ಕೇಂದ್ರ ಸರ್ಕಾರ ಸರಿಸಮಾನ ವೇತನ ನೀಡಲು ಆಗ್ರಹ

ತಾಲೂಕು ಕೇಂದ್ರದಲ್ಲಿ ಸುಸಜ್ಜಿತವಾದ ನೌಕರರ ಭವನದ ಕೊರತೆಯಿದೆ.

Team Udayavani, Jan 11, 2022, 4:30 PM IST

ಕೇಂದ್ರ ಸರ್ಕಾರ ಸರಿಸಮಾನ ವೇತನ ನೀಡಲು ಆಗ್ರಹ

ಕಾರಟಗಿ: ಕೇಂದ್ರ ಸರ್ಕಾರದ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಯನ್ನು ರಾಜ್ಯ ಸರ್ಕಾರದ ನೌಕರರಿಗೂ ನೀಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಶಾಸಕ ಬಸವರಾಜ ದಢೇಸುಗೂರು ಅವರ ಮುಖಾಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಾದ ನಾಗರಾಜ್‌ ಜುಮ್ಮಣ್ಣನವರ್‌ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳಲ್ಲಿ ಭಾರಿ ವ್ಯತ್ಯಾಸವಿದೆ. ಒಂದೇ ಸ್ಥಳದಲ್ಲಿಒಂದೇ ಕೆಲಸ ಮಾಡುವ ನೌಕರರ ನಡುವೆ ವೇತನ ವ್ಯತ್ಯಾಸ ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು.

ಹಳೆ ಪಿಂಚಣಿ ಇರಲಿ: ನೂತನ ಪಿಂಚಣಿ ಯೋಜನೆ ನೌಕರರಿಗೆ ಮಾರಕವಾಗಿದೆ. ರಾಜ್ಯದಲ್ಲಿ ಎನ್‌ಪಿಎಸ್‌ಗೆ ಒಳಪಡುವ 2.40 ಲಕ್ಷ ನೌಕರರು ಹಾಗೂ ಅವರ ಕುಟುಂಬಗಳ ಹಿತದೃಷ್ಟಿಯಿಂದ ನೂತನ ಪಿಂಚಣಿ ಯೋಜನೆ ರದ್ದುಪಡಿಸಬೇಕು. ಹಿಂದಿನಂತೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರಲ್ಲದೇ ಶಿಕ್ಷಣ ಇಲಾಖೆಯ ಎಲ್ಲ ವೃಂದಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರ ತಿದ್ದುಪಡಿ ಮಾಡಿ ಶೀಘ್ರ ಅನುಷ್ಠಾನಗೊಳಿಸಬೇಕು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅನುಭವ ಮತ್ತು ವಿದ್ಯಾರ್ಹತೆಯನ್ನು ಪರಿಗಣಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಲ್ಲದೇ ಪದೋನ್ನತಿ ನೀಡಬೇಕು ಎಂದರು.

ನಂತರ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸರ್ಧಾರ ಅಲಿ ಮಾತನಾಡಿ, ತಾಲೂಕಿನಲ್ಲಿ ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರಿದ್ದು, ಅವರೆಲ್ಲರಿಗೆ ತಾಲೂಕು ಕೇಂದ್ರದಲ್ಲಿ ಸುಸಜ್ಜಿತವಾದ ನೌಕರರ ಭವನದ ಕೊರತೆಯಿದೆ. ಸರ್ಕಾರವೇನೋ 10 ಗುಂಟೆ ಜಮೀನು ಮಂಜೂರು ಮಾಡಿದೆ. ಆದರೆ ಅಷ್ಟು ಶುಲ್ಕ ಭರಿಸಲು ನಮ್ಮಿಂದ ಸಾಧ್ಯವಿಲ್ಲ.

ಕೂಡಲೇ ಶಾಸಕರು 40 ಮತ್ತು 60 ಅಡಿ ಜಾಗೆ ಮಂಜೂರು ಮಾಡಿಸಿ ಭವನಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕೋರಿಕೊಂಡರು. ಸಂಘಕ್ಕೆ ಒಂದು ಸ್ವಂತ ಕಟ್ಟಡವಿದ್ದರೆ ಅಲ್ಲಿ ವಾಚನಾಲಯ ಹಾಗೂ ಸಭೆ, ಸಮಾರಂಭ ಮಾಡಲು ಅನುಕೂಲವಾಗುತ್ತದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕೋಶಾಧ್ಯಕ್ಷ ಸುಶೀಲೇಂದ್ರರಾವ್‌, ಜಿಲ್ಲಾ ಕಾರ್ಯಾಧ್ಯಕ್ಷ ಶಿವಪ್ಪ ಜೋಗಿನ್‌, ಜಿಲ್ಲಾ ಖಜಾಂಚಿ ದೇಶಪಾಂಡೆ, ಜಿಲ್ಲಾ ನಿರ್ದೇಶಕ ಮಾರುತಿ ಮಂಗಳಾಪುರ, ಗೋಪಾಲ, ತಾಲೂಕು ಕಾರ್ಯದರ್ಶಿ ತಿಮ್ಮಣ್ಣ ನಾಯಕ್‌, ಗೌರವಾಧ್ಯಕ್ಷ ಶಶಿಧರಸ್ವಾಮಿ, ಉಪಾಧ್ಯಕ್ಷರಾದ ಶಂಕ್ರಮ್ಮ, ಕನಕಪ್ಪ ನಾಯಕ್‌, ರಮೇಶ ಇಲ್ಲೂರು, ಖಜಾಂಚಿ ಯಂಕೋಬ, ಶ್ಯಾಮಸುಂದರ್‌, ಗಂಗಪ್ಪ ಹಾಸ್ಟೆಲ್‌, ವೀರನಗೌಡ ಹಣವಾಳ, ಶರಣಪ್ಪ ಗೌರಿಪುರ, ಶ್ರೀಕಾಂತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಚನ್ನಬಸಪ್ಪ ವಕ್ಕಳದ್‌, ದ್ಯಾಮಣ್ಣ ಬೆನಕಟ್ಟಿ, ಜಿಲ್ಲಾ ಖಜಾಂಚಿ ಪರುಶರಾಮ ಗಡ್ಡಿ, ನಿರ್ದೇಶಕರಾದ ಅಮರಮ್ಮ, ನಾಗರತ್ನ, ಮಹಾಂತಮ್ಮ ಮೇಟಿ, ರಾಜೇಶ ಕೊಟಬಾಗಿ, ಕೀರು ಪವಾರ್‌, ಎನ್‌ಪಿಎಸ್‌ ಅಧ್ಯಕ್ಷ ಮಲ್ಲೇಶ ನಾಯಕ್‌ ಸೇರಿ ಇತರರಿದ್ದರು.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.