ಚೆಕ್ಡ್ಯಾಂ ಕಾಮಗಾರಿ ಪೂರ್ಣ ವರದಿ ಸಲ್ಲಿಸಿ: ರಘುನಂದನ್
Team Udayavani, Feb 2, 2020, 2:24 PM IST
ಕೊಪ್ಪಳ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಚೆಕ್ ಡ್ಯಾಂಗಳ ಕುರಿತು ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ಕೈಗೊಂಡ ತನಿಖಾ ಕಾರ್ಯವನ್ನು ಪೂರ್ಣಗೊಳಿಸಿ ಇನ್ನು 15 ದಿನಗಳಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ಜಿಪಂ ಸಿಇಒ ರಘುನಂದನ್ ಮೂರ್ತಿ ಹೇಳಿದರು.
ನಗರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಲ್ಲಿ ಜಿಲ್ಲಾ ಗುಣ ನಿಯಂತ್ರಣ ತಂಡವದರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 635 ಚೆಕ್ ಡ್ಯಾಂಗಳಲ್ಲಿ 338 ಚೆಕ್ ಡ್ಯಾಂಗಳಿಗೆ ಸಂಬಂಧಿ ಸಿದಂತೆ ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ತನಿಖೆ ಕಾರ್ಯ ಮುಗಿದಿದೆ. ಇನ್ನೂ 297 ಚೆಕ್ ಡ್ಯಾಂಗಳ ತನಿಖೆ ಬಾಕಿ ಇದ್ದು, 15 ದಿನದೊಳಗೆ ಎಲ್ಲ ಚೆಕ್ ಡ್ಯಾಂಗಳ ತನಿಖೆ ಪೂರ್ಣಗೊಳಿಸಿ ಸಂಪೂರ್ಣ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ಕೆ. ತೊರವಿ ಸೇರಿದಂತೆ ಜಿಲ್ಲಾ ಗುಣ ನಿಯಂತ್ರಣ ತಂಡದ ಅ ಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ