ಬಿಜೆಪಿ ಸೇರಲ್ಲ,ರಾಜೀನಾಮೆ ಕೊಡಲ್ಲ
Team Udayavani, Sep 17, 2018, 6:25 AM IST
ಕೊಪ್ಪಳ: “ನಾನಂತೂ ಬಿಜೆಪಿ ಸೇರಲ್ಲ. ಯಾರೂ ನನಗೆ ಈ ಬಗ್ಗೆ ಆಫರ್ ನೀಡಿಲ್ಲ. ಸರ್ಕಾರ ಭದ್ರವಾಗಿದೆ. ಹಾಗಾಗಿ,
ರಾಜೀನಾಮೆ ನೀಡುವ ಪ್ರಮೇಯವೂ ಬರುವುದಿಲ್ಲ’ಎಂದು ಅರಣ್ಯ ಸಚಿವ ಆರ್.ಶಂಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಬಿಜೆಪಿ ನಾಯಕರು ಐದು ವರ್ಷಗಳ ಕಾಲ ಸರ್ಕಾರ ಬೀಳುತ್ತೆ ಎನ್ನುವ ಮಾತನ್ನೇ ಹೇಳಿಕೊಂಡು ಸುತ್ತಾಡುತ್ತಾರೆ. ಬಿಜೆಪಿ ಸೇರಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೂ ಮಾಧ್ಯಮಗಳಲ್ಲಿ ಸುಮ್ಮನೆ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದಕ್ಕೆ ಉತ್ತರ ಕೊಡೋರು ಯಾರು? ಪ್ರತಿಕ್ರಿಯಿಸಿದರೆ ಗೊಂದಲ ಸೃಷ್ಟಿಯಾಗುತ್ತದೆ. ಹೀಗಾಗಿ, ಸದ್ಯಕ್ಕೆ ಸುಮ್ಮನಿದ್ದೇನೆ. ಕ್ಷೇತ್ರದಲ್ಲಿ ವಿರಾಮ ಇಲ್ಲದೇ ನಿರಂತರ ಕೆಲಸ ಮಾಡುತ್ತಿದ್ದೇನೆ’ ಎಂದರು. ಸರ್ಕಾರ ಕೆಡವಲು ಕಿಂಗ್ಪಿನ್ಗಳು ಯತ್ನಿಸುತ್ತಿದ್ದಾರೆ ಎಂದು ಸಿಎಂ ಹೇಳಿರುವ ವಿಚಾರ ನನಗೆ ಗೊತ್ತಿಲ್ಲ. ಯಾವ ಪಿನ್ಗಳು ಕೆಲಸ ಮಾಡುತ್ತಿವೆ ಎನ್ನುವುದೂ ತಿಳಿದಿಲ್ಲ. ಸರ್ಕಾರದ ಅಂಗವಾಗಿ ಕೆಲಸ ಮಾಡುತ್ತಿದ್ದು, ಬೇಡವಾದ ವಿಷಯಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ