ವಿದ್ಯಾರ್ಥಿಗಳ ಕಲಿಕೆಗಾಗಿ ಬುಕ್‌ಬ್ಯಾಂಕ್‌

ಹೊಸ ಪಠ್ಯ-ಪುಸ್ತಕ ವಿತರಣೆ ವಿಳಂಬ­ಹಳೇ ವಿದ್ಯಾರ್ಥಿಗಳಿಂದ ಪುಸ್ತಕ ಪಡೆದು ಹೊಸ ವಿದ್ಯಾರ್ಥಿಗೆ ಹಂಚಿಕೆ

Team Udayavani, Jul 2, 2021, 9:43 PM IST

01kpl-2

ವರದಿ : ದತ್ತು ಕಮ್ಮಾರ

ಕೊಪ್ಪಳ: ಕೊರೊನಾ ಸೋಂಕಿನ ಪ್ರಮಾಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಶಾಲೆಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಪುಸ್ತಕಗಳ ಪೂರೈಕೆಗೆ ಪ್ರತಿ ಜಿಲ್ಲೆಯಲ್ಲಿ ಬುಕ್‌ ಬ್ಯಾಂಕ್‌ ಮಾಡಲು ಸೂಚಿಸಿದೆ.

ಶಾಲೆ ಆರಂಭಗೊಂಡರೂ ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಪುಸ್ತಕ ವಿತರಣೆ ಸದ್ಯದ ಮಟ್ಟಿಗೆ ಸುಲಭವಲ್ಲ. ಹೀಗಾಗಿ ಬುಕ್‌ ಬ್ಯಾಂಕ್‌ ಮಾಡಿ, ಹಳೇ ವಿದ್ಯಾರ್ಥಿಗಳಿಂದ ಪುಸ್ತಕ ಸಂಗ್ರಹಿಸಿ ಹೊಸದಾಗಿ ಕ್ಲಾಸ್‌ಗೆ ಬರುವ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶ ಕಲ್ಪಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಮುದ್ರಣಗೊಂಡಿಲ್ಲ ಪುಸ್ತಕ: ಪ್ರತಿ ವರ್ಷ ಜೂನ್‌ ತಿಂಗಳಿನಿಂದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳುತ್ತಿತ್ತು. ಶಾಲೆ ಆರಂಭದಲ್ಲಿಯೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಗುತ್ತಿತ್ತು. ಆದರೆ ಕಳೆದ ಎರಡು ವರ್ಷದಿಂದ ಕೊರೊನಾ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದು ಶಾಲೆ ಆರಂಭಿಸಿ ಪಾಠ-ಪ್ರವಚನ ಮಾಡುವುದೇ ಸವಾಲಾಗಿದೆ. ಅಲ್ಲದೆ ಲಾಕ್‌ಡೌನ್‌ನಿಂದಾಗಿ ಸರ್ಕಾರದ ಮಟ್ಟದಲ್ಲಿ ಟೆಂಡರ್‌ ಪ್ರಕ್ರಿಯೆ ಸೇರಿದಂತೆ ಪುಸ್ತಕ ಮುದ್ರಣಕ್ಕೂ ಹಿನ್ನಡೆಯಾಗಿದೆ. ಇದರಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು ಪೂರೈಕೆಯಾಗಿಲ್ಲ. ಈ ಮಧ್ಯೆ ಸಾರ್ವಜನಿಕ ಶಿಕ್ಷಣ ಇಲಾಖೆ 6ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್‌ಗಳನ್ನು ಆರಂಭಿಸಲು ಎಲ್ಲ ತಯಾರಿ ಮಾಡಿಕೊಂಡಿದೆ. ಆದರೆ ಮಕ್ಕಳ ಬಳಿ ಪುಸ್ತಕಗಳೇ ಇಲ್ಲದೆ ಪಾಠ ಓದುವುದಾದರೂ ಹೇಗೆ? ಕಲಿಯುವುದಾದರೂ ಹೇಗೆ? ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕಾಗಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಹೊಸ ಪುಸ್ತಕ ಮುದ್ರಣವಾಗಿ ಎಲ್ಲ ಶಾಲೆಗಳಿಗೆ ಪೂರೈಕೆಯಾಗುವವರೆಗೂ ಆಯಾ ಶಾಲೆಗಳಲ್ಲಿ ಬುಕ್‌ ಬ್ಯಾಂಕ್‌ ಮಾಡಲು ಮುಂದಾಗಲಾಗಿದೆ.

ಹಳೆ ಪುಸ್ತಕ ಹೊಸ ವಿದ್ಯಾರ್ಥಿಗೆ: ಸರ್ಕಾರಿ ಶಾಲೆಗಳಲ್ಲಿ ಆರನೇ ತರಗತಿ ಅಭ್ಯಾಸ ಮಾಡಿ ಉತ್ತೀರ್ಣನಾಗಿ ಪ್ರಸಕ್ತ ವರ್ಷಕ್ಕೆ 7ನೇ ತರಗತಿಗೆ ಪ್ರವೇಶಾತಿ ಪಡೆದಿದ್ದರೆ ಆ ವಿದ್ಯಾರ್ಥಿಯಿಂದ 6ನೇ ತರಗತಿಯ ಎಲ್ಲ ಪುಸ್ತಕಗಳನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ವಾಪಸ್‌ ಪಡೆಯಬೇಕು. ಹೀಗೆ ಸಂಗ್ರಹಿಸಿ ಎಲ್ಲ ವಿಷಯಗಳ ಪುಸ್ತಕಗಳನ್ನು 5ನೇ ತರಗತಿಯಿಂದ 6ನೇ ತರಗತಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ವಿತರಿಸುವುದು. ಪ್ರತಿ ತರಗತಿಯ ವಿದ್ಯಾರ್ಥಿಗಳಿಂದಲೂ ಹೀಗೆ ಪುಸ್ತಕ ಸಂಗ್ರಹಿಸಿ ಅದನ್ನು ಹೊಸದಾಗಿ ತರಗತಿಗೆ ಬರುವ ವಿದ್ಯಾರ್ಥಿಗಳಿಗೆ ಪೂರೈಸಬೇಕು. ಆ ಮೂಲಕ ಹೊಸ ಪುಸ್ತಕಗಳು ವಿತರಣೆಯಾಗುವವರೆಗೂ ಕಲಿಕೆಗೆ ತೊಂದರೆಯಾಗಬಾರದು ಎಂಬುದು ಈ ಬುಕ್‌ ಬ್ಯಾಂಕ್‌ ಯೋಜನೆಯ ಉದ್ದೇಶವಾಗಿದೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.