರಿಗೆ ಅಲೆದಾಡುವಂತ ಪರಿಸ್ಥಿತಿ ಎದುರಾಗಿದೆ.

ದನಕರುಗಳಿಗೆ ಉಪ್ಪು ನೀರೇ ಗತಿ: ಜನರಿಗೆ ಕುಡಿಯುವ ನೀರಿನ ಸಮಸ್ಯೆ ಒಂದಡೆಯಾದರೆ, ಜಾನುವಾರುಗಳ ಪರಿಸ್ಥಿತಿಯಂತೂ ಹೇಳತೀರದಾಗಿದೆ. ಗ್ರಾಮದಲ್ಲಿ ಉಪ್ಪು ನೀರು ಪೂರೈಕೆ ಮಾಡುತ್ತಿದ್ದು, ಆ ನೀರನ್ನೇ ದನಕರುಗಳಿಗೆ ಕುಡಿಸಬೇಕಿದೆ. ಇಲ್ಲವೇ ಕೆರೆ ಪಂಪ್‌ಸೆಟ್ ಇರುವ ಸ್ಥಳಕ್ಕೆ ತೆರಳಿ ನೀರು ಕುಡಿಸಿಕೊಂಡು ಬರಬೇಕಿದೆ. ಎಲ್ಲ ದನಗಳನ್ನು ಪಂಪ್‌ಸೆಟ್ ಇರುವ ಸ್ಥಳಕ್ಕೆ ಹೊಡೆದುಕೊಂಡು ಹೋದರೆ ಹೊಲದ ಮಾಲಿಕರ ಕೆಂಗಣ್ಣಿಗೆ ಗುರಿಯಾಗಬೇಕಿದೆ ಎನ್ನುತ್ತಿದ್ದಾರೆ ಇಲ್ಲಿನ ಜನತೆ. ಒಟ್ಟಿನಲ್ಲಿ ಜಿಲ್ಲಾಡಳಿತ ಕುಡಿಯುವ ನೀರಿಗೆ 8 ಕೋಟಿಗೂ ಅಧಿಕ ಅನುದಾನ ಖರ್ಚು ಮಾಡಿದೆ. ಆದರೆ ಜನರಿಗೆ ನೀರಿನ ಭವಣೆ ತಪ್ಪಿಲ್ಲ. ಹೊಲ, ಗದ್ದೆ, ಕೆರೆ, ಕಟ್ಟೆಗಳಿಗೆ ಇಂದಿಗೂ ಆಸರೆಯಾಗುತ್ತಿವೆ. ಜಿಲ್ಲಾಡಳಿತ ಇನ್ನಾದರೂ ಇಂತ ಸಮಸ್ಯಾತ್ಮಕ ಹಳ್ಳಿಗಳ ಬಗ್ಗೆ ಕಣ್ತೆರೆದು ನೋಡಬೇಕಿದೆ.

ಈ ಗ್ರಾಮಕ್ಕೆ ನೀರು ಪೂರೈಸುವ ಉದ್ದೇಶದಿಂದ ಹಿರೇ ಸಿಂದೋಗಿ ಸಮೀಪದ ಹಳ್ಳದಲ್ಲಿ ಬೋರ್‌ವೆಲ್ ಕೊರೆಯಿಸಲಾಗಿದೆ. ಆದರೆ ಇದು ತಿಂಗಳಿಗೆ 2-3 ಬಾರಿ ಕೆಟ್ಟಿರುತ್ತದೆ. ಒಂದೊಮ್ಮೆ ಪೈಪ್‌ ಒಡೆದಿದ್ದರೆ, ಮತ್ತೂಮ್ಮೆ ಮೋಟರ್‌ ರಿಪೇರಿ ಬಂದಿರುತ್ತದೆ. ಹೀಗಾಗಿ ಗ್ರಾಮಕ್ಕೆ ನೀರು ಪೂರೈಕೆಯಾಗಲ್ಲ. ಕನಿಷ್ಟ 10 ದಿನಕ್ಕೊಮ್ಮೆ ನೀರು ಪೂರೈಕೆ ಮಾಡುತ್ತಾರೆ. ನೀರಿಗಾಗಿ ನಾವು ಮನೆಯಲ್ಲಿ ಒಬ್ಬರು ಕಾಯಂ ಇರಬೇಕು. ಇಲ್ಲವೆಂದರೆ ನಾವು ಜೀವನ ನಡೆಸುವುದು ಕಷ್ಟ ಎಂದೆನ್ನುತ್ತಾರೆ ಇಲ್ಲಿನ ಜನತೆ. ಗ್ರಾಮದ ಸಮೀಪದ ಶಿವು ಮೋರನಾಳ ಎಂಬುವರು ತಮ್ಮ ಇಟ್ಟಿಗೆ ಉದ್ಯಮಕ್ಕೆ ಬಳಕೆ ಮಾಡುವ ಬೋರ್‌ವೆಲ್ ನೀರನ್ನೇ ಜನರಿಗೆ ಪೂರೈಕೆ ಮಾಡುತ್ತಿದ್ದಾರೆ. ವಿದ್ಯುತ್‌ ಬಿಲ್ ಸಹಿತ ಅವರೇ ಕಟ್ಟಿಕೊಳ್ಳುತ್ತಿದ್ದಾರೆ. ಅವರು ಗ್ರಾಮಕ್ಕೆ ಆಸರೆಯಾಗಿದ್ದಾರೆ ಎನ್ನುವ ಮಾತನ್ನಾಡುತ್ತಿದ್ದಾರೆ ಇಲ್ಲಿನ ಜನತೆ.

.ದತ್ತು ಕಮ್ಮಾರ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.