ದೇವಾಲಯಗಳಿಗೆ ದತ್ತಿ  ಇಲಾಖೆ ಆಡಳಿತಾಧಿಕಾರಿ ನೇಮಕ


Team Udayavani, Mar 16, 2019, 10:44 AM IST

16-march-18.jpg

ಗಂಗಾವತಿ: ಐತಿಹಾಸಿಕ ಪಂಪಾ ಸರೋವರದ ವಿಜಯಲಕ್ಷ್ಮೀ ದೇವಾಲಯ ಮತ್ತು ಆನೆಗೊಂದಿ ಶ್ರೀರಂಗನಾಥ ಸ್ವಾಮಿ ದೇವಾಲಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಪಂಪಾ ಸರೋವರ ಹಾಗೂ ಆನೆಗೊಂದಿ ಶ್ರೀರಂಗನಾಥ ದೇವಾಲಯಗಳು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿದ್ದರೂ ಹಲವು ದಶಕಗಳಿಂದ ದೇವಾಲಯಗಳಿಗೆ ಆನೆಗೊಂದಿ ರಾಜವಂಶಸ್ಥ ರಾಮದೇವರಾಯಲು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ವಯೋ ಸಹಜದಿಂದಾಗಿ ತಮ್ಮ ಮಗ ಹರಿಹರದೇವರಾಯಲು ಅವರನ್ನು ದೇವಾಲಯಗಳಿಗೆ ಅಧ್ಯಕ್ಷರನ್ನಾಗಿ ಮಾಡಿ ಸಮಿತಿ ಪುನಾರಚನೆ ಮಾಡುವಂತೆ ಇತ್ತೀಚೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಾಹಿತಿ ನೀಡುವಂತೆ ಗಂಗಾವತಿ ತಹಶೀಲ್ದಾರ್‌ ಅವರಿಗೆ ಆದೇಶ ಮಾಡಿದ್ದರು.

ಪಂಪಾ ಸರೋವರ ಮತ್ತು ಶ್ರೀರಂಗನಾಥ ಸ್ವಾಮಿ ದೇವಾಲಯ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳ ವ್ಯಾಪ್ತಿಯಲ್ಲಿರುವ ಕುರಿತು ತಹಶೀಲ್ದಾರ್‌ರು ಜಿಲ್ಲಾಧಿ ಕಾರಿಗೆ ವರದಿ ನೀಡಿದ್ದರು. ಇದನ್ನು ಪರಿಶೀಲಿಸಿ ಪಂಪಾ ಸರೋವರದ ಶ್ರೀವಿಜಯಲಕ್ಷ್ಮೀ  ದೇವಾಲಯ ಮತ್ತು ಆನೆಗೊಂದಿಯ ಶ್ರೀರಂಗನಾಥಸ್ವಾಮಿ ದೇವಾಲಯಗಳಿಗೆ ಜಿಲ್ಲಾಧಿಕಾರಿಗಳು ಆನೆಗೊಂದಿಯ ಗ್ರಾಮಲೆಕ್ಕಾಧಿಕಾರಿಯನ್ನು
ಕಾರ್ಯ ನಿರ್ವಾಹಣಾಧಿಕಾರಿಯಾಗಿ, ಕಂದಾಯ ನಿರೀಕ್ಷಕರನ್ನು ಆಡಳಿತಾಧಿಕಾರಿಯಾಗಿ ನೇಮಿಸುವಂತೆ ಆದೇಶ ನೀಡಿದ್ದಾರೆ.

ಸ್ಥಳೀಯರ ಆಕ್ರೋಶ: ಪಂಪಾ ಸರೋವರ ಹಾಗೂ ಆನೆಗೊಂದಿ ಶ್ರೀರಂಗನಾಥ ಸ್ವಾಮಿ ದೇವಾಲಯಗಳ ಸಮಿತಿ ಅಧ್ಯಕ್ಷರಾಗಿದ್ದ ರಾಜವಂಶಸ್ಥರನ್ನು ತೆಗೆದು ಹಾಕಿ ಧಾರ್ಮಿಕದತ್ತಿ ಇಲಾಖೆ ನಿಯಮಗಳ ನೆಪದಲ್ಲಿ ಕಾರ್ಯನಿರ್ವಾಹಕರು ಮತ್ತು ಆಡಳಿತಾ ಧಿಕಾರಿಗಳನ್ನು ನೇಮಿಸಿದ್ದಕ್ಕೆ ಆನೆಗೊಂದಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ಶ್ರೀರಂಗನಾಥ ದೇವಾಲಯದಲ್ಲಿ ಸಭೆ ನಡೆಸಿ ಕೂಡಲೇ ಜಿಲ್ಲಾಧಿಕಾರಿಗಳು ಆದೇಶ ಹಿಂಪಡೆದು ಮೊದಲಿನಂತೆ ಸಮಿತಿಗೆ ರಾಜವಂಶಸ್ಥರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ, ಶ್ರೀರಂಗನಾಥಸ್ವಾಮಿ ಜಾತ್ರೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.

ಶಾಸಕರ ಭೇಟಿ: ಶಾಸಕ ಪರಣ್ಣ ಮುನವಳ್ಳಿ ಅವರನ್ನು ಆನೆಗೊಂದಿ ರಾಜವಂಶಸ್ಥರು ಹಾಗೂ ಸ್ಥಳೀಯರು ಭೇಟಿಯಾಗಿ ಪಂಪಾ ಸರೋವರ ಹಾಗೂ ಆನೆಗೊಂದಿ ಶ್ರೀರಂಗನಾಥ ಸ್ವಾಮಿ ದೇವಾಲಯಗಳ ಸಮಿತಿಯಿಂದ ರಾಜವಂಶಸ್ಥರನ್ನು ತೆಗದು ಹಾಕಿರುವುದು ರಾಜವಂಶಸ್ಥರಿಗೆ ಅವಮಾನ ಮಾಡಿದಂತೆ. ಕೂಡಲೇ ಸರಕಾರದ ಮಟ್ಟದಲ್ಲಿ ಮಾತನಾಡುವಂತೆ ಮನವಿ ಮಾಡಿದರು.

ಪಂಪಾಸರೋವರ ಹಾಗೂ ಶ್ರೀರಂಗನಾಥ ಸ್ವಾಮಿ ದೇವಾಲಯಗಳು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಜಿಲ್ಲಾ ಧಿಕಾರಿಗಳು ಕೇಳಿದ ಮಾಹಿತಿಯಂತೆ ವರದಿ ನೀಡಲಾಗಿದೆ. ರಾಜವಂಶಸ್ಥರನ್ನು ಸಮಿತಿಯಿಂದ ತೆಗೆದು ಹಾಕುವಂತೆ ವರದಿ ನೀಡಿಲ್ಲ. ಸರಕಾರದ ನಿಯಮಗಳಂತೆ ಇದುವರೆಗೂ ಇದ್ದ ಸ್ಥಿತಿ ಕುರಿತು ಜಿಲ್ಲಾ ಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದೆ. ಶೀಘ್ರವೇ ಜಿಲ್ಲಾಧಿಕಾರಿಗಳ ಆದೇಶದಂತೆ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರನ್ನು ಕಾರ್ಯನಿರ್ವಾಹಕ ಹಾಗೂ ಆಡಳಿತಾಧಿಕಾರಿಯಾಗಲಿದ್ದಾರೆ.
ವೀರೇಶ ಬಿರಾದಾರ್‌,
ತಹಶೀಲ್ದಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.