ಗುಡ್ಡದ ಅಂದ ಇಮ್ಮಡಿಸಿದ ಚೆಕ್‌ ಡ್ಯಾಂ


Team Udayavani, Oct 12, 2019, 2:36 PM IST

kopala-tdy-1

ಗಂಗಾವತಿ: ನಗರಕ್ಕೆ ಹೊಂದಿಕೊಂಡಿರುವ ಗುಡ್ಡ, ಬೆಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಸಕ್ತಿಯಿಂದ ನಿರ್ಮಿಸಿರುವ ಚೆಕ್‌ ಡ್ಯಾಂಗಳಲ್ಲಿ ಭರಪೂರ ನೀರು ಸಂಗ್ರಹವಾಗಿದೆ.

ಕಲ್ಲು, ಬಂಡೆಗಳಿಂದ ಫಾಲ್ಸ್‌ಗಳ ರೂಪದಲ್ಲಿ ನೀರು ಹರಿಯುತ್ತಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯ ಇಮ್ಮಡಿಗೊಂಡಿದೆ. ನಗರದ ಜ್ಯೂನಿಯರ್‌ ಕಾಲೇಜು ಹಿಂದೆ ಇರುವ ಬೆಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಗಳ ಶ್ರಮದಿಂದ ಇದೀಗ ಸುಂದರ ಪ್ರಕೃತಿಯ ತಾಣವಾಗಿದೆ. ಕಳೆದ ಹಲವು ವರ್ಷಗಳಿಂದ ಮಳೆಯ ಕೊರತೆಯಿಂದ ಗುಡ್ಡದಲ್ಲಿದ್ದ ಸಸ್ಯ ಸಂಕುಲ ನಾಶವಾಗಿತ್ತು. ಕಳೆದ ವರ್ಷದ ಬೇಸಿಗೆಯಲ್ಲಿ ನೀರು ಹರಿದು ಹೋಗುವ ಜಾಗದಲ್ಲಿ ಸರಕಾರದ ಅನುದಾನದಿಂದ 50ಕ್ಕೂ ಹೆಚ್ಚು ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಗಿದೆ. ಈ ಭಾರಿ ಸುರಿದ ಮಳೆಯಿಂದಾಗಿ ಚೆಕ್‌ ಡ್ಯಾಂಗಳಲ್ಲಿ ನೀರು ಸಂಗ್ರಹವಾಗಿದೆ.

ಕಲ್ಲು ಬಂಡೆ ಮೇಲಿಂದ ನೀರು ಕೆಳಗೆ ಹರಿಯುವ ದೃಶ್ಯ ಜಲಪಾತದಂತೆ ಕಾಣುತ್ತದೆ. ಹಲವು ದಶಕಗಳ ಹಿಂದೆ ನಗರದ ಸುತ್ತಲಿರುವ ಬೆಟ್ಟಗುಡ್ಡಗಳಲ್ಲಿ ಅಪಾರ ಪ್ರಮಾಣದ ಸಸ್ಯಗಳು, ಗಿಡ-ಮರಗಳು ಇದ್ದವು. ನಗರೀಕರಣದ ಪರಿಣಾಮದಂದ ಗಿಡಗಳನ್ನು ಕಡಿದು ಸಾಗಿಸಿದ ಪರಿಣಾಮ ಬೆಟ್ಟ ಬರುಡಾಗಿತ್ತು. 20 ವರ್ಷಗಳ ಹಿಂದೆ ಜ್ಯೂನಿಯರ್‌ ಕಾಲೇಜು ಹಿಂಭಾಗದಲ್ಲಿ ಅರಣ್ಯ ಇಲಾಖೆ ಜನರಿಗೆ ವಿಶ್ರಾಂತಿ ಮತ್ತು ವಾಯು ವಿಹಾರಕ್ಕಾಗಿ 50 ಎಕರೆ ಪ್ರದೇಶದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟು ಸಾರ್ವಜನಿಕರಿಗೆ ಕುಳಿತುಕೊಳ್ಳಲು ಬೆಂಚ್‌ ಹಾಕಿ ಸುಂದರ ಪಾರ್ಕ್‌ ನಿರ್ಮಿಸಿತ್ತು. ಈ ಪಾರ್ಕ್‌ ಸೂಕ್ತ ನಿರ್ವಾಹಣೆ ಮತ್ತು ನೀರಿನ ಕೊರತೆಯಿಂದ ಹಾಳಾಗಿತ್ತು. ಅಂದಿನಿಂದ ಈ ಜಾಗ ಅಕ್ರಮ ಚಟುವಟಿಕೆ ತಾಣವಾಗಿತ್ತು.

ಇತ್ತೀಚೆಗೆ ಪುನಃ ಅರಣ್ಯ ಇಲಾಖೆ ಅಧಿ ಕಾರಿಗಳು ಇಲ್ಲಿರುವ ನೂರು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಅರಣ್ಯ ಬೆಳೆಸಲು ನಿರ್ಧರಿಸಿ ಮಳೆ ನೀರು ಹರಿದುಹೋಗುವ ಜಾಗದಲ್ಲಿ ಚೆಕ್‌ ಡ್ಯಾಂ ನಿರ್ಮಿಸಿದ್ದಾರೆ. ಇಲ್ಲಿ ನೀರು ಸಂಗ್ರಹವಾಗಿದ್ದು ಇಲಾಖೆ ನಾಟಿ ಮಾಡಿದ ಸಸಿಗಳು ಆಳೆತ್ತರ ಬೆಳೆದಿವೆ. ಇತ್ತೀಚೆಗೆ ನಗರದ ಚಾರಣಬಳಗ ಕಾರ್ಯಕರ್ತರು ಇಲ್ಲಿ ಪ್ರವಾಸಕ್ಕೆ ಆಗಮಿಸಿದ ವೇಳೆ ಇನ್ನಷ್ಟು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಗೆ ಕೈಜೋಡಿಸಲು ನಿರ್ಧರಿಸಿದ್ದಾರೆ. ಇಲ್ಲಿಯ ಸಸಿಗಳು ಇನ್ನಷ್ಟು ಬೆಳೆದು ಜನರಿಗೆ ನೆರಳು ಕೊಡುವಂತಾಗಲು ಕೆಲಸ ಮಾಡುವ ಭರವಸೆ ನೀಡಿದ್ದಾರೆ. ತಾಲೂಕಿನ ಆನೆಗೊಂದಿ ಬೆಣಕಲ್‌, ಮಲ್ಲಾಪೂರ, ಜಂಗ್ಲಿ ರಂಗಾಪೂರ, ಸಾಣಾಪೂರ, ಹನುಮನಹಳ್ಳಿ ಭಾಗದಲ್ಲಿರುವ ಏಳು ಗುಡ್ಡದ ಪ್ರದೇಶದಲ್ಲಿ ಅರಣ್ಯ ಇಲಾಖೆ ಇನ್ನಷ್ಟು ಚೆಕ್‌ ಡ್ಯಾಂಗಳನ್ನು ನಿರ್ಮಿಸಿ ಸಸ್ಯ ಬೆಳೆಯಲು ಮತ್ತು ವನ್ಯಜೀವಿಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸ್ಥಳಗಳಾಗಿ ಮಾರ್ಪಾಡು ಮಾಡಬೇಕು.

 

ಪ್ರಕೃತಿ ಹೊರತು ಜನರ ಬದುಕು ಅಸಾಧ್ಯ ಎಂದು ಜನತೆಗೆ ಮನವರಿಕೆ ಮಾಡಲು ಬೆಟ್ಟದಲ್ಲಿ ಚೆಕ್‌ ಡ್ಯಾಂ, ಸುಮಾರು 15 ಎಕರೆ ಪ್ರದೇಶದಲ್ಲಿ ಸಸ್ಯಗಳನ್ನು ಬೆಳೆಸಿ ಮಕ್ಕಳ ಆಟಿಕೆಗಳು, ವಾಕಿಂಗ್‌ ಟ್ರ್ಯಾಕ್ನಿ ರ್ಮಿಸಲಾಗುತ್ತಿದೆ. ವಿವಿಧ ಬಗೆಯ ಸಸ್ಯಗಳನ್ನು ಬೆಳೆಸಲಾಗುತ್ತಿದೆ. ಪರಿಸರ ಸ್ನೇಹಿ ಪಾರ್ಕ್‌ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮೂಲಕ ಅರಣ್ಯದ ಮಹತ್ವ ಜನತೆಗೆ ತಿಳಿಸಲು ಇಲಾಖೆ ಯೋಜನೆ ರೂಪಿಸಿದೆ. ತಾಲೂಕಿನ ಏಳು ಗುಡ್ಡದ ಪ್ರದೇಶದಲ್ಲಿ ವಿವಿಧ ಬಗೆಯ ಸಸಿ ನೆಡಲಾಗಿದ್ದು, ಉತ್ತಮ ಮಳೆಯಿಂದ ಚೆಕ್‌ ಡ್ಯಾಂಗಳಲ್ಲಿ ನೀರು ಸಂಗ್ರಹವಾಗಿದೆ. ಕಾಡು ಪ್ರಾಣಿಗಳಿಗೆ ಇದರಿಂದ ಬೇಸಿಗೆಯಲ್ಲಿ ಕುಡಿಯುವ ನೀರು ಲಭಿಸಲಿದೆ.-ಗೋವಿಂದರಾಜು, ವಲಯ ಅರಣ್ಯ ಅಧಿಕಾರಿ

 

-ಕೆ. ನಿಂಗಜ್ಜ

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.