ಎಂಟು ತಿಂಗಳ ಬಳಿಕ ಕಾಲೇಜು ಆರಂಭ: ಮೊದಲ ದಿನ ವಿದ್ಯಾರ್ಥಿಗಳಿಂದ ಸಾಧಾರಣ ಸ್ಪಂದನೆ
Team Udayavani, Nov 17, 2020, 9:54 AM IST
ಕೊಪ್ಪಳ: ರಾಜ್ಯ ಸರ್ಕಾರವು 8 ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಅಸ್ತು ಎಂದಿದ್ದು ಮೊದಲ ದಿನವಾದ ಇಂದು ಕೊಪ್ಪಳದಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಸಾಧಾರಣ ಸ್ಪಂದನೆ ಬಂದಿದೆ.
ಕೋವಿಡ್ -19 ಸೋಂಕು ಉಲ್ಬಣದ ಹಿನ್ನೆಲೆಯಲ್ಲಿ ಮಾ.23 ರಂದು ಕಾಲೇಜುಗಳು ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿಗಳು ಲಾಕ್ ಡೌನ್ ನಲ್ಲಿ ಕ್ಲಾಸ್ ಇಲ್ಲದೆ ಕಳೆಯಬೇಕಾಗಿತ್ತು. ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ಆರಂಭಿಸಿತ್ತು. ಪ್ರಸ್ತುತ ಸೋಂಕಿನ ಪ್ರಮಾಣ ಇಳಿಕೆ ಕಂಡಿದ್ದು ಇಂದಿನಿಂದ ಕಾಲೇಜು ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.
ತರಗತಿ ಹಾಜರಾತಿ ಕಡ್ಡಾಯವಿರದ ಕಾರಣ ಮೊದಲ ದಿನ ಕಾಲೇಜಿಗೆ ವಿದ್ಯಾರ್ಥಿಗಳ ಬರುವಿಕೆ ಕಡಿಮೆ ಸಂಖ್ಯೆಯಲ್ಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷಾ ವರದಿ ಕಾಲೇಜಿಗೆ ತಂದು ಕೊಟ್ಟರೆ ಮಾತ್ರ ತರಗತಿಗೆ ಹಾಜರಾಗಲು ಇಲಾಖೆ ಷರತ್ತು ವಿಧಿಸಿದ್ದರಿಂದ ಕೆಲವರು ಕೋವಿಡ್-19 ಪರೀಕ್ಷೆಯನ್ನ ಮಾಡಿಸುತ್ತಿದ್ದಾರೆ. ಇನ್ನು ಕೆಲವರು ವರದಿ ಪಡೆದು ಮೊದಲ ದಿನವೇ ಖುಷಿಯಿಂದ ಆಗಮಿಸಿದ್ದು ಕಂಡು ಬಂತು.
ಇದನ್ನೂ ಓದಿ:ಇಂದಿನಿಂದ ಕಾಲೇಜು ಆರಂಭ: ಕೋವಿಡ್ ಟೆಸ್ಟ್ ಕಡ್ಡಾಯ, ಇಂದಿನಿಂದಲೇ ಶೈಕ್ಷಣಿಕ ವರ್ಷಾರಂಭ
ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಸ್ವಾಗತ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಲು ತಿಳಿಸಿ, ಸ್ಯಾನಿಟೈಜರ್ ನೀಡಿ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ಮಾಡಲಾಯಿತು. ಕೋವಿಡ್ ರಿಪೋರ್ಟ್ ಕೊಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನ ತರಗತಿಗಳಿಗೆ ಪ್ರವೇಶ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ