ಹೋಂಗಾರ್ಡ್ ವರ್ಗಾವಣೆಗೆ ಲಂಚ: ಕೊಪ್ಪಳ ಜಿಲ್ಲಾ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ
Team Udayavani, Jan 17, 2023, 5:40 PM IST
ಕೊಪ್ಪಳ: ಹೋಂಗಾರ್ಡ್ ಒಬ್ಬರ ವರ್ಗಾವಣೆಗೆ 10 ಸಾವಿರ ರೂ. ಲಂಚದ ಬೇಡಿಕೆಯನ್ನಿಟ್ಟಿದ್ದ ಜಿಲ್ಲಾ ಕಮಾಂಡೆಂಟ್ ಗವಿಸಿದ್ದಪ್ಪ ಹಾಗೂ ತಾಲೂಕು ಕಮಾಂಡೆಂಟ್ ರುದ್ರಪ್ಪ ಪತ್ತಾರ್ ಅವರು ನಗರದ ಮಾನಸಿಕ ಆರೋಗ್ಯ ತಪಾಸಣಾ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಮುನಿರಾಬಾದ್ ನ ಹೋಂಗಾರ್ಡ್ ಮಹೆಬೂಬ ಖಾನ್ ಅವರು ಮುನಿರಾಬಾದ್ನಿಂದ ಗಂಗಾವತಿಗೆ ವರ್ಗಾವಣೆ ಕೇಳಿಕೊಂಡಿದ್ದರು. ಇದಕ್ಕೆ ರುದ್ರಪ್ಪ ಪತ್ತಾರ ಹಾಗೂ ಗವಿಸಿದ್ದಪ್ಪ ಅವರು 10 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಇದರಿಂದ ಮಹೆಬೂಬ್ ಖಾನ್ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಲೋಕಾಯುಕ್ತರ ತಂಡವು ನಗರದ ಮಾನಸಿಕ ಆರೋಗ್ಯ ತಪಾಸಣಾ ಕೇಂದ್ರದಲ್ಲಿ ಕರ್ತವ್ಯ ನಿರತ ಜಿಲ್ಲಾ ಕಮಾಂಡಂಟ್ ಗವಿಸಿದ್ದಪ್ಪ 6 ಸಾವಿರ ರೂ. ಹಣ ಸ್ವೀಕರಿಸುವ ವೇಳೆ ದಾಳಿ ನಡೆಸಿ ಬಲೆಗೆ ಕೆಡವಿದೆ. ಜಿಲ್ಲಾ ಹಾಗೂ ತಾಲೂಕು ಹೋಂ ಗಾರ್ಡ್ ಕಂಮಾಂಡೆಂಟ್ಗಳ ಮೇಲೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳಾದ ಡಿಎಸ್ಪಿ ಸಲೀಂ ಪಾಷಾ, ಇನ್ಪೆಕ್ಟರ್ಗಳಾದ ಚಂದ್ರಪ್ಪ ಇ.ಟಿ, ರಾಜೇಶ ಬಲಗುರ್ಕಿ, ಗಿರೀಶ ಶಿರೋಳ್ಕರ್ ಸೇರಿ ಸಿಬ್ಬಂದಿ ವರ್ಗವು ದಾಳಿ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?