ಹಿನ್ನಡೆ-ಮುನ್ನಡೆ ಕ್ಷೇತ್ರದತ್ತ ಕಣ್ಣಿಟ್ಟ ಅಭ್ಯರ್ಥಿಗಳು


Team Udayavani, Apr 11, 2019, 5:10 PM IST

Udayavani Kannada Newspaper
ಕೊಪ್ಪಳ: ಕ್ಷೇತ್ರವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ, ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಎಡೆಬಿಡದೇ ಅಬ್ಬರದ ಪ್ರಚಾರ ನಡೆಸಿದ್ದು, ಅದರಲ್ಲೂ ಕಳೆದ ಬಾರಿ ಚುನಾವಣೆಯಲ್ಲಿ
ಹಿನ್ನಡೆ-ಮುನ್ನಡೆ ಕೊಟ್ಟ ಕ್ಷೇತ್ರಗಳ ಮೇಲೆಯೇ ಹೆಚ್ಚು ಪ್ರಚಾರಕ್ಕಿಳಿದಿದ್ದಾರೆ.
ಹೌದು.. ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಬಸವರಾಜ ಹಿಟ್ನಾಳ ಹಾಗೂ ಬಿಜೆಪಿಯಿಂದ ಸಂಗಣ್ಣ ಕರಡಿ ಅವರು ಸ್ಪರ್ಧಿಸಿದ್ದರು. ವಿಶೇಷವೆಬಂತೆ, ಕಳೆದ ಅವಧಿಯಲ್ಲಿ ಕುಷ್ಟಗಿಯಲ್ಲಿ ಬಿಜೆಪಿಯ ದೊಡ್ಡನಗೌಡ ಪಾಟೀಲ್‌ ಅವರನ್ನು ಹೊರತುಪಡಿಸಿ ಇನ್ನುಳಿದ ಏಳು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಶಾಸಕರೇ ಅಧಿಕಾರದಲ್ಲಿದ್ದರು. ಅದರ ಮಧ್ಯೆಯೂ ಸಂಗಣ್ಣ ಕರಡಿ ಮೋದಿ ಅಲೆಯಲ್ಲೇ ಗೆಲುವಿನ ನಗೆ ಬೀರಿದ್ದರು.
ಕರಡಿಗೆ ನಾಲ್ಕು ಕ್ಷೇತ್ರದಲ್ಲಿ
 ಮುನ್ನಡೆ: ಕಳೆದ ಚುನಾವಣೆಯಲ್ಲಿ ಸಂಗಣ್ಣ ಕರಡಿ ಅವರು ನಾಲ್ಕು ಬಾರಿ ಶಾಸಕರಾಗಿದ್ದ ಕೊಪ್ಪಳ ಕ್ಷೇತ್ರದ ಮತದಾರರೇ ಅವರಿಗೆ ಕೈ ಕೊಟ್ಟಿದ್ದರು. ಕರಡಿ ಸಿಂಧನೂರು ಕ್ಷೇತ್ರದಲ್ಲಿ-69,752, ಮಸ್ಕಿ ಕ್ಷೇತ್ರದಲ್ಲಿ -53,421, ಕನಕಗಿರಿ
ಕ್ಷೇತ್ರದಲ್ಲಿ-69,337, ಯಲಬುರ್ಗಾ ಕ್ಷೇತ್ರದಲ್ಲಿ 63,401 ಮತ ಪಡೆದಿದ್ದರು.
ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಬಸವರಾಜ ಹಿಟ್ನಾಳ ಅವರಿಗೆ ಸಿಂಧನೂರು ಕ್ಷೇತ್ರದಲ್ಲಿ 49,660, ಮಸ್ಕಿಯಲ್ಲಿ 38,956, ಕನಕಗಿರಿ ಕ್ಷೇತ್ರದಲ್ಲಿ 55,809, ಯಲಬುರ್ಗಾದಲ್ಲಿ 55,683 ಮತಗಳು ಬಂದಿದ್ದವು. ಕರಡಿ ಈ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದರು.
ನಾಲ್ಕು ಕ್ಷೇತ್ರಗಳಲ್ಲಿ ಹಿಟ್ನಾಳ ಕೈ ಮೇಲು: ಕರಡಿ ಅವರಿಗೆ ನಾಲ್ಕು ಕ್ಷೇತ್ರ ಮುನ್ನಡೆ ಕೊಟ್ಟಿದ್ದರೆ, ಹಿಟ್ನಾಳ ಅವರಿಗೆ ನಾಲ್ಕು ಕ್ಷೇತ್ರಗಳು ಮುನ್ನಡೆ ಕೊಟ್ಟಿವೆ. ಗಂಗಾವತಿ-63,705, ಕೊಪ್ಪಳ-79,349, ಸಿರಗುಪ್ಪ-54,921, ಕುಷ್ಟಗಿ-55,793 ಮತದಾರರು ಹಿಟ್ನಾಳ ಕೈ ಹಿಡಿದಿದ್ದರು. ಕರಡಿ ಗಂಗಾವತಿ-53,460, ಕೊಪ್ಪಳ- 68,541, ಸಿರಗುಪ್ಪಾ-53,913, ಕುಷ್ಟಗಿ-54,363 ಮತ ಪಡೆದು ಹಿನ್ನಡೆ ಅನುಭವಿಸಿದ್ದರು. ಅಚ್ಚರಿಯ ವಿಷಯವೆಂದರೆ ಕುಷ್ಟಗಿಯಲ್ಲಿ ಬಿಜೆಪಿ ಶಾಸಕರಿದ್ದರೂ ಕರಡಿ ಮತ ಪಡೆಯುವಲ್ಲಿ ಹಿನ್ನಡೆ ಅನುಭವಿಸಿದ್ದರು.
ಹಿನ್ನಡೆ-ಮುನ್ನಡೆಯದ್ದೆ ಲೆಕ್ಕಾಚಾರ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಬಸವರಾಜ ಹಿಟ್ನಾಳ ಪುತ್ರ ರಾಜಶೇಖರ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮತ್ತೆ ಕರಡಿ ಸಂಗಣ್ಣ ಸ್ಪರ್ಧಿಸಿದ್ದಾರೆ. ಈ ಬಾರಿ ವಿಶೇಷವೆಂದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೈ-ಕಮಲಕ್ಕೆ ಹಿನ್ನಡೆ ಹಾಗೂ ಮುನ್ನಡೆ ಕೊಟ್ಟ ಕ್ಷೇತ್ರಗಳ ಮೇಲೆಯೇ ಹೆಚ್ಚಿನ ಕಾಳಜಿ
ವಹಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಸಿಂಧನೂರು, ಮಸ್ಕಿ, ಕನಕರಿಗಿ, ಯಲಬುರ್ಗಾ ಭಾಗದಲ್ಲೇ ಹೆಚ್ಚಿನ ಪ್ರಚಾರ ಮಾಡುತ್ತಿದ್ದಾರೆ.
ಈಗಾಗಲೇ 2-3 ಬಾರಿ ಸಭೆ, ಸಮಾರಂಭ ನಡೆಸಿ ಮತಯಾಚನೆ ಮಾಡಿದ್ದಾರೆ. ಶಿವರಾಜ ತಂಗಡಗಿ ಸೇರಿದಂತೆ ಹಲವು ಮುಖಂಡರ ಪಡೆ ಕಟ್ಟಿಕೊಂಡು ಹಿಟ್ನಾಳ ಕುಟುಂಬ ಹಗಲಿರುಳು ಮತಬೇಟೆಗೆ ಮುಂದಾಗಿದೆ. ಇನ್ನೂ ಸಂಗಣ್ಣ
ಕರಡಿಯೂ ಟಿಕೆಟ್‌ ಘೋಷಣೆಯಾದ ಬೆನ್ನಲ್ಲೇ ಎಲ್ಲ ಸ್ವಾಮೀಜಿಗಳನ್ನು, ಮಸೀದಿಗಳ ಧರ್ಮಗುರುಗಳನ್ನು ಭೇಟಿ ಮಾಡಿದ್ದು ಈ ಬಾರಿ ವಿಶೇಷವಾಗಿದೆ.
ಕೈ ಸಮಾವೇಶ, ಕಮಲದ ರ್ಯಾಲಿ: ಕಾಂಗ್ರೆಸ್‌ನ ಅಭ್ಯರ್ಥಿ ಜಿಲ್ಲಾ ಕೇಂದ್ರ ಕೊಪ್ಪಳ ಕ್ಷೇತ್ರದಲ್ಲಿ ತಕ್ಕ ಮಟ್ಟಿಗೆ ಪ್ರಚಾರ ನಡೆಸುತ್ತಿದ್ದರೆ, ಹೊರ ಕ್ಷೇತ್ರಗಳಲ್ಲಿಯೇ ಹೆಚ್ಚು ಮುತುವರ್ಜಿ ವಹಿಸಿದ್ದಾರೆ.
ಈಗಾಗಲೇ ಕಾಂಗ್ರೆಸ್‌ ಸಿದ್ದರಾಮಯ್ಯ ಅವರಿಂದ ಬೃಹತ್‌ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಆದರೆ ಕಮಲ ಕೇವಲ ರ್ಯಾಲಿ ನಡೆಸುವ ಮೂಲಕ ಮತಯಾಚಿಸಿದೆ. ಅದರ ಜೊತೆಗೆ ಮೋದಿ ಅವರನ್ನು ಗಂಗಾವತಿಗೆ ಕರೆಸುವ
ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಶಾಸಕರಿದ್ದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳು ಹಿನ್ನಡೆ-ಮುನ್ನಡೆ ಕೊಟ್ಟ ಕ್ಷೇತ್ರಗಳ ಮೇಲೆಯೇ ಕಾಳಜಿ ವಹಿಸಿ ಪ್ರಚಾರದಲ್ಲಿ ತೊಡಗಿದ್ದಾರೆ.
„ದತ್ತು ಕಮ್ಮಾರ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.