ಸೋರುತಿಹುದು ಬ್ರಿಡ್ಜ್ ಕಂ ಬ್ಯಾರೇಜ್‌

•ಹೊಸ ಸೇತುವೆ ಕಟ್ಟಿದ್ದಾರೆನ್ನುವ ಖುಷಿ ಮಾಯ•ಗೇಟ್‌ಗಳ ಮೂಲಕ ಹರಿದು ಹೋಗುತ್ತಿದೆ ನೀರು

Team Udayavani, Jul 19, 2019, 10:22 AM IST

kopala-tdy-1..

ಕೊಪ್ಪಳ: ತಾಲೂಕಿನ ಬೋಚನಹಳ್ಳಿ ಸಮೀಪದಲ್ಲಿ ಇತ್ತೀಚೆಗೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆಯಾದರೂ ಮಳೆ ನೀರು ನಿಲ್ಲುತ್ತಿಲ್ಲವಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಹಳ್ಳಕ್ಕೆ ನೀರು ಹರಿದು ಬಂದಿದ್ದು, ಗೇಟ್‌ಗಳ ಮಧ್ಯದಲ್ಲಿ ಅಧಿಕ ನೀರು ವ್ಯರ್ಥವಾಗಿ ಸೋರಿಕೆಯಾಗುತ್ತಿದೆ. ಹೊಸ ಸೇತುವೆ ಕಟ್ಟಿದ್ದಾರೆ ಎನ್ನುವ ಖುಷಿ ರೈತರಿಗೆ ಕೆಲವೇ ದಿನಗಳಲ್ಲಿ ಮಾಯವಾಗಿದೆ.

ಅಂದಾಜು 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಡಿ ಬ್ರಿಡ್ಜ್ ಈ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಬೋಚನಹಳ್ಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಳವಂಡಿ ಹಳ್ಳದಿಂದ ನೀರು ಹರಿದು ಬಂದಿದ್ದು, 18 ಗೇಟ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆಯಾಗುತ್ತಿದೆ. ಈ ಬಗ್ಗೆ ಯಾರೊಬ್ಬರೂ ಗಮನ ಹರಿಸುತ್ತಿಲ್ಲ.

ಈ ಹಳ್ಳದಲ್ಲಿ ನೀರು ಸುತ್ತಲಿನ ನೂರಾರು ರೈತರಿಗೆ ಆಸರೆಯಾಗಿದೆ. ಬೋಚನಹಳ್ಳಿಯ ಶೇ.90 ರೈತರು ಇದೇ ಹಳ್ಳವನ್ನು ಆಶ್ರಯಿಸಿದ್ದು, ನೀರಾವರಿ ಸೌಲಭ್ಯ ಪಡೆಯುತ್ತಾರೆ. ಇದೇ ನೀರಿನಿಂದ ಎಲ್ಲರ ಬೋರ್‌ವೆಲ್ಗಳು ಪುನಃ ನೀರು ತುಂಬಿಕೊಂಡು ರೀಚಾರ್ಜ್‌ ಆಗಲಿವೆ. ಆದರೆ ಹೊಸ ಸೇತುವೆ ಕಟ್ಟಿದರೂ ವ್ಯರ್ಥ ಎನ್ನುವಂತಾಗಿದೆ. ಗೇಟ್‌ಗಳ ಮೂಲಕ ನೀರು ನಿತ್ಯವೂ ವ್ಯರ್ಥವಾಗಿ ಹರಿದು ಹೋಗುತ್ತಿದೆ.

ಸರ್ಕಾರ ರೈತರ ಅನುಕೂಲಕ್ಕಾಗಿ ಹಳ್ಳಗಳಿಗೆ ಸೇತುವೆ ನಿರ್ಮಿಸುತ್ತಿದೆ. ಆದರೆ ಗುತ್ತಿಗೆದಾರರ ಕಳಪೆ ಕೆಲಸದಿಂದ ಹೊಸ ಸೇತುವೆ ಕಟ್ಟಿದರೂ ವ್ಯರ್ಥ ಎನ್ನುವಂತಾಗಿದೆ. ಗೇಟ್‌ಗಳ ಮೂಲಕ ನೀರು ನಿತ್ಯವೂ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಸೇತುವೆ ಎರಡೂ ಬದಿಯಲ್ಲಿ ಕಲ್ಲು ಹಾಕಲಾಗಿದೆ. ಆದರೆ ಯರೆ ಮಣ್ಣಿನಲ್ಲಿಯೇ ಆ ಕಲ್ಲುಗಳನ್ನು ಇಟ್ಟಿದ್ದರಿಂದ ಅದು ಕುಸಿಯುತ್ತಿದೆ. ಕನಿಷ್ಟ ಪಕ್ಷ ಕೆಂಪು ಮಣ್ಣು ಹಾಕಿ ಗಟ್ಟಿಗೊಳಿಸಿ ಪುಡಿ ಕಲ್ಲುಗಳನ್ನು ಹಾಕಬೇಕಿತ್ತು. ಮಳೆ ನೀರಿನಿಂದ ಆ ತಡೆಗೋಡೆ ನೆನೆದು ಕುಸಿಯುತ್ತಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು, ಗುತ್ತಿಗೆದಾರರು ಈ ಕೂಡಲೇ ಸಮಸ್ಯೆ ಆಲಿಸಿ ರೈತರ ಅನುಕೂಲಕ್ಕಾಗಿ ನಿರ್ಮಿಸಿರುವ ಬ್ರಿಜ್ಡ್ ಕಂ ಬ್ಯಾರೇಜ್‌ ಅನ್ನು ಪುನಃ ದುರಸ್ತಿ ಮಾಡಿಸಿ ನೀರು ನಿಲ್ಲುವಂತೆ ಮಾಡಿ ರೈತರ ಬಾಳಿಗೆ ಬೆಳಕಾಗಬೇಕಿದೆ.

•ಸರ್ಕಾರದ ಪ್ರಯತ್ನ ವ್ಯರ್ಥ

•ಹಾಕಿದ ತಡೆಗೋಡೆಯೂ ನೆನೆದು ಕುಸಿಯುತ್ತಿದೆ

•ದುರಸ್ತಿ ಮಾಡಿಸಿ ನೀರು ನಿಲ್ಲುವಂತೆ ಮಾಡಬೇಕಿದೆ

ನಮ್ಮ ಗ್ರಾಮ ಸಮೀಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ಅನ್ನು ನಿರ್ಮಿಸಲಾಗಿದೆ. ಇತ್ತೀಚೆಗೆ ಮಳೆ ಬಂದು ನೀರು ಸಂಗ್ರಹವಾಗಿದೆ. ಆದರೆ ಸಂಗ್ರಹಗೊಂಡ ನೀರೆಲ್ಲ ಗೇಟ್‌ಗಳ ಮೂಲಕ ಸೋರಿಕೆಯಾಗಿ ಹರಿದು ಹೋಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಹೆಚ್ಚು ಗಮನ ಹರಿಸಿ ಹರಿದು ಹೋಗುವ ನೀರು ಉಳಿಸಿಕೊಳ್ಳಬೇಕಿದೆ.•ಕುಳಳ್ಳೆಪ್ಪ ಹುಲಕೋಟಿ,ಗ್ರಾಮಸ್ಥ

ಬೋಚನಹಳ್ಳಿ ಸಮೀಪದ ಸೇತುವೆ ನಮ್ಮ ಇಂಜಿನಿಯರ್‌ಗಳ ಎಡವಟ್ಟಿನಿಂದ ಕೆಲ ತಾಂತ್ರಿಕ ತೊಂದರೆಯಾಗಿದೆ. 2 ಕೋಟಿ ರೂ.ಗಳಿಗೆ ಟೆಂಡರ್‌ ಕರೆಯಲಾಗಿತ್ತು. ಅಷ್ಟು ಕಾಮಗಾರಿ ಮಾಡಿದೆ. ಇನ್ನೂ 2 ಕೋಟಿ ಅವಶ್ಯಕತೆಯಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಬೋಚನಹಳ್ಳಿ ಸ್ಥಳಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವೆ.•ಬಿ.ಟಿ.ಮೋಹನ, ಸಣ್ಣ ನೀರಾವರಿ ಇಲಾಖೆ ಅಭಿಯಂತರ ಕೊಪ್ಪಳ

 

•ದತ್ತು ಕಮ್ಮಾರ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.