ನೇಕಾರರ ಸಾಲ ಮನ್ನಾ ಮಾಡಿ
Team Udayavani, Dec 21, 2019, 4:54 PM IST
ದೋಟಿಹಾಳ: ಕೈಮಗ್ಗ ನೇಕಾರರು ಸಿದ್ಧಪಡಿಸುವ ಉಡುಪು ಹಾಗೂ ಬಟ್ಟೆಗಳನ್ನು ರಾಜ್ಯ ಸರಕಾರ ಖರೀದಿಸುತ್ತಿಲ್ಲ ಎಂದು ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಎಂ.ಡಿ. ಲಕ್ಷ್ಮೀ ನಾರಾಯಣ ಆರೋಪಿಸಿದರು.
ಶುಕ್ರವಾರ ಗ್ರಾಮದ ರುದ್ರಮುನಿಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಕೈಮಗ್ಗ ನೇಕಾರರು ಸಿದ್ಧಪಡಿಸುವ ಉಡುಪು ಹಾಗೂ ಬಟ್ಟೆಗಳನ್ನು ರಾಜ್ಯ ಸರಕಾರ ಖರೀದಿ ಮಾಡಿದರೆ ನೇಕಾರರು ಬಾಳು ಹಸನಾಗುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 58 ಕೋಟಿ ನೇಕಾರರ ಸಾಲ ಮನ್ನಾ ಮಾಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನೇಕಾರರ 100 ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.
ಆದರೆ ಅಂಕಿ ಅಂಶಗಳ ಪ್ರಕಾರ ರಾಜ್ಯದ ನೇಕಾರರು ಅಷ್ಟೊಂದು ಪ್ರಮಾಣದಲ್ಲಿ ಸಾಲ ಮಾಡಿಲ್ಲ. ಸಾಲಮನ್ನಾ ವಿಷಯದಲ್ಲಿ ಇಂದಿನ ಸರಕಾರ 20 ಷರತ್ತುಗಳನ್ನು ಹಾಕಿದ್ದು, ಇದರಿಂದ ಯಾವ ನೇಕಾರರಿಗೂ ಲಾಭವಾಗಿಲ್ಲ. ರಾಜ್ಯದಲ್ಲಿ ನೇಕಾರಿಕೆ ಅನುಭವ ಇಲ್ಲದವರನ್ನು ಜವಳಿ ಸಚಿವರನ್ನಾಗಿ ಮಾಡುವುದರಿಂದ ನೇಕಾರರ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ, ಇದರಿಂದ ಕಷ್ಟವಾಗುತ್ತಿದೆ. ಇನ್ನಾದರೂ ನೇಕಾರಿಕೆ ಅನುಭವ ಇರುವವರನ್ನು ಜವಳಿ ಸಚಿವರನ್ನಾಗಿ ಮಾಡಿದರೆ ಒಳೆಯದು ಎಂದರು.
ರೈತರು ಹಾಗೂ ನೇಕಾರರು ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಹೇಳುವುವರು ರೈತರಿಗೆ ಯಾವುದೇ ಷರತ್ತುಗಳಿಲ್ಲದೆ ಸಾಲಮನ್ನಾ ಮಾಡುತ್ತಾರೆ. ಆದರೆ ನೇಕಾರರಿಗೆ ಹಲವು ಷರತ್ತುಗಳು ಹಾಕಿ ಸಾಲಮನ್ನಾ ಮಾಡುತ್ತಾರೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಸರಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪ ಮಾಡಿದರು. ಗ್ರಾಮದ ದೇವಾಂಗ ಸಮಾಜದವರು ಎಂ.ಡಿ. ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಿದರು. ಈ ವೇಳೆ ವಿವೇಕಾನಂದ ಸ್ವಾಮಿಗಳು ಹಾಗೂ ಈಶ್ವರ ಸ್ವಾಮಿಗಳು, ಇಲ್ಲಕಲ್ ನಗರಸಭೆಯ ಮಾಜಿ ಅಧ್ಯಕ್ಷ ವೆಂಕಟೇಶ ಪುತ್ತ ಹಾಗೂ ಗ್ರಾಮದ ದೇವಾಂಗ ಸಮಾಜದ ಗುರು-ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ