ಎಂಬಿಪಿ ವಿರುದ್ಧ ಬಿಜೆಪಿ ಪ್ರತಿಭಟನೆ
ಗೃಹ ಸಚಿವರಿಂದ ಪ್ರಜಾತಂತ್ರ ಹತ್ತಿಕ್ಕುವ ಕೆಲಸ•ರಾಜ್ಯದಲ್ಲಿ ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ
Team Udayavani, May 7, 2019, 1:14 PM IST
ಕೊಪ್ಪಳ: ಗೃಹ ಸಚಿವ ಎಂ.ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಹಾಗೂ ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಜಿಲ್ಲಾ ಘಟಕದ ಮುಖಂಡರು ಪ್ರತಿಭಟನೆ ನಡೆಸಿದರು.
ಕೊಪ್ಪಳ: ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಪತ್ರಕರ್ತರ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಕ್ಷೇತ್ರವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಮಟ್ಟದ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಮೈತ್ರಿ ಸರ್ಕಾರದಲ್ಲಿನ ಹಲವು ಶಾಸಕರು, ಮುಖಂಡರು ಮಾಧ್ಯಮ ಕ್ಷೇತ್ರ ಸೇರಿದಂತೆ ಕೆಲವು ವ್ಯಕ್ತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಶಾಸಕ ನಾರಾಯಣಗೌಡ ನಟ ಯಶ್, ದರ್ಶನ ಅವರಿಗೆ ಬೆದರಿಕೆ ಹಾಕಿದ್ದು, ಬೇಳೂರು ಗೋಪಾಲಕೃಷ್ಣ ಮೋದಿ ಹತ್ಯೆ ಮಾಡುವ ಮಾತನ್ನಾಡಿದ್ದು ಸೇರಿದಂತೆ ಹಲವು ಪ್ರಕರಣಗಳ ಕುರಿತು ಬಿಜೆಪಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೂ ಮೈತ್ರಿ ಸರ್ಕಾರಕ್ಕೆ ಮಾಧ್ಯಮ ಕ್ಷೇತ್ರ ಸಿಂಹ ಸ್ವಪ್ನವಾಗಿದೆ. ರಾಜ್ಯ ಸರ್ಕಾರದ ಕುರಿತು ದಿನಕ್ಕೊಂದು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಸಿಎಂ ಹಗುರವಾಗಿ ಮಾತನಾಡುತ್ತಿದ್ದಾರೆ. ಬಹಿಷ್ಕಾರ ಮಾಡುತ್ತಿದ್ದಾರೆ. ಇನ್ನೂ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಪತ್ರಕರ್ತರನ್ನು ಉದ್ದೇಶ ಪೂರ್ವಕವಾಗಿ ಬಂಧಿಸಿ ಕ್ರಮಕೈಗೊಳ್ಳಲು ಮುಂದಾಗುತ್ತಿದ್ದಾರೆ. ಅವರ ದಬ್ಟಾಳಿಕೆ ಮಿತಿ ಮೀರಿದೆ. ಸ್ವಾತಂತ್ರ್ಯ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕೂಡಲೇ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಬಿಜೆಪಿ ಮುಖಂಡರಾದ ಗವಿಸಿದ್ದಪ್ಪ ಕರಡಿ, ಚಂದ್ರು ಕವಲೂರು, ಶ್ರೀನಿವಾಸ ಪೂಜಾರ, ಗಿರಿಶಾನಂದ ಜ್ಞಾನಸುಂದರ್ ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ