ನಂದಿಹಳ್ಳಿಯಲ್ಲಿ ಮಹನೀಯರ ನಾಮಫಲಕ ತೆರವು

ಗುಂಪು ಘರ್ಷಣೆಗೆ ಕಾರಣವಾದ ಫಲಕ ತೆರವಿಗೆ ಜಿಲ್ಲಾಧಿಕಾರಿ ಆದೇಶ

Team Udayavani, May 26, 2022, 4:51 PM IST

23

ಕಾರಟಗಿ: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಸಮುದಾಯಗಳ ಪ್ರತಿಷ್ಠೆ, ವಿವಾದಕ್ಕೆ ಕಾರಣವಾದ ಮಹನೀಯರ, ಮಹಾಪುರುಷರ ಎಲ್ಲ ನಾಮಫಲಕಗಳನ್ನು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌. ಮೋಹನ್‌ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಂದಿಹಳ್ಳಿ ಗ್ರಾಮದಲ್ಲಿ ನಡೆದ ಸಂಧಾನ ಸಭೆಯಲ್ಲಿ ಒಂದು ವರ್ಷದಿಂದಲೂ ನಾಮಫಲಕಗಳ ಪ್ರತಿಷ್ಠಾಪಿಸುವ ಸಂಬಂಧ ಉಂಟಾದ ಪ್ರತಿಷ್ಠೆಯೆ ಇತ್ತೀಚೆಗೆ ನಡೆದ ಮಾರಾಮಾರಿಗೆ, ಘರ್ಷಣೆಗೆ ಕಾರಣಗಳಲ್ಲೊಂದಾಗಿತ್ತು. ಈ ವಿಷಯ ಸಭೆಯಲ್ಲಿ ಗಮನಕ್ಕೆ ಬರುತ್ತಿದ್ದಂತೆ ಘರ್ಷಣೆಗೆ ಕಾರಣವಾದ ಯಾವೊಂದು ನಾಮಫಲಕಗಳು ಗ್ರಾಮದಲ್ಲಿ ಇರಬಾರದು, ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ಸ್ಥಳದಲ್ಲಿದ್ದ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆ ಮುಕ್ತಾಯವಾಗುತ್ತಿದ್ದಂತೆ ಪೊಲೀಸರ ನೆರವಿನೊಂದಿಗೆ ಕಾರ್ಯ ಪ್ರವೃತ್ತರಾದ ಇಒ ವಿವಾದಾತ್ಮಕ ಮಹರ್ಷಿ ವಾಲ್ಮೀಕಿ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ನಾಮಫಲಕಗಳನ್ನು ಜೆಸಿಬಿ ನೆರವಿನೊಂದಿಗೆ ಕಟ್ಟೆ ಸಮೇತ ತೆರವುಗೊಳಿಸಿದರು.

ನಂತರ ಗ್ರಾಮದ ಇನ್ನಿತರ ಕಡೆ ಪ್ರತಿಷ್ಠಾಪಿಸಲಾಗಿದ್ದ ದಾಸಶ್ರೇಷ್ಠ ಕನಕದಾಸರ ನಾಮಫಲಕ ಹಾಗೂ ಕರ್ನಾಟಕ ರತ್ನ ಡಾ| ಪುನೀತ್‌ ರಾಜಕುಮಾರ್‌ ಅವರ ನಾಮಫಲಕಗಳನ್ನೂ ಕೂಡ ಇದೇ ಸಂದರ್ಭದಲ್ಲಿ ತೆರವುಗೊಳಿಸಲಾಯಿತು.

ತೆರವು ಕಾರ್ಯಾಚರಣೆ ನೇತೃತ್ವವಹಿಸಿದ್ದ ಇಒ ಡಾ| ಮೋಹನ್‌ ಮಾತನಾಡಿ, ಪ್ರತಿ ನಗರ, ಪಟ್ಟಣ, ಗ್ರಾಮಗಳಲ್ಲಿ ಆದರ್ಶ ಪುರುಷರ ನಾಮಫಲಕ ಹಾಕುವುದು ಸರ್ವೇ ಸಾಮಾನ್ಯ. ಆದರೆ ಅದೇ ನಾಮಫಲಕ ಪ್ರತಿಷ್ಠೆಗೆ ಕಾರಣವಾಗಿ ಆಯಾ ನಗರ, ಪಟ್ಟಣ ಗ್ರಾಮಗಳ ಜನತೆಯ ಶಾಂತಿ, ನೆಮ್ಮದಿಗೆ ಭಂಗ ತರುವಂತಾದರೆ ಹೇಗೆ. ಇದು ಶಾಂತಿ, ಸಾಮಾರಸ್ಯ, ಸೌಹಾರ್ದತೆಯನ್ನು ಜಗತ್ತಿಗೆ ಬೋಧಿಸಿದ ಮಹಾಪುರುಷರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ. ಆ ಕಾರಣಕ್ಕೆ ಜಿಲ್ಲಾಧಿಕಾರಿಗಳು ಕಟ್ಟೆ, ನಾಮಫಲಕಗಳನ್ನು ಮೊದಲು ತೆರವುಗೊಳಿಸುವಂತೆ ಸೂಚಿಸಿದ್ದೆ. ಗ್ರಾಮದಲ್ಲಿನ ಎಲ್ಲ ವಿವಾದಾತ್ಮಕ ನಾಮಫಲಕಗಳನ್ನು ತೆರವುಗೊಳಿಸಬೇಕಾಗಿ ಬಂತು ಎಂದು ತಿಳಿಸಿದರು.

ಭೇಟಿ: ಸಪಾಯಿ ಕರ್ಮಚಾರಿ ನಿಗಮದ ರಾಜ್ಯಾಧ್ಯಕ್ಷ ಎಚ್‌. ಹನುಮಂತಪ್ಪ ಅವರು ನಂದಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಘರ್ಷಣೆಗೆ ಒಳಗಾಗಿ ತೊಂದರೆಗೀಡಾಗಿರುವ ಎಲ್ಲ ಸಂತ್ರಸ್ತರಿಗೆ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.