Kushtagi: ಬಿಲ್ ಕೊಡುವ ವಿಚಾರದಲ್ಲಿ ರೆಸ್ಟೋರೆಂಟ್ ಸಿಬ್ಬಂದಿಯೊಂದಿಗೆ ಯುವಕರ ಗಲಾಟೆ
Team Udayavani, Feb 13, 2024, 10:45 AM IST
ಕುಷ್ಟಗಿ: ಪಟ್ಟಣದ ಹೊರವಲಯದ ಕೊಪ್ಪಳ ರಸ್ತೆಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ವೊಂದರಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗ್ರಾಹಕರ ಮಧ್ಯೆ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೊರಡಕೇರಾ ಗ್ರಾಮದ ಯುವಕರು ಮದ್ಯ ಸೇವಿಸಿ ಬಿಲ್ ಕೊಡುವ ವಿಚಾರದಲ್ಲಿ ಕೌಂಟರ್ ಸಿಬ್ಬಂದಿಯೊಂದಿಗೆ ಕ್ಯಾತೆ ತೆಗೆದು ವಾಗ್ವದಕ್ಕಿಳಿದಿದ್ದು, ಇದು ಮಾತಿಗೆ ಮಾತು ಬೆಳೆದು ಕೌಂಟರ್ ಸಿಬ್ಬಂದಿಯ ಮೇಲೆ ಕೈ ಮಾಡಿದ್ದಾರೆ.
ರೆಸ್ಟೋರೆಂಟ್ ಸಿಬ್ಬಂದಿ ಕುಡಿದ ಅಮಲಿನಲ್ಲಿದ್ದ ಓರ್ವ ಯುವಕನಿಗೆ ಮುಖ- ಮೂತಿ ನೋಡದೇ ಸರಿಯಾಗಿ ಥಳಿಸಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ 112 ಸಿಬ್ಬಂದಿ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾನೆ.
ಥಳಿಸಿಕೊಂಡ ಯುವಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
ಪ್ರಕರಣದ ಹಿನ್ನೆಲೆ ಪೊಲೀಸರು ರೆಸ್ಟೋರೆಂಟ್ ಗಲಾಟೆಗೆ ಕಾರಣರಾದವರನ್ನು ಮಂಗಳವಾರ ಠಾಣೆಗೆ ಬರಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ