ಬಾಲ್ಯವಿವಾಹ ಸಾಮಾಜಿಕ ಪಿಡುಗು


Team Udayavani, Feb 4, 2020, 3:57 PM IST

kopala-tdy-1

ಯಲಬುರ್ಗಾ: ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಕಠಿಣ ಕಾನೂನುಗಳು ಇದ್ದರೂ ಬಾಲ್ಯ ವಿವಾಹ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಕಾಯ್ದೆ ಉದ್ದೇಶ ಸಫಲವಾಗಬೇಕಾದರೆ ಸಾಮಾಜಿಕ ಅರಿವು ಅಗತ್ಯ ಎಂದು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶರಣಮ್ಮ ಕಾರನೂರು ಹೇಳಿದರು.

ಪಟ್ಟಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಹಾಗೂ ರೋಣ ಸಮನ್ವಯ ಕಲಾ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಬಾಲ್ಯ ವಿವಾಹ ನಿಷೇಧ ಹಾಗೂ ಇಲಾಖೆಯ ವಿವಿಧ ಕಾರ್ಯಕ್ರಮಗಳ ಜಾಗೃತಿ ಬೀದಿ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯವಿವಾಹ ಎಂಬುದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಅಪ್ರಾಪ್ತ ವಯಸ್ಸಿನ ಮಕ್ಕಳು ಇದರಿಂದ ಪರದಾಡುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಪ್ರಾಪ್ತ ವಯಸ್ಸಿನ ಮಕ್ಕಳು ಹಸಿ ಮಡಕೆ ಇದ್ದ ಹಾಗೆ. ಈ ಹಸಿ ಮಡಕೆಗೆ ನೀರು ತುಂಬಿದರೆ ಹೇಗೆ ಒಡೆಯುತ್ತದೆಯೋ ಅದೇ ರೀತಿ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡುವ ನಿಮ್ಮ ಮಕ್ಕಳ ಭವಿಷ್ಯ ಕೂಡ ಅದೇ ರೀತಿ ಹಾಳಾಗುತ್ತದೆ ಎಂದರು.

ಮಕ್ಕಳಿಗೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಿ, ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕೇ ಹೊರತು, ಚಿಕ್ಕ ವಯಸ್ಸಿನ ಮಕ್ಕಳನ್ನು ಬಾಲ್ಯವಿವಾಹದ ನರಕಕ್ಕೆ ತಳ್ಳಿ ಅವರ ಜೀವನ ಹಾಳು ಮಾಡಬೇಡಿ ಎಂದು ಮನವಿ ಮಾಡಿದರು.

ಮಕ್ಕಳನ್ನು ಗೃಹಬಂಧನಕ್ಕೆ ಒಳಪಡಿಸದೇ ಸರಕಾರದಿಂದ ಸಿಗುವ ಸೌಲಭ್ಯ ಪಡೆದುಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಲು ಅವಕಾಶ ಕೊಡಿ, ರಾಜರಾಮ್‌ ಮೋಹನ್‌ ರಾಯ್‌, ದಯಾನಂದ ಸರಸ್ವತಿ ಮುಂತಾದ ಹೋರಾಟಗಾರರ ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಗೆ ಹೋರಾಡಿದ್ದಾರೆ. ನಮ್ಮ ದೇಶದಲ್ಲಿ ಅನಕ್ಷರಸ್ಥ ಹಾಗೂ ಬಡ ಕುಟುಂಬಗಳು ಬಾಲ್ಯವಿವಾಹ ಮಾಡುತ್ತಿವೆ. ಮಕ್ಕಳ ಸಂಖ್ಯೆ ಹೆಚ್ಚಾಗಿದ್ದಾಗಲೂ ಬಾಲ್ಯದಲ್ಲೇ ಮಕ್ಕಳಿಗೆ ಮದುವೆ ಮಾಡಲಾಗುತ್ತಿದೆ. ಇದಕ್ಕೆ ಪ್ರೋತ್ಸಾಹ ನೀಡುವಂತಹವರು. ಯಾರೇ ಆಗಿದ್ದರೂ ಅವರ ಮೇಲೆ ಮೊಕದ್ದಮೆ ಹೂಡಿ ಕಾನೂನಿನ ಪ್ರಕಾರ ಒಂದು ಲಕ್ಷ ರೂ. ದಂಡ ಮತ್ತು ಕಠಿಣ ಕಾರಾಗೃಹ ವಾಸದ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಎಲ್ಲೇ ಬಾಲ್ಯವಿವಾಹ ನಡೆದರೆ ತಕ್ಷಣ ಮಕ್ಕಳ ಸಹಾಯವಾಣಿಗೆ ದೂರು ಸಲ್ಲಿಸಿದರೆ, ಅವರು ತಕ್ಷಣ ಒಂದು ಮಗುವಿನ ರಕ್ಷಣೆ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದ್ಬಳಕೆ ಪಡಿಸಿಕೊಳ್ಳಬೇಕು. ಜಾಗೃತಿ ಬೀದಿ ನಾಟಕ ಕಾರ್ಯಕ್ರಮ ಪಟ್ಟಣದ 5 ಸ್ಥಳಗಳಲ್ಲಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶವಾದ ಮುಧೋಳ, ಸಂಗನಾಳದಲ್ಲಿಯೂ ಜಾಗೃತಿ ಬೀದಿನಾಟಕ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮೇಲ್ವಿಚಾರಕಿ ಮಾಧವಿ ವೈದ್ಯ, ಕಲಾ ಸಂಘದ ಶರಣಪ್ಪ ಹಿರೇಮನಿ, ಮಂಜುನಾಥ ತೆಗ್ಗಿ ಇತರರು ಇದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.