ಚೆಕ್‌ ಡ್ಯಾಂ ಕಾಮಗಾರಿ ಕಳಪೆ: ತಾಪಂ ಸದಸ್ಯರ ಆಕ್ರೋಶ


Team Udayavani, Dec 14, 2019, 2:33 PM IST

kopala-tdy-2

ಕುಷ್ಟಗಿ: ಜಲಮೂಲ ಹೆಚ್ಚಿಸಲು ನರೇಗಾ ಯೋಜನೆಯಡಿ ನಿರ್ಮಿಸಿದ ಚೆಕ್‌ ಡ್ಯಾಂ ಅವೈಜ್ಞಾನಿಕ ಹಾಗೂ ಸಂಪೂರ್ಣ ಕಳಪೆಯಾಗಿವೆ ಎಂದು ತಾಪಂ ಸದಸ್ಯರು ಎಇಇ ಎಸ್‌.ಡಿ. ನಾಗೋಡ್‌ ಅವರನ್ನು ತರಾಟೆ ತೆಗೆದುಕೊಂಡರು. ಇಲ್ಲಿನ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಎಇಇ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ತಾಪಂ ಸದಸ್ಯೆ ಮಂಜುಳಾ ಪಾಟೀಲ ಅವರು, ಚೆಕ್‌ ಡ್ಯಾಂ ಅವ್ಯವಹಾರಕ್ಕೆ ಸಂಬಂ ಧಿಸಿದಂತೆ ಪೂರಕ ದಾಖಲೆಗಳಿದ್ದು ಇದನ್ನು ಸಾಕ್ಷ್ಯಧಾರ ಸಮೇತ ಸಾಬೀತು ಪಡಿಸುವೆ. ಮಾತಿಗೆ ತಪ್ಪಿದರೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ. ನೀವು ಎಇಇ ನೌಕರಿಗೆ ರಾಜೀನಾಮೆ ನೀಡುವಿರಾ ಪ್ರಶ್ನಿಸಿ ಸವಾಲು ಹಾಕಿದರು.

ತಾಪಂ ಸದಸ್ಯ ಯಂಕಪ್ಪ ಚೌವ್ಹಾಣ ಮಾತನಾಡಿ, ಚೆಕ್‌ ಡ್ಯಾಂಗಳು ಕಳಪೆಯಾಗಿದ್ದು, ದೊಡ್ಡ ಹಗರಣವೇ ಆಗಿದೆ. ಈ ಚೆಕ್‌ ಡ್ಯಾಂ ಕಾಮಗಾರಿಯಲ್ಲಿ ಸತ್ತವರ ಹೆಸರಲ್ಲಿ ಎನ್‌ಎಂಆರ್‌, ಸರ್ಕಾರಿ ನೌಕರದಾರರು ಕೂಲಿಕಾರರಾಗಿದ್ದು, ಕೋಟ್ಯಂತರ ರೂ. ಕೊಳ್ಳೆ ಹೊಡೆದಿದ್ದಾರೆ. ಚೆಕ್‌ ಡ್ಯಾಂ ಕೆಲಸ ನೀರಿನ ಮೂಲ ಹೆಚ್ಚಿಸುವ ಕೆಲಸವಾಗಿದ್ದರೂ, ದುರಪಯೋಗವೇ ಜಾಸ್ತಿಯಾಗಿದೆ. ಕೆಲಸ ಆಗದೇ ಎಂಐಎಸ್‌ ಹೇಗಾದವು? ಶುದ್ಧ ನೀರಿನ ಘಟಕಗಳ ಬಗ್ಗೆ ತಲೆ ಕೆಡಸಿಕೊಳ್ಳದೇ ದುರಸ್ತಿಗೂ ಮುಂದಾಗದೇ ಬರೀ ಚೆಕ್‌ ಡ್ಯಾಂ ಬಗ್ಗೆ ಗಮನ ಹರಿಸಲಾಗಿದೆ ಎಂದು ಆರೋಪಿಸಿದರು.

ಇದನ್ನು ಅಲ್ಲಗಳೆದ ಎಇಇ ಎಸ್‌.ಡಿ. ನಾಗೋಡ್‌, 198ರಲ್ಲಿ 40 ಚೆಕ್‌ ಡ್ಯಾಂಗಳಿಗಷ್ಟೇಹಣ ಪಾವತಿಯಾಗಿದೆ. ಉಳಿದವು ಪರಿಶೀಲಿಸಿ ಗುಣಮಟ್ಟದ ಮೇರೆಗೆ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸಲಾಗುವುದು. ಸದರಿ ಪ್ರಕರಣದ ಹಿನ್ನೆಲೆಯಲ್ಲಿ ಸಿಇಒ ಹಂತದಲ್ಲಿ ತನಿಖೆ ನಡೆದಿದೆ ಎಂದು ಸಭೆಗೆ ತಿಳಿಸಿದರು. ವೈದ್ಯಾಧಿಕಾರಿ ಡಾ| ಆನಂದ ಗೋಟೂರು ಮಾತನಾಡಿ, ತಾಲೂಕಿನಲ್ಲಿ ಡೆಂಘೀ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣಪ್ರದೇಶದಲ್ಲಿ ಫಾಗಿಂಗ್‌ ಮಾಡಲಾಗುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ ಡೆಂಘೀಯ ಔಷಧಕೊರತೆ ಇಲ್ಲ, ಇದಕ್ಕೆ ಸಂಬಂಧಿಸಿದ ತಜ್ಞ ವೈದ್ಯರ ಕೊರತೆ ಇದೆ ಎಂದು ತಿಳಿಸಿದರು.

ತಾಪಂ ಅಧ್ಯಕ್ಷೆ ಮಹಾಂತಮ್ಮ ಪೂಜಾರ, ಉಪಾಧ್ಯಕ್ಷೆ ವಿಶಾಲಾಕ್ಷಿ ಮದೂರು, ತಾಪಂ ಇಒ ಕೆ. ತಿಮ್ಮಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ತಿಮ್ಮಪ್ಪ, ನರೇಗಾ ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.