![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ವಿದೇಶಿಗರ ಆಗಮನದ ಸರ್ವೇ ಕಾರ್ಯ ಶುರು
Team Udayavani, Mar 18, 2020, 2:50 PM IST
![ವಿದೇಶಿಗರ ಆಗಮನದ ಸರ್ವೇ ಕಾರ್ಯ ಶುರು](https://www.udayavani.com/wp-content/uploads/2020/03/kopala-tdy-1-13-620x387.jpg)
ಸಾಂದರ್ಭಿಕ ಚಿತ್ರ
ಕೊಪ್ಪಳ: ಕೊರೊನಾ ಭೀತಿ ವಿಶ್ವದಲ್ಲೆಡೆ ಹೆಚ್ಚುತ್ತಿದ್ದಂತೆ, ದೇಶದಲ್ಲಿಯೂ ಹೆಚ್ಚಿನ ಜಾಗೃತಿ ವಹಿಸಲಾಗಿದೆ. ರಾಜ್ಯದಲ್ಲಂತೂ ಒಂದುವಾರ ಬಂದ್ ಘೋಷಣೆ ಮಾಡಲಾಗಿದ್ದು, ಕೊಪ್ಪಳ ಜಿಲ್ಲಾಡಳಿತವು ಆನೆಗೊಂದಿ ಹಾಗೂ ಅಂಜಿನಾದ್ರಿ, ವಿರುಪಾಪುರ ಗಡ್ಡೆಗೆ ಪ್ರವಾಸಕ್ಕೆ ಆಗಮಿಸಿರುವ ವಿದೇಶಿಗರ ಗಣನೆ ಸರ್ವೇ ಕಾರ್ಯ ಆರಂಭಿಸಿದೆ. ಒಟ್ಟಾರೆ ಜಿಲ್ಲಾಡಳಿತ 22 ಜನರ ಮೇಲೂ ಈ ವರೆಗೂ ನಿಗಾ ವಹಿಸಿದೆ.
ಕೊರೊನಾ ಬಗ್ಗೆ ಎಲ್ಲೆಡೆಯೂ ಜಿಲ್ಲಾಡಳಿತವು ವಿವಿಧ ಕ್ಯಾಂಪ್ಗ್ಳನ್ನು ಆಯೋಜನೆ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಲಿದೆ. ಆದರೂ ಕೆಲವೊಮ್ಮೆ ಜಿಲ್ಲೆಯ ನಿವಾಸಿಗಳು ವಿದೇಶದಲ್ಲಿ ನೆಲೆಸಿದ್ದು, ಕೊರೊನಾ ಭೀತಿಯಿಂದಾಗಿ ಸ್ವದೇಶಕ್ಕೆ ಆಗಮಿಸಿ ಜಿಲ್ಲೆಯಲ್ಲಿ ನೆಲೆಸುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತಕ್ಕೆ ಸಕಾಲಕ್ಕೆ ಮಾಹಿತಿ ದೊರೆಯುತ್ತಿಲ್ಲ. ಜಿಲ್ಲೆಯ ಜನತೆ ವಿದೇಶದಿಂದ ಆಗಮಿಸುವ ಜನರ ಬಗ್ಗೆ ಕೂಡಲೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಇಲ್ಲವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಪ್ರತಿ ದಿನವೂ ಹೇಳುತ್ತಿದೆ. ಕೊರೊನಾ ಬಗ್ಗೆ ಯಾವುದೇ ಸೋಂಕು ಕಾಣಿಸಿಕೊಳ್ಳದಂತೆ ಎಚ್ಚರಿಕೆ ವಹಿಸಿದೆ.
ವಿದೇಶಿಗರ ಸರ್ವೇ ಕಾರ್ಯ ಆರಂಭ: ಇದಲ್ಲದೇ ಕೊಪ್ಪಳ ಜಿಲ್ಲೆಯಲ್ಲಿ ವಿವಿಧೆಡೆ ಪ್ರಸಿದ್ದ ಪ್ರವಾಸಿ ತಾಣಗಳಿವೆ. ಅದರಲ್ಲೂ ಹಂಪಿ ಪಕ್ಕದಲ್ಲಿಯೇ ಪ್ರಸಿದ್ದ ಅಂಜಿನಾದ್ರಿ ಬೆಟ್ಟ, ಆನೆಗೊಂದಿ, ವಿರುಪಾಪುರ ಗಡ್ಡೆಯಿದೆ. ಇಲ್ಲಿಗೆ ನೂರಾರು ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ವಿಶ್ವದಲ್ಲಿ ಕೊರೊನಾ ಭೀತಿ ಹೆಚ್ಚಾಗಿದ್ದರಿಂದ ದೇಶದ ಜನರ ಸುರಕ್ಷತೆ ಜೊತೆಗೆ ವಿದೇಶಿಗರ ಮೇಲೂ ಹೆಚ್ಚಿನ ನಿಗಾ ವಹಿಸಲಾಗಿದೆ. ಜಿಲ್ಲೆಗೆ ತಿಂಗಳಲ್ಲಿ ಆಸ್ಟ್ರೇಲಿಯಾ, ಉಮನ್, ಇಟಲಿ, ಇರಾನ್ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸಿದ್ದು, ಅವರು ಏಷ್ಟು ಜನರಿದ್ದಾರೆ.
ಯಾವ ತಿಂಗಳು ಆಗಮಿಸಿದ್ದಾರೆ? ಅವರ ಆರೋಗ್ಯದ ಸ್ಥಿತಿ ಹೇಗಿದೆ? ಎಂದು ಜಿಲ್ಲೆಗೆ ಆಗಮಿಸಿದ್ದಾರೆ? ಸದ್ಯ ಏಲ್ಲಿ ನೆಲೆಸಿದ್ದಾರೆ? ಎನ್ನುವ ಸಂಪೂರ್ಣ ಮಾಹಿತಿ ಜಿಲ್ಲಾಡಳಿತ ಕಲೆಹಾಕಲು ಮುಂದಾಗಿದ್ದು, ಡಿಸಿ ಸೂಚನೆ ಮೇರೆಗೆ ಆರೋಗ್ಯ ಇಲಾಖೆಯು ವಿದೇಶಿಗರ ಸರ್ವೇ ಕಾರ್ಯ ಆರಂಭವಾಗಿದೆ.
ಆಧಾರ್ ನೋಂದಣಿ ಬಂದ್ಗೆ ಚಿಂತನೆ: ಜಿಲ್ಲೆಯಲ್ಲಿ ಆಧಾರ್ ನೋಂದಣಿಗೆ ಜನದಟ್ಟಣೆಯು ನಿತ್ಯವೂ ಹೆಚ್ಚಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆದು ಸೋಂಕು ತಗುಲದಂತೆ ಎಚ್ಚರ ವಹಿಸಲು ಆಧಾರ್ ನೋಂದಣಿ ಪ್ರಕ್ರಿಯೆಯನ್ನೂ ಬಂದ್ ಮಾಡುವ ಚಿಂತನೆ ನಡೆಸುತ್ತಿದೆ. ಇನ್ನು ಪಡಿತರ ವಿತರಣೆಯ ವೇಳೆ ಹೆಬ್ಬೆರಳು ತಂಬ್ ತಗೆದುಕೊಳ್ಳಲು ಕೈ ತೊಳೆಯುತ್ತಿರುವುದು ಒಳ್ಳೆಯದು.
ಕೆಲವೊಂದು ಪಡಿತರ ಕೇಂದ್ರದಲ್ಲಿ ಮಾಸ್ಕ್ ಗಳನ್ನು ದುಬಾರಿ ಧರದಲ್ಲಿ ಮಾರಾಟ ಮಾಡುವ ವಿಚಾರ ಬೆಳಕಿಗೆ ಬರುತ್ತಿವೆ. ಅಂತವರ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲದೇ, ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ 30 ಸಾವಿರ ಮಾಸ್ಕ್ ಗಳನ್ನು ವಿತರಣೆ ಮಾಡಲಾಗಿದೆ.
ಒಡನಾಟದಲ್ಲಿದ್ದವರ ಮೇಲೂ ನಿಗಾ : ಕೊರೊನಾ ವೈರಸ್ ಭೀತಿ ದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಜಿಲ್ಲೆಯಲ್ಲೂ ವಿದೇಶದಿಂದ ಆಗಮಿಸುವ ದೇಶದ ನಿವಾಸಿಗಳ ಮೇಲೆಯೂ ನಿಗಾ ವಹಿಸುತ್ತಿದ್ದಾರೆ. ಅಲ್ಲದೇ, ಅವರ ಅಕ್ಕಪಕ್ಕದವರ ಹಾಗೂ ಅವರ ಜೊತೆ ಒಡನಾಟದಲ್ಲಿರುವವರ ಮೇಲೆಯೂ ನಿಗಾ ವಹಿಸಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರದ ವರೆಗೂ 22 ಜನರ ಮೇಲೆ ನಿಗಾ ವಹಿಸಲಾಗಿದೆ. 14 ದಿನಗಳ ವರೆಗೂ 22 ಜನರ ಮೇಲೂ ನಿಗಾವಹಿಸಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಮಾಡಲಾಗಿದೆ. 14 ದಿನದಲ್ಲಿ 05 ಜನರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಆದರೆ ಅವರಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲ. ಅವರು ಆರೋಗ್ಯವಾಗಿಯೇ ಇದ್ದಾರೆ. ಇನ್ನೂ ಮಂಗಳವಾರದ ಅಂತ್ಯಕ್ಕೆ 17 ಜನರ ಮೇಲೆ ಜಿಲ್ಲಾಡಳಿತ ನಿರಂತರ ಕಣ್ಣಿಟ್ಟಿದೆ. ಅವರಲ್ಲಿ ಯಾವುದೇ ಸೋಂಕು ಇಲ್ಲವಾದರೂ ಆರೋಗ್ಯದ ಹಿತದೃಷ್ಟಿಯಿಂದ ನಿಗಾ ವಹಿಸಲಾಗಿದೆ.
ವಿಜ್ಞಾನ ಭವನದಲ್ಲಿ 50 ಬೆಡ್ ವ್ಯವಸ್ಥೆ : ಜಿಲ್ಲೆಯಲ್ಲಿ ಈ ವರೆಗೂ ಯಾವುದೇ ಸೋಂಕಿತರು ಕಂಡುಬಂದಿಲ್ಲವಾದರೂ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಅಂತಹ ಸೋಂಕಿತರು ಪತ್ತೆಯಾದರಲ್ಲಿ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ 12 ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಎಲ್ಲ ವ್ಯವಸ್ಥೆಯನ್ನೂ ಮಾಡಲಾಗಿದೆ. ಇನ್ನೂ ಸೋಂಕಿತರು ಪತ್ತೆಯಾದಲ್ಲಿ ಅವರಿಗೆ ವಿಶೇಷ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಕೊಪ್ಪಳದ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ವಿಜ್ಞಾನ ಭವನದಲ್ಲಿ 50 ಬೆಡ್ ವ್ಯವಸ್ಥೆ ಮಾಡಲಾಗಿದೆ. ಅದಕ್ಕೆ ತಕ್ಕಂತೆ ವೈದ್ಯರನ್ನು ನಿಯೋಜನೆ ಮಾಡಲಾಗುತ್ತಿದೆ.
ಬೋಟ್ಗಳ ಸಂಚಾರ ಸಂಪೂರ್ಣ ನಿಷಿದ್ಧ : ಬಳ್ಳಾರಿ ಭಾಗಕ್ಕೆ ಬರುವ ವಿದೇಶಿಗರು ಹಂಪಿ ಭಾಗದಿಂದ ನೀರಿನ ಹರಿವಿನ ತಾಣದಲ್ಲಿ ಬೋಟ್ಗಳ ಮೂಲಕ ಆನೆಗೊಂದಿ ಭಾಗಕ್ಕೆ ಆಗಮಿಸುತ್ತಿದ್ದು, ಅವರು ಜಿಲ್ಲೆಗೆ ಅಗಮಿಸುವುದನ್ನು ತಪ್ಪಿಸಲು ಬೋಟ್ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಿಲ್ಲೆಗೆ ಆಗಮಿಸಿರುವ ವಿದೇಶಿಗರ ಸರ್ವೇಕಾರ್ಯವೂ ನಡೆದಿದೆ. ಅಲ್ಲದೇ, ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಳ್ಳುತ್ತಿದ್ದು, ಅದರ ಮೇಲೆಯೂ ನಿಗಾ ವಹಿಸಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಫಾರಂಗಳಿದ್ದು ಅವುಗಳ ಮೇಲೆಯೂ ನಿಗಾ ವಹಿಸಲು ಪಶುಪಾಲನಾ ಇಲಾಖೆಗೆ ಸೂಚನೆ ನೀಡಲಾಗಿದೆ.-ಸುನೀಲ್ ಕುಮಾರ, ಜಿಲ್ಲಾಧಿಕಾರಿ. ಕೊಪ್ಪಳ
-ದತ್ತು ಕಮ್ಮಾರ
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.