Karnataka ಪಂಪಾಸರೋವರದ ತಟದಲ್ಲಿ ಸಾವಿರಾರು ಸುಮಂಗಲಿಯರಿಂದ  ಹನುಮಾನ್ ಚಾಲೀಸಾ ಪಠಣ

ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆ

Team Udayavani, Jan 9, 2024, 10:50 AM IST

2-koppala-2

ಗಂಗಾವತಿ:‌ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ ನಡೆದಾಡಿದ ಪವಿತ್ರ ಕಿಷ್ಕಿಂಧಾ ಅಂಜನಾದ್ರಿ, ಪಂಪಾಸರೋವರ ಹಾಗೂ ಋಷಿಮುಖ ಪರ್ವತ ಪ್ರದೇಶದಿಂದ ಅಯೋಧ್ಯೆಗೆ ಶ್ರೇಷ್ಠ ಸಂದೇಶ ಸಾರುವ ನಿಟ್ಟಿನಲ್ಲಿ ಕಲಿಯುಗದಲ್ಲಿಯೂ ಶ್ರೀ ರಾಮನ ಭಂಟ ಆಂಜನೇಯನ ಸನ್ನಿಧಾನದಲ್ಲಿ ಹನುಮಾನ ಚಾಲೀಸಾ ಪಠಣ ಮಾಡಿ ಲೋಕಾ ಕಲ್ಯಾಣಕ್ಕಾಗಿ ಶ್ರೀರಾಮ ಮಂದಿರ ಸದಾ ಕಾರ್ಯ ಮಾಡಲು ಕಿಷ್ಕಿಂಧಾ ಭೂಮಿ ಪ್ರೇರಣೆಯಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಅವರು ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದ ಪಂಪಾಸರೋವರದಲ್ಲಿ ಫೌಂಡೇಶನ್ ಫಾರ್ ಹೋಲಿಸ್ಟಿಕ್ ಡೆವಲಪ್ಮೆಂಟ್, ಮಾತೃಶಕ್ತಿ ಕಾ ತಾಂಡವ್ ಅವರ ವತಿಯಿಂದ ಆಯೋಜಿಸಲಾದ ಹನುಮಾನ್ ತಾಂಡವ ಸಾಮೂಹಿಕ ಸ್ತೋತ್ರ ಪಠಣ ಕಾರ್ಯಕ್ರಮಕ್ಕೆ ಪತ್ನಿ ಅರುಣಾ ಲಕ್ಷ್ಮಿ ರೆಡ್ಡಿ ಸಮೇತ ಚಾಲನೆ ನೀಡಿ ಮಾತನಾಡಿದರು.

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ರಾಮ ಮಂದಿರ ಕಾರ್ಯಕ್ರಮದ ಯಶಸ್ಸು ಮತ್ತು ಲೋಕಕಲ್ಯಾಣಾರ್ಥವಾಗಿ ಶ್ರೀ ಹನುಮಾನ್ ಜನ್ಮಭೂಮಿ ಅಂಜನಾದ್ರಿ ಸಮೀಪದ ಪ್ರಸಿದ್ಧ ಪಂಪ ಸರೋವರದಲ್ಲಿ ಈ ಕಾರ್ಯಕ್ರಮ ನಡೆಸುತ್ತಿರುವುದು ರಾಮಾಯಣ ಕಾಲವನ್ನು ನೆನಪಿಸುತ್ತಿದೆ ಎಂದು ಹೇಳಿದರು.

ಈ ಸಂಸ್ಥೆಯು ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳಿಗೆ ಸ್ತೋತ್ರ ಪಠಣ ಮತ್ತು ಕಲಿಕಾ ಕಾರ್ಯಕ್ರಮಗಳ ಮೂಲಕ ಮಾನಸಿಕವಾಗಿ ಸದೃಢರನ್ನಾಗಿ ಮಾಡಲಾಗುತ್ತಿದೆ. ಸನಾತನ ಧರ್ಮ ಮತ್ತು ಭಾರತೀಯ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ಪವಿತ್ರ ಪಂಪ ಸರೋವರದಲ್ಲಿ ದೇಶ ವಿದೇಶಗಳಿಂದ ಹಾಗೂ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಮಹಿಳೆಯರು ಹನುಮಾನ್ ತಾಂಡವ ಸಾಮೂಹಿಕ ಸ್ತೋತ್ರ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕರ್ನಾಟಕದ 150 ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿದೆ ಎಂದರು.

ಸುರ್ಯೋದಯಕ್ಕೂ ಮುನ್ನ ಸಾವಿರಾರು ಮಹಿಳೆಯರು ಶಿಸ್ತಿನಿಂದ ಪಂಪ ಸರೋವರದ ಸುತ್ತಲೂ ದೀಪ ಬೆಳಗುವ ಮೂಲಕ ಹನುಮಾನ್ ತಾಂಡವ ಸ್ತೋತ್ರ ಪಠಣ ಮಾಡಿದ್ದು, ಲೋಕಕಲ್ಯಾಣಕ್ಕೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಜ.22 ರಂದು ಪ್ರಭು ಶ್ರೀ ರಾಮನ ಭವ್ಯ ಮಂದಿರ ಲೋಕಾರ್ಪಣೆ ಇಡೀ ಭರತ ಭೂಮಿಗೆ ಒಳ್ಳೆಯ ಸಂದೇಶ ರವಾನೆಯಾಗುತ್ತಿದೆ. ಅಯೋಧ್ಯೆಯಂತೆ ಕಿಷ್ಕಿಂಧಾ ಅಂಜನಾದ್ರಿ ಪ್ರದೇಶವನ್ನು ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಅವರ ಧರ್ಮಪತ್ನಿ ಲಕ್ಷ್ಮಿ ಅರುಣ ರೆಡ್ಡಿ, ಸಂಸ್ಥೆಯ ಸಂಚಾಲಕಿ ಮಾಧುರಿ ಸಾಹಸ್ರಬುದ್ದೆ, ಸಂಸ್ಥೆಯ ಪ್ರತಿನಿಧಿಗಳಾದ ಶೈಲಜಾ ವಿಠ್ಠಲ್, ಅಧ್ಯಕ್ಷೆ ರತ್ನಶ್ರೀ ಶ್ರೀಕೃಷ್ಣದೇವರಾಯ, ಕೇಶವ, ಪ್ರೊ. ಮೀನಾ ಚಂದ್ರವರ್ಕರ್, ಶ್ರೀಪಾದ್ ಪತ್ತಿಕೊಂಡ, ಗಾಯಕ್ವಾಡ್ ಭೀಮರಾವ್ ಪ್ರಶಾಂತ್,  ದಿವ್ಯ ಕಂದಕೂರ್, ಮಹಾದೇವಿ ಬೋಧನಕರ್, ವೈಶಾಲಿ ಜೋಶಿ, ಅವಂತಿ ದೀಕ್ಷಿತ್, ಊರ್ಮಿಳಾ ಜೋಶಿ, ದಿವ್ಯ ಎಸ್, ಅನುಪಮಾ,ಗಾಯತ್ರಿ ಮೊಹೊಲೆ, ವಿನುತಾ ಮಂಜುನಾಥ ಹಾಗೂ ಬಿಜೆಪಿ ಮುಖಂಡ ಕೆಲೋಜಿ ಸಂತೋಷ,ಕೆಆರ್ ಪಿ ಪಕ್ಷದ ಮುಖಂಡರುಗಳಾದ ಡಿ.ಕೆ ಅಗೋಲಿ, ಯಮನೂರ್ ಚೌಡ್ಕಿ, ಚಂದ್ರಶೇಖರ್ ಹಿರೂರು, ರಮೇಶ್ ಹೊಸಮಲಿ, ಆನಂದ ಗೌಡ, ಬೆಟ್ಟಪ್ಪ ಬೆಣಕಲ್, ವಿರೂಪಾಕ್ಷಗೌಡ ಹೇರೂರು, ಅರ್ಜುನ್ ನಾಯಕ್ ಇನ್ನಿತರ ಮುಖಂಡರು ಕಾರ್ಯಕರ್ತರಿದ್ದರು.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.