ಅವಮಾನಕರ ರೀತಿಯಲ್ಲಿ ಪ್ರಧಾನಿ ಮೋದಿ ಪೋಟೊ ಫೇಸ್ ಬುಕ್ ನಲ್ಲಿ ಶೇರ್ ಮಾಡಿದವರ ವಿರುದ್ದ ಕೇಸ್
Team Udayavani, Jun 27, 2020, 5:22 PM IST
ಗಂಗಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪೋಟೊಗೆ ಸೀರೆಯುಡಿಸಿದಂತೆ ಎಡಿಟ್ ಮಾಡಿ ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಕೊಪ್ಪಳ ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯದರ್ಶಿ ಶಿವಪ್ಪ ಮಾದಿಗ ತಾಲೂಕು ಅಧ್ಯಕ್ಷ ಬಸವರಾಜ ಮಾದಿಗ ನಗರಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಇಸ್ಲಾಂಪೂರ ಗಂಜ್ ಏರಿಯಾದ ಗೋಡೌನ್ ಹತ್ತಿರದ ವಾಸವಾಗಿರುವ ನಹೀಮ್ ಅಹಮದ್ ಎಂಬ ವ್ಯಕ್ತಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಫೋಟೊವನ್ನು ಸೀರೆಯುಡಿಸಿದಂತೆ ಎಡಿಟ್ ಮಾಡಿ ಆಕಾಶ ಎನ್ ಜಿ ಎನ್ನುವ ಫೇಸ್ ಬುಕ್ ಖಾತೆಯಲ್ಲಿ ಹಾಕಿದ್ದನ್ನು ನಹೀಮ್ ಅಹಮದ್ ಶೇರ್ ಮಾಡಿದ್ದಾರೆ.
ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ನರೇಂದ್ರ ಮೋದಿಯವರಿಗೆ ಅವಮಾನವಾಗುವಂತಹ ರೀತಿಯಲ್ಲಿ ನಡೆದುಕೊಂಡಿರುವ ಆಕಾಶ ಎನ್.ಜಿ ಹಾಗೂ ನಹೀಮ್ ಅಹಮದ್ ಇವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರಾದ ಶಿವಪ್ಪ ಮಾದಿಗ,ಬಸವರಾಜ ಮಾದಿಗ ದೂರು ನೀಡಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’