ಸಂಭ್ರಮದ ತಿಂಥಣಿ ಮೌನೇಶ್ವರ ಜಾತ್ರೆ
Team Udayavani, May 20, 2019, 4:17 PM IST
ನಾರಾಯಣಪುರ: ಜಗದ್ಗುರು ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯೂ ಪುರವಂತರ ಸೇವೆಯೊಂದಿಗೆ, ಮಂಗಲ ವಾದ್ಯ ಮೇಳಗಳೊಟ್ಟಿಗೆ ಶನಿವಾರ ಸಂಭ್ರಮದಿಂದ ಜರುಗಿತು.
ಪಲ್ಲಕ್ಕಿ ಉತ್ಸವ ಮುನ್ನಾ ದಿನವಾದ ಶುಕ್ರವಾರ ಗುಹಾ ದೇವಾಲಯದಲ್ಲಿರುವ ದೇವರ ಉತ್ಸವ ಮೂರ್ತಿಗಳನ್ನು ಹಾಗೂ ಪೂಜಾ ಸಾಮಗ್ರಿಗಳನ್ನು ಹೊರ ತೆಗೆದು ಸಕಲ ವಾದ್ಯ ಮೇಳಗಳೊಂದಿಗೆ ಕೃಷ್ಣಾ ನದಿ ತೀರಕ್ಕೆ ತೆರಳಿ ಗಂಗಾ ಪೂಜೆಯನ್ನು ನೆರವೇರಿಸಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಅಹೋರಾತ್ರಿ ಭಜನೆ ನಡೆಸಲಾಯಿತು.
ವಿಶೇಷ ಜೋಡು ಪಲ್ಲಕ್ಕಿ ಉತ್ಸವ: ಶನಿವಾರ ಬೆಳಗ್ಗೆ ಶ್ರೀ ಮೌನೇಶ್ವರರ ಹಾಗೂ ವೀರಭದ್ರದೇವರ ಉತ್ಸವ ಮೂರ್ತಿ ಹಾಗೂ ಪೂಜಾ ಸಾಮಗ್ರಿಗಳನ್ನು ಹೊತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಗೆ ದೇವಸ್ಥಾನದಿಂದ ಚಾಲನೆ ದೊರೆಯಿತು. ಮೆರವಣಿಗೆ ಪಟ್ಟಣದ ಮಹರ್ಷಿ ವಾಲ್ಮೀಕಿ ವೃತ್ತ ಮಾರ್ಗದಿಂದ ಬಂಡೆಗುಡ್ಡ ಕ್ಯಾಂಪ್, ಕೆಬಿಜೆಎನ್ನೆಲ್ ವಸತಿ ಗೃಹದ ಮಾರ್ಗವಾಗಿ ಆಗಮಿಸಿ ಶ್ರೀ ಮೌನೇಶ್ವರ ದೇವಸ್ಥಾನಕ್ಕೆ ತಲುಪಿತು. ರಾತ್ರಿಯೇ ದೇವರುಗಳ ಪೂಜಾ ಸಾಮಗ್ರಿಗಳನ್ನು ಗುಹಾದೇವಾಲಯದಲ್ಲಿ ಪುನಃ ಪ್ರವೇಶವಾಗುವ ಮೂಲಕ ಜಾತ್ರೆಯೂ ಮಂಗಲೋತ್ಸವಾಯಿತು.
ಇದೇ ಸಂದರ್ಭದಲ್ಲಿ ಗ್ರಾಮ ದೇವತೆ ದುರ್ಗಾದೇವಿಗೆ ಉಡಿ ತುಂಬಲಾಯಿತು. ಗ್ರಾಮದ ಮಹಿಳೆಯರು ಇಷ್ಟ ದೇವರಾದ ತಿಂಥಣಿ ಮೌನೇಶ್ವರ ಹಾಗೂ ಶ್ರೀ ವೀರಭದ್ರ ದೇವರುಗಳ ದರ್ಶನ ಪಡೆದು ಕಾಯಿ ಕರ್ಪೂರ, ನೈವೇದ್ಯ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ದೈವ ಮಂಡಳಿಯಿಂದ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಭಕ್ತಿ ಭಾವದಿ, ವೀರಾವೇಶದಿಂದ ಪುರವಂತರ ಸೇವೆಯ ಪ್ರದರ್ಶನ ನೋಡುಗರ ಮಂತ್ರ ಮುಗ್ದರನ್ನಾಗಿಸಿತು. ಮೆರವಣಿಗೆಯಲ್ಲಿ ಯುವಕರು ತಿಂಥಣಿ ಮೌನೇಶ್ವರ ಮಹಾರಾಜಕೀ, ಶ್ರೀ ವೀರಭದ್ರದೇವರ ಹೆಸರಲ್ಲಿ ಜಯಘೋಷಗಳನ್ನು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ