ದಲಿತ ಕುಟುಂಬಗಳ ವಿರುದ್ಧ ಕೇಸ್ : ಮರು ತನಿಖೆಗೆ ಒತ್ತಾಯ
Team Udayavani, Sep 22, 2019, 11:34 AM IST
ಕನಕಗಿರಿ: ಸಮೀಪದ ತಿಪ್ಪನಾಳ ಕೆರೆಯಲ್ಲಿ 60 ವರ್ಷಗಳಿಂದ 26 ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿದ್ದವು. ಆದರೆ ನಕಲಿ ದಾಖಲೆ ಸೃಷ್ಟಿಸಿ 26 ದಲಿತ ಕುಟುಂಬಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಆ ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಅಖೀಲ ಭಾರತ ಕೃಷಿ ಗ್ರಾಮೀಣ ಕಾರ್ಮಿಕ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ನಂತರ ಪ್ರಗತಿಪರ ಹೋರಾಟಗಾರ ಜೆ. ಭಾರಧ್ವಾಜ್ ಮಾತನಾಡಿ, ಸಮೀಪದ ತಿಪ್ಪನಾಳ ಕೆರೆಯಲ್ಲಿರುವ ಚಿರಸ್ಥಾಯಿ ಸೂರ್ಯ ಕಂಪನಿಯು ಡಿ.ಕೆ. ಶಿವಕುಮಾರ ಹಾಗೂ ಲಕ್ಷೀ¾ ಹೆಬ್ಟಾಳ್ಕರ್ ಪಾಲುದಾರಿಕೆಯಲ್ಲಿದೆ. ಆದರೆ 60 ವರ್ಷಗಳಿಂದ ಆ ಭೂಮಿಯಲ್ಲಿ 26 ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿವೆ. ಚಿರಸ್ಥಾಯಿ ಸೂರ್ಯಲಿ. ಕಂಪನಿಗೆ ಭೂಮಿ ನೀಡಿ ದಲಿತ ಕುಟುಂಬಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಕೂಡಲೇ ರಾಜ್ಯ ಸರ್ಕಾರ ಈ ಭೂ ವಿವಾದ ಪ್ರಕರಣವನ್ನು ಮರು ತನಿಖೆಯನ್ನು ಮಾಡಿ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದರು. ಬಳಿಕ ಅಖೀಲ ಭಾರತ ಕೃಷಿ ಗ್ರಾಮೀಣ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಕೆಂಚಪ್ಪ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಡಿ.ಕೆ. ಶಿವಕುಮಾರ ಪಾಲುದಾರಿಕೆಯ ಅನೇಕ ಕಂಪನಿಗಳಿದ್ದು, ಅವುಗಳಲ್ಲಿ ತಿಪ್ಪನಾಳ ಕೆರೆಯ ಭೂಮಿಯನ್ನು ಅಕ್ರಮ ದಾಖಲೆಗಳಿಂದ ಕಬಳಿಸಿ ಸೋಲಾರ್ ಪ್ಲಾಂಟ್ಗಳನ್ನು ಅಳವಡಿಸಿದ್ದಾರೆ. ಆ ಭೂಮಿಯನ್ನು ನಂಬಿದ 26 ದಲಿತ ಕುಟುಂಬಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬೀದಿಪಾಲು ಮಾಡಿದ್ದಾರೆ. ಕೂಡಲೇ ಆ ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದರು.
ಪಾಮಣ್ಣ ಅರಳಿಗನೂರು, ಸಣ್ಣ ಹನುಮಂತಪ್ಪ, ನೀಲಕಂಠ ಬಡಿಗೇರ, ಪಂಪಾಪತಿ ಜಾಲಿಹಾಳ, ಚಂದ್ರಶೇಖರ ಸೋಡಿ ಸೇರಿದಂತೆ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ