ಪುಸ್ತಕಗಳು ವ್ಯಕ್ತಿಯ ಬದುಕಿನ ದಾರಿದೀಪ

ಜಿ.ಎಸ್‌. ಗೋನಾಳರ ಎರಡು ಪುಸ್ತಕ ಬಿಡುಗಡೆ

Team Udayavani, Apr 25, 2022, 11:52 AM IST

10

ಕೊಪ್ಪಳ: ಪುಸ್ತಕಗಳು ಮನುಷ್ಯನ ಬದುಕಿನ ದಾರಿದೀಪಗಳಾಗಿವೆ. ಸಮಾಜದ ಅಂಕುಡೊಂಕು ತಿದ್ದುವ, ಸಮಾಜ ಸರಿದಾರಿಗೆ ನಡೆಸುವ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗಿದೆ ಎಂದು ಸರ್ಕಾರಿ ಅಭಿಯೋಜಕ ಬಿ.ಎಸ್‌.ಪಾಟೀಲ್‌ ಅವರು ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ನಡೆದ ವಿಶಾಲ ಪ್ರಕಾಶನ ಮಾದಿನೂರು, ವರಸಿದ್ಧಿ ವಿನಾಯಕ ಗ್ರಾಮೀಣ ಶಿಕ್ಷಣಾಭಿವೃದ್ಧಿ ಸಂಸ್ಥೆ, ಸಿರಿಗನ್ನಡ ಸಾಹಿತ್ಯ ಸಾಂಸ್ಕೃತಿಕ ಕಲೆಗಳ ಅಭಿವೃದ್ಧಿ ಟ್ರಸ್ಟ್‌ ಸಹಯೋಗದಲ್ಲಿ ನಡೆದ ಜಿ.ಎಸ್‌. ಗೋನಾಳರ ಜೀವನದ ಸಂಗ್ರಾಮದಲ್ಲಿ ಯಶಸ್ಸಿನ ಗುಟ್ಟುಗಳು ಹಾಗೂ ಸಮೃದ್ಧಿ ಜೀವನದ ದಾರಿ ದೀಪಗಳ ಪುಸ್ತಕ ಬಿಡುಗಡೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬರವಣಿಗೆಗೆ ಬದಲಾವಣೆ ಶಕ್ತಿ ಎನ್ನುವುದು ನಂಬಲೇಬೇಕಾದ ಸತ್ಯವಾಗಿದೆ. ನಮ್ಮ ಆಲೋಚನೆಗಳು ಸಕರಾತ್ಮಕವಾಗಿರಲಿ, ಯಾವುದೇ ಕಾರಣಕ್ಕೂ ಸಮಾಜ ಒಡೆಯುವ ಕಾರ್ಯ ನಡೆಯದಿರಲಿ. ಇಂತಹ ವಿನಾಶಕಾರಿ ಶಕ್ತಿಯ ವಿರುದ್ಧ ಜಾಗೃತಗೊಳ್ಳುವ ಸಮನ್ವಯತೆಗೆ ಕ್ರಿಯಾಶೀಲ ಸಾಹಿತ್ಯದ ಕೊಡುಗೆ ಅಪಾರವಾದದ್ದು, ಗೋನಾಳರ ಬದುಕು ಮತ್ತು ಬರಹಗಳು ವೈಚಾರಿಕತೆ, ಚಿಂತನ ಮಂಥನಗಳು ನಾಡಿನ ಯುವಜನಾಂಗಕ್ಕೆ ಸ್ಫೂರ್ತಿಯಾಗಲಿವೆ ಎಂದರು.

ಸಾಹಿತಿ ಡಾ| ರಾಜೇಂದ್ರ ಗಡಾದ ಮಾತನಾಡಿ, ಗೋನಾಳ ಅವರ ಬದುಕು ಮತ್ತು ಬರಹ ಎರಡು ಆದರ್ಶಪ್ರಾಯವಾದವುಗಳು. ಓದುವ ಸಂಸ್ಕೃತಿ ಮಾಯವಾಗಿರುವ ಈ ಕಾಲದಲ್ಲಿ ಉತ್ತಮ ಪುಸ್ತಕಗಳು ದೊರೆತಾಗ ಓದುವ ಮೂಲಕ ನೈತಿಕತೆ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ. ದೈನಂದಿನ ಬದುಕು ಅತ್ಯಂತ ಸಂಕೀರ್ಣವಾಗುತ್ತಿರುವ ಹಾಗೂ ಬದುಕನ್ನು ಧಿಕ್ಕರಿಸುತ್ತಿರುವ ಸಂದರ್ಭದಲ್ಲಿ ಪರಿಪೂರ್ಣ ಬದಕನ್ನು ಹಸನುಗೊಳಿಸುವುದು ಹೇಗೆ ಎಂಬುದನ್ನು ಜಿ.ಎಸ್‌. ಗೋನಾಳ ಹೇಳಲೇತ್ನಿಸಿದ್ದಾರೆ.

ಲೇಖಕರ ವ್ಯಾಪಕ ಅಧ್ಯಯನ, ಅನುಭವಗಳ ಫಲರೂಪವಾಗಿ ಮೂಡಿ ಬಂದಿರುವ ಇಲ್ಲಿನ ವಿಚಾರಗಳು, ಚಿಂತನಗಳು ಸಾಹಿತ್ಯಕ್ಕೆ ಉಲ್ಲಾಸದ ಕೊಡುಗೆಗಳಾಗಿವೆ ಎಂದರು.

ಹಿರಿಯ ಪತ್ರಕರ್ತ ಸೋಮರಡ್ಡಿ ಅಳವಂಡಿ ಮಾತನಾಡಿ, ಬದುಕು ನೈಸರ್ಗಿಕವಾಗಿರಲಿ, ಅನೈಸರ್ಗಿಕ ಬದುಕಿನ ವಿಧಾನದಿಂದ ನಮ್ಮ ನೆಮ್ಮದಿ ಹಾಗೂ ಜೀವನಶೈಲಿ ಹಾಳಾಗಿದ್ದು, ಬದುಕಿನ ಸತ್ಯದ ಇತಿಮಿತಿಯನ್ನರಿತು ಬದುಕುವ ವಿಧಾನವನ್ನು ಜಿ.ಎಸ್‌. ಗೋನಾಳರವರು ತಮ್ಮ ಸಾಹಿತ್ಯದಲ್ಲಿ ಅರ್ಥಪೂರ್ಣವಾಗಿ ಬಿಂಬಿಸಿದ್ದಾರೆ. ಈ ಪುಸ್ತಕದಲ್ಲಿ ಸರಳ ಜೀವನಕ್ಕೆ ಬೇಕಾದ ಮೌಲ್ಯಗಳ ಪ್ರತಿಪಾದನೆಯ ಕುರಿತು ಸುಂದರವಾಗಿ ಓದುಗರನ್ನು ಕಟ್ಟಿಹಾಕುವ ಪ್ರಯತ್ನ ಮಾಡಿದ್ದಾರೆ. ಇಂದಿನ ದಿನಗಳಲ್ಲಿ ಮೌಲ್ಯಗಳನ್ನು ಪ್ರತಿಪಾದಿಸುವ ಜೀವನದ ಅವಶ್ಯಕ ಸೂತ್ರಗಳನ್ನು ಮನದಟ್ಟಾಗಿ, ಮನಸ್ಸಿಗೆ ಬೇರೂರುವ ಹಾಗೆ ಬರೆದಿದ್ದು, ಈ ಪುಸ್ತಕದ ಲೇಖನಗಳು ಶಾಲಾ-ಕಾಲೇಜು ಪಠ್ಯಪುಸ್ತಕಗಳಿಗೆ ಪಾಠವಾಗುವ ಪ್ರೌಢಿಮೆಯನ್ನು ಹೊಂದಿವೆ ಎಂದರು.

ಹೆಬ್ಟಾಳ ಸಂಸ್ಥಾನ ಮಠದ ಶ್ರೀನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಯತ್ನಟ್ಟಿಯ ರುದ್ರಮುನಿ ದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಂಘದ ರಾಜ್ಯಾಧ್ಯಕ್ಷ ಮಹೇಶ ಬಾಬು ಸುರ್ವೆ ಮಾತನಾಡಿದರು.

ಹಿರಿಯ ಸಾಹಿತಿ ಡಾ| ಮಹಾಂತೇಶ ಮಲ್ಲನಗೌಡರ, ಹಿರಿಯ ಪತ್ರಕರ್ತ ಎಂ. ಸಾದಿಕ್‌ ಅಲಿ, ಕದಳಿ ವೇದಿಕೆ ಸಂಚಾಲಕಿ ನಿರ್ಮಲಾ ಬಳ್ಳೊಳ್ಳಿ, ಹಿರಿಯ ಪತ್ರಕರ್ತ ಶರಣಪ್ಪ ಬಾಚಲಾಪುರ, ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೊಲೀಸಪಾಟೀಲ, ರತ್ನಾ ಗೋನಾಳ ಸೇರಿದಂತೆ ಮತ್ತಿತರರಿದ್ದರು.

ಉಮೇಶ ಸುರ್ವೆ ಸ್ವಾಗತಿಸಿದರು. ಪ್ರಾಸ್ತಾವಿಕ ಜಿ.ಎಸ್‌. ಗೋನಾಳ ಮಾತನಾಡಿದರು. ಶಿಕ್ಷಕಿ ಬಾಲ ನಾಗಮ್ಮ ಕಾರ್ಯಕ್ರಮ ನಿರ್ವಹಿಸಿದರು. ಶ್ರೀನಿವಾಸ ಚಿತ್ರಗಾರ ವಂದಿಸಿದರು. ಹೆಬ್ಟಾಳ ಶ್ರೀಗಳಿಗೆ ಮತ್ತುಯತ್ನಟ್ಟಿ ಮಠದ ರುದ್ರಮುನಿಸ್ವಾಮಿಗಳು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 35 ಸಾಧಕರಿಗೆ ಕನ್ನಡ ಕಸ್ತೂರಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.