ನವಲಿ ಜಲಾಶಯ ನಿರ್ಮಿಸಿ

ಬೋರ್ಡ್‌ ರದ್ದು ಮಾಡಲು ಒತ್ತಾಯ

Team Udayavani, Sep 21, 2019, 3:54 PM IST

kopala-tdy-3

ಕೊಪ್ಪಳ: ತುಂಗಭದ್ರಾ ಜಲಾಶಯ ನಿರ್ಮಿಸುವುದು ಸೇರಿದಂತೆ ಬೋರ್ಡ್‌ ರದ್ದು ಮಾಡಿ ರೈತರ ಹಿತ ಕಾಯಬೇಕೆಂದು ಒತ್ತಾಯಿಸಿ ಸಿಂಧನೂರು ಭಾಗದ ರೈತರು ತಾಲೂಕಿನ ಮುನಿರಾಬಾದ್‌ ತುಂಗಭದ್ರಾ ಜಲಾಶಯದ ಬಳಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ವಿಷಯವಾಗಿ ಸಣ್ಣ ಗಲಾಟೆಯಾದ್ರೂ ದೊಡ್ಡ ಮಟ್ಟದ ಸುದ್ದಿಯಾಗುತ್ತದೆ. ಅಲ್ಲದೇ ತಮಿಳುನಾಡು ಚಿಕ್ಕ ಅರ್ಜಿ ಹಾಕಿದರೂ ದೊಡ್ಡ ಮಟ್ಟದ ರೈತರ ಹೋರಾಟ ನಡೆಯುತ್ತದೆ. ಆದರೆ ತುಂಗಭದ್ರಾ ವಿಷಯದಲ್ಲಿ ರೈತರಿಗೆ ದೊಡ್ಡ ಮಟ್ಟದ ಅನ್ಯಾಯ ನಡೆದರೂ ಸರ್ಕಾರ ಇತ್ತ ತಿರುಗಿ ನೋಡಲ್ಲ. ಮಾಧ್ಯಮಗಳೂ ತುಂಗಭದ್ರಾ ಡ್ಯಾಂ ವಿಷಯದ ಬಗ್ಗೆ ಕಾಳಜಿ ವಹಿಸಲ್ಲ ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಗುಡುಗಿದರು.

ದೃಶ್ಯ ಮಾಧ್ಯಮದವರಿಗೆ ಬೆಂಗಳೂರು, ಮೈಸೂರು, ಬೆಳಗಾವಿ ಸುದ್ದಿಗಳನ್ನು ಬಿಟ್ರೆ ಉಳಿದ ಜಿಲ್ಲೆಗಳಲ್ಲಿ ಸುದ್ದಿಗಳನ್ನೇ ಮಾಡಲ್ಲ. ಕೊಪ್ಪಳದಂಥ ಜಿಲ್ಲೆಗಳಲ್ಲಿ ನೀರಿಗಾಗಿ ಜನ ಸತ್ತರೂ ಸುದ್ದಿ ಆಗೋದೇ ಇಲ್ಲ. ನಮ್ಮ ಭಾಗದ ಜನರು ಎಲ್ಲವನ್ನೂ ಸಹಿಸುವ ಭಾವನೆ ತರವಲ್ಲ. ಕಳ್ಳರು ಇರೋದೆ ಕಳ್ಳತನ ಮಾಡೋಕೆ, ಕಳ್ಳರನ್ನು ನಿಯಂತ್ರಿಸಲು ಈ ಭಾಗದ ಯುವಕರು ಮುಂದಾಗಬೇಕು. ತುಂಗಭದ್ರಾ ಬೋರ್ಡ್‌ ರದ್ದು ಮಾಡಬೇಕು. ಕುತಂತ್ರದ ಲೆಕ್ಕದ ಬಗ್ಗೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಬೋರ್ಡ್‌ ರದ್ದು ಮಾಡಬಹುದಿತ್ತು. ಆದರೆ ಅಂದಿನ ಸರ್ಕಾರ ಅದನ್ನು ಗಮನಿಸಲಿಲ್ಲ. ನಾವೂ ಈಗ ಎಚ್ಚೆತ್ತುಕೊಂಡಿದ್ದೇವೆ. ಈ ಹಿಂದೆಯೇ ಬೋರ್ಡ್‌ನ ಅಧಿಕಾರಿಗಳನ್ನು ಬದಲಾಯಿಸುವ ಅವಕಾಶವನ್ನು ಕೈ ಚೆಲ್ಲಿದ್ದೇವೆ.

ಕಾರ್ಮಿಕರಿಗೆ, ಹಮಾಲರಿಗೆ, ಲಾರಿ ಚಾಲಕರಿಗೆ ಕೆಲಸ ಇಲ್ಲದಂತಾಗಿದೆ. ರೈತ ಬೆಳೆದರೆ ಎಲ್ಲರಿಗೂ ಕೆಲಸ ದೊರೆಯಲಿದೆ. ಇಂತಹ ಹೋರಾಟಗಳಿಂದ ಸರಕಾರಕ್ಕೆ, ಅಧಿಕಾರಿಗಳಿಗೆ ಭಯ ಬರುತ್ತೆ. ಪಕ್ಷಗಳ ರೈತರಾಗಬೇಡಿ ಪ್ರತಿಯೊಬ್ಬರೂ ರೈತರ ಹಿತ ಕಾಯಲು ಮುಂದಾಗಿ ಎಂದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲಾಯಿತು. ಶೀಘ್ರ ಐಸಿಸಿ ಸಭೆ ನಡೆಸಿ ಅ ಧಿಕಾರಿಗಳು ಸರಿಯಾದ ಲೆಕ್ಕ ಕೊಡಬೇಕು. ಒಂದು ತಿಂಗಳಲ್ಲಿ ನವಲಿ ಸಮಾಂತರ ಜಲಾಶಯ ಟೆಂಡರ್‌ ಪ್ರಕ್ರಿಯೆ ಆರಂಭಗೊಳ್ಳಬೇಕು.

ಬೋರ್ಡ್‌ ಅಧ್ಯಕ್ಷರು, ಕಾರ್ಯದರ್ಶಿ ತಿಂಗಳೊಳಗೆ ಬದಲಾಗಬೇಕು ಎಂದು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ರಾಜಶೇಖರ ಹಿಟ್ನಾಳ, ಬಾದರ್ಲಿ ಬಸನಗೌಡ, ಬೋಸರಾಜ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.