ಚೆಕ್ ಡ್ಯಾಂ ಅವ್ಯವಹಾರ: ನಾಲ್ವರು ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್
Team Udayavani, Jun 8, 2020, 2:45 PM IST
ಕುಷ್ಟಗಿ: ಬಹುಕಮಾನು ತಡೆಗೋಡೆ (ಮ್ಲಟಿ ಆರ್ಚ್ ಚೆಕ್ ಡ್ಯಾಂ)ಯೋಜನೆಯ ಅನುದಾನ ದುರುಪಯೋಗದ ಹಿನ್ನೆಲೆಯಲ್ಲಿ ನಾಲ್ವರು ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಆಯುಕ್ತರು ಕಾಮಗಾರಿ ಸ್ಥಾನಿಕ ಪರಿಶೀಲಿಸಿ ವರದಿ ನೀಡಿದನ್ವಯ ತಾಪಂ ಇಒ ಕೆ. ತಿಮ್ಮಪ್ಪ ಅವರು, ತಳವಗೇರಾ ಪಿಡಿಒ ಶಿವಪುತ್ರಪ್ಪ ಬರಿದೆಲಿ ಅವರ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ, ಹಾಬಲಕಟ್ಟಿ ಪಿಡಿಒ ಚಂದಪ್ಪ ಕವಡಿಕಾಯಿ, ಹಿರೇಗೊಣ್ಣಾಗರ ಪಿಡಿಒ ಯಮನಪ್ಪ ರಾತ್ನಾಳ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಹಾಗೂ ಮುದೇನೂರು ಪಿಡಿಒ ವೆಂಕಟೇಶ ಪವಾರ ವಿರುದ್ಧ ತಾವರಗೇರಾ ಪೊಲೀಸ್ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಹಿನ್ನೆಲೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದಲ್ಲಿ ಮಲ್ಟಿ ಆರ್ಚ್ ಚೆಕ್ ಡ್ಯಾಂ ಕಾಮಗಾರಿ ಮಂಜೂರಾಗಿದ್ದವು. ಕುಷ್ಟಗಿ ತಾಲೂಕಿನಲ್ಲೇ 635 ನಿರ್ಮಿಸಲಾಗಿದೆ. ಆದರೆ ಕಾಮಗಾರಿ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ ಫೋಟೋ ದಾಖಲೆಗಾಗಿ ನಿರ್ಮಿಸಿದ್ದರು. ಕಳೆದ ವರ್ಷದ ಮೊದಲ ಮಳೆಗೆ ಡ್ಯಾಂ ಕೊಚ್ಚಿ ಹೋಗಿದ್ದರಿಂದ ಪ್ರಕರಣ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿಂಬೆ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಬ್ದುಲ್ ನಯೀಮ್ ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಅವರಿಗೆ ದೂರು ನೀಡಿದ್ದರು. ಸಚಿವರ ಆದೇಶದ ಮೇರೆಗೆ ನಾಲ್ವರು ಪಿಡಿಒ ವಿರುದ್ಧ ಸರ್ಕಾರಕ್ಕೆ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ತಳವಗೇರಾ ಪಿಡಿಒ ಶಿವಪುತ್ರಪ್ಪ ಬರೆದೆಲಿ ಅವರು 2 ಎಫ್ಟಿಒ (ಫಂಡ್ ಟ್ರಾನ್ಸಫರ್ ಆರ್ಡರ್) ಮೂಲಕ 10,46,446 ರೂ., ಹಾಬಲಕಟ್ಟಿ ಪಿಡಿಒ ಚಂದಪ್ಪ ಕವಡಿಕಾಯಿ ಅವರು 2 ಎಫ್ಟಿಒ ಮೂಲಕ 33,23,628 ರೂ., ಹಿರೇಗೊಣ್ಣಾಗರ ಪಿಡಿಒ ಯಮನಪ್ಪ ರಾಮತ್ನಾಳ ಅವರು 1 ಎಫ್ಟಿಒ ಮೂಲಕ3,76,155 ರೂ. ಹಾಗೂ ಮುದೇನೂರು ಪಿಡಿಒ ವೆಂಕಟೇಶ ಪವಾರ ಅವರು 23 ಎಫ್ಟಿಒ ಮೂಲಕ 1,04,31,771 ರೂ. ದುರುಪಯೋಗ ಮಾಡಿಕೊಂಡಿರುವ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ