ಬಿಜೆಪಿ ಮತ್ತು ಮೋದಿಯನ್ನು ಉತ್ತರ ಕರ್ನಾಟಕದ ಜನತೆ ಅಟ್ಟಾಡಿಸಿ ಹೊಡೆಯುವ ಕಾಲ ಬರುತ್ತದೆ
ಉಪ ಚುನಾವಣೆ ಬಳಿಕ ಬಿಎಸ್ವೈ ಸರಕಾರ ಪತನ ತಂಗಡಗಿ ಭವಿಷ್ಯ
Team Udayavani, Oct 18, 2019, 5:15 PM IST
ಕೊಪ್ಪಳ: ಬಿಜೆಪಿಯವರ ಸುಳ್ಳಿನ ಭರವಸೆ ನೋಡಿರುವ ಉತ್ತರ ಕರ್ನಾಟಕದ ಜನತೆ ಮುಂದಿನ ದಿನದಲ್ಲಿ ಬಿಜೆಪಿ ಮತ್ತು ಮೋದಿಯನ್ನು ಅಟ್ಟಾಡಿಸಿ ಹೊಡೆಯುವ ಕಾಲ ಬರುತ್ತದೆ. ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕನಕಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನತೆ ನೆರೆ ಹಾನಿಗೆ ನೊಂದು ಬೆಂದು ಹೋಗಿದ್ದಾರೆ. ಕೇಂದ್ರ ಸರ್ಕಾರ ಸರಿಯಾದ ಪರಿಹಾರ ಕೊಟ್ಟಿಲ್ಲ. ಇದು ನಾಚಿಕೆಗೇಡಿನ ಸಂಗತಿ. ಬಿಜೆಪಿಯವರು ಹಾಗೂ ಮೋದಿ ಬರಿ ದೇಶದಲ್ಲಿ ಸುಳ್ಳು ಹೇಳುತ್ತಲೇ ಸುತ್ತಾಡುತ್ತಿದ್ದಾರೆ.
ಬಿಜೆಪಿ ಹಾಗೂ ಮೋದಿ ಅವರಿಗೆ ಮುಂದಿನ ದಿನದಲ್ಲಿ ಅಟ್ಟಾಡಿಸಿ ಹೊಡೆಯುತ್ತಾರೆ. ಆ ಕಾಲ ಸಮೀಪನೇ ಇದೆ. ಅವರಿಗೆ ಟೊಮೆಟೋ, ಕಲ್ಲು ಹೊಡೆಯುವುದರಲ್ಲಿ ಎರಡು ಮಾತಿಲ್ಲ. ಈ ಭಾಗದಲ್ಲಿನ ಜನ ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದಾರೆ ಅವರ ನೆರೆವಿಗೆ ನೀರು ಬರದಿದ್ದರೆ ಏನರ್ಥ. ಅದರಲ್ಲೂ ಉತ್ತರ ಕರ್ನಾಟಕದ ಜನರು ಖಡಕ್ ರೊಟ್ಟಿ, ಚಟ್ನಿ ತಿಂದ ಗಿರಾಕಿಗಳು, ನಾವು ಗಂಡು ಮೆಟ್ಟಿದ ನಾಡಿನ ಜನ, ನಿಮಗೆ ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ನೇರ ವಾಗ್ಧಾಳಿ ನಡೆಸಿದರು.
ಇನ್ನೂ ರಾಜ್ಯದಲ್ಲಿ ನೆರೆ ನಿಭಾಯಿಸುವಲ್ಲಿ ವಿಫಲವಾದ ಬಿಜೆಪಿ ಸರ್ಕಾರ ಉಪ ಚುನಾವಣೆಯ ಬಳಿಕ ಪತನವಾಗಲಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪರಿಹಾರ ಕೊಡುವಲ್ಲಿಯೂ ವಿಳಂಬ ಮಾಡಿದ್ದಾರೆ. ಚುನಾವಣೆ ಬಳಿಕ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು