ಶೂ-ಸಮವವಸ್ತ್ರಕ್ಕೆ ಪ್ರಮಾಣಪತ್ರ ಕಡ್ದಾಯ


Team Udayavani, Nov 3, 2018, 4:57 PM IST

3-november-19.gif

ಕೊಪ್ಪಳ: ಜಿಲ್ಲೆಯಲ್ಲಿ ಶಾಲಾ ಸಮವಸ್ತ್ರ ಹಾಗೂ ಶೂ ಖರೀದಿಯಲ್ಲಿ ಭರ್ಜರಿ ಆಟವಾಡುತ್ತಿದ್ದ ಏಜೆನ್ಸಿಗಳಿಗೆ ಜಿಲ್ಲಾ ಪಂಚಾಯಿತಿ ಈ ಬಾರಿ ಶಾಕ್‌ ನೀಡಿದೆ. ಯಾವುದೇ ಏಜೆನ್ಸಿ ಶಾಲೆಗಳಿಗೆ ಬಟ್ಟೆ ಪೂರೈಕೆ ಮಾಡುವ ಮುನ್ನ ಗುಣಮಟ್ಟದ ಪ್ರಮಾಣ ಪತ್ರವನ್ನು ತೋರಿಸುವುದು ಕಡ್ಡಾಯ ಮಾಡಿದೆ. ಇದು ಏಜೆನ್ಸಿಗಳಿಗೆ ನುಂಗಲಾರದ ತುಪ್ಪದಂತಾಗಿದೆ.

ಹೌದು. ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಸರ್ಕಾರದಿಂದ ವಿತರಣೆ ಮಾಡುವ ಸಮವಸ್ತ್ರ ಪೂರೈಕೆಗೆ ಪ್ರಭಾವಿಗಳ ಆಟ ಭರ್ಜರಿಯಾಗಿ ನಡೆಯುತ್ತಿತ್ತು. ವಿಶೇಷವೆಂದರೆ, ರಾಜ್ಯ ಶಿಕ್ಷಣ ಇಲಾಖೆಯಿಂದ ಆಯಾ ಶಾಲೆ- ಎಸ್‌ ಡಿಎಂಸಿ ಖಾತೆಗೆ ಅನುದಾನ ನೇರವಾಗಿ ಜಮಾ ಮಾಡುವ ವ್ಯವಸ್ಥೆಯಿದ್ದರೂ ಸಮವಸ್ತ್ರ, ಶೂ ಖರೀದಿಯಲ್ಲಿ ಆಂತರಿಕ ರಾಜಕಾರಣವೇ ಜೋರಾಗಿ ನಡೆಯುತ್ತಿತ್ತು. ಮೇಲ್ನೋಟಕ್ಕೆ ಬಿಇಒ, ಡಿಡಿಪಿಐ ಹಸ್ತಕ್ಷೇಪ ಇಲ್ಲ ಎಂದರೂ ಪರೋಕ್ಷವಾಗಿ ಸೂಚನೆ ನೀಡುವ ಮಾತುಗಳು ಕೇಳಿ ಬರುತ್ತಿದ್ದವು.

ಇನ್ನೂ ಜಿಲ್ಲಾದ್ಯಂತ ಎಲ್ಲೆಂದರಲ್ಲಿ ತಲೆ ಎತ್ತಿದ್ದ ಏಜೆನ್ಸಿಗಳು ಆಯಾ ಶಾಲೆಗೆ ಭೇಟಿ ನೀಡಿ ಶಾಲಾ ಸಮವಸ್ತ್ರ ನಾವು ಪೂರೈಸುತ್ತೇವೆ ಎಂದು ದುಂಬಾಲು ಬೀಳುತ್ತಿದ್ದವು. ಇದರಿಂದ ಎಸ್‌ಡಿಎಂಸಿ ಆಟವೂ ಜೋರಾಗಿ ನಡೆಯುತ್ತಿತ್ತು. ಶಾಲಾ ಮುಖ್ಯ ಶಿಕ್ಷಕರು ಏಜೆನ್ಸಿಗಳ ಜೊತೆ ಒಪ್ಪಂದ ಮಾಡಿಕೊಂಡು ಸಮವಸ್ತ್ರ ಪಡೆಯುತ್ತಿದ್ದರು. ಆದರೆ, ಆ ಸಮವಸ್ತ್ರಗಳು ಸಹ ಗುಣಮಟ್ಟ ಇಲ್ಲದಿರುವ ಕುರಿತು ಆಪಾದನೆಗಳು ಕೇಳಿ ಬರುತ್ತಿದ್ದವು. ಇದು ವ್ಯಾಪಕ ಚರ್ಚೆಗೆ ಎಡೆಮಾಡಿಕೊಡುತ್ತಿತ್ತು. ಏಜೆನ್ಸಿಗಳಿಗೆ ಬ್ರೆಕ್‌ ಹಾಕಬೇಕೆನ್ನುವ ಕೂಗು ಎಲ್ಲೆಡೆ ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತಿರುವ ಜಿಪಂ ಗುಣಮಟ್ಟದ ಕುರಿತು ಮಾತನ್ನಾಡಿದೆ.

ಪ್ರಮಾಣಪತ್ರ ಅವಶ್ಯ: ಇನ್ಮುಂದೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆ ಮಾಡುವೆವು ಎನ್ನುವ ಏಜೆನ್ಸಿಗಳು ಸಮವಸ್ತ್ರಗಳ ಪೂರೈಕೆಯ ಕುರಿತು ಬೆಂಗಳೂರಿನಿಂದ ಗುಣಮಟ್ಟದ ಪ್ರಮಾಣಪತ್ರ ತರುವುದು ಅವಶ್ಯವಾಗಿದೆ. ಅದನ್ನು ಶಾಲೆಗಳಲ್ಲಿ ತೋರಿಸಿ ಸಮವಸ್ತ್ರ ಶೂಗಳನ್ನು ಪೂರೈಕೆ ಮಾಡಬಹುದಾಗಿದೆ. ಒಂದು ವೇಳೆ ಗುಣಮಟ್ಟದ ಪ್ರಮಾಣಪತ್ರವನ್ನು ಶಾಲಾ ಮುಖ್ಯ ಶಿಕ್ಷಕರು ನೋಡದೇ ಬಟ್ಟೆಗಳನ್ನು ಖರೀದಿ ಮಾಡಿದರೆ ಆಯಾ ಶಾಲೆಗಳ ಮುಖ್ಯ ಶಿಕ್ಷಕರೇ ಇದಕ್ಕೆ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಖಡಕ್ಕಾಗಿ ಸೂಚನೆ ನೀಡಿದೆ.

ಇನ್ನೂ ಜಿಲ್ಲೆಯಲ್ಲಿನ ಹಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರದಿಂದ ಲಕ್ಷಾಂತರ ಮೊತ್ತದ ಅನುದಾನ ಎಸ್‌ಡಿಎಂಸಿ ಖಾತೆಗೆ ಜಮೆಯಾಗಲಿದೆ. ಈ ಅನುದಾನದ ಮೊತ್ತ ಲಕ್ಷ ರೂ. ದಾಟಿದರೆ ಶಾಲೆ ಮುಖ್ಯ ಶಿಕ್ಷಕರು ಟೆಂಡರ್‌ ಕರೆದು ಸಮವಸ್ತ್ರಗಳ ಖರೀದಿ ಮಾಡಬೇಕು. ದೊಡ್ಡ ಮೊತ್ತದ ಹಣವನ್ನು ಟೆಂಡರ್‌ ಕರೆಯದೇ ಬಟ್ಟೆಗಳ ಖರೀದಿಸುವಂತಿಲ್ಲ.

ಇದರಲ್ಲೂ ಶೂ-ಸಮವಸ್ತ್ರಗಳ ಗುಣಮಟ್ಟದ ಪರಿಶೀಲನೆ ಅವಶ್ಯವಾಗಿ ನಡೆಯಲಿದೆ. ಇಲ್ಲಿ ದೂರುಗಳು ಕೇಳಿ ಬಂದರೆ ಜಿಲ್ಲಾ, ತಾಲೂಕು ಹಂತದ ಸಮಿತಿ ತನಿಖೆ ನಡೆಸಲಿವೆ ಎನ್ನುವ ಸಂದೇಶವನ್ನು ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿದೆ. ಒಟ್ಟಾರೆ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ದರಕ್ಕೆ ಬಟ್ಟೆ ಖರೀದಿಸಿ ಮಕ್ಕಳಿಗೆ ಪೂರೈಕೆ ಮಾಡುತ್ತಿರುವುದಕ್ಕೆ ಜಿಪಂ ಈ ಬಾರಿ ಮೊದಲೇ ಖಡಕ್‌ ಸೂಚನೆ ನೀಡಿದೆ. ಗುಣಮಟ್ಟದ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಏಜೆನ್ಸಿಗಳು ಸಮವಸ್ತ್ರ-ಶೂ ಪೂರೈಕೆ ಮಾಡುವ ಮುನ್ನ ಶಾಲಾ ಮುಖ್ಯ ಶಿಕ್ಷಕರಿಗೆ ಗುಣಮಟ್ಟದ ಪ್ರಮಾಣಪತ್ರ ತೋರಿಸಬೇಕು. ನಂತರ ಶಾಲೆಗಳಿಗೆ ಪೂರೈಕೆ ಮಾಡಬೇಕು. ಪ್ರಮಾಣಪತ್ರ ಇಲ್ಲದೇ ಸಮವಸ್ತ್ರ ಖರೀದಿ ಮಾಡುವಂತಿಲ್ಲ. ಖರೀದಿ ಮಾಡಿದರೆ ಅಂತಹ ಶಾಲೆಗಳ ಮುಖ್ಯ ಶಿಕ್ಷಕರೇ ಹೊಣೆಯಾಗಲಿದ್ದಾರೆ. ಈ ಕುರಿತು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದೇವೆ.
·ವೆಂಕಟರಾಜಾ, ಜಿಪಂ ಸಿಇಒ ಕೊಪ್ಪಳ

„ದತ್ತು ಕಮ್ಮಾರ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.