ವಿದೇಶಿಗರ ಆಗಮನದ ಸರ್ವೇ ಕಾರ್ಯ ಶುರು


Team Udayavani, Mar 18, 2020, 2:50 PM IST

ವಿದೇಶಿಗರ ಆಗಮನದ ಸರ್ವೇ ಕಾರ್ಯ ಶುರು

ಸಾಂದರ್ಭಿಕ ಚಿತ್ರ

ಕೊಪ್ಪಳ: ಕೊರೊನಾ ಭೀತಿ ವಿಶ್ವದಲ್ಲೆಡೆ ಹೆಚ್ಚುತ್ತಿದ್ದಂತೆ, ದೇಶದಲ್ಲಿಯೂ ಹೆಚ್ಚಿನ ಜಾಗೃತಿ ವಹಿಸಲಾಗಿದೆ. ರಾಜ್ಯದಲ್ಲಂತೂ ಒಂದುವಾರ ಬಂದ್‌ ಘೋಷಣೆ ಮಾಡಲಾಗಿದ್ದು, ಕೊಪ್ಪಳ ಜಿಲ್ಲಾಡಳಿತವು ಆನೆಗೊಂದಿ ಹಾಗೂ ಅಂಜಿನಾದ್ರಿ, ವಿರುಪಾಪುರ ಗಡ್ಡೆಗೆ ಪ್ರವಾಸಕ್ಕೆ ಆಗಮಿಸಿರುವ ವಿದೇಶಿಗರ ಗಣನೆ ಸರ್ವೇ ಕಾರ್ಯ ಆರಂಭಿಸಿದೆ. ಒಟ್ಟಾರೆ ಜಿಲ್ಲಾಡಳಿತ 22 ಜನರ ಮೇಲೂ ಈ ವರೆಗೂ ನಿಗಾ ವಹಿಸಿದೆ.

ಕೊರೊನಾ ಬಗ್ಗೆ ಎಲ್ಲೆಡೆಯೂ ಜಿಲ್ಲಾಡಳಿತವು ವಿವಿಧ ಕ್ಯಾಂಪ್‌ಗ್ಳನ್ನು ಆಯೋಜನೆ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಲಿದೆ. ಆದರೂ ಕೆಲವೊಮ್ಮೆ ಜಿಲ್ಲೆಯ ನಿವಾಸಿಗಳು ವಿದೇಶದಲ್ಲಿ ನೆಲೆಸಿದ್ದು, ಕೊರೊನಾ ಭೀತಿಯಿಂದಾಗಿ ಸ್ವದೇಶಕ್ಕೆ ಆಗಮಿಸಿ ಜಿಲ್ಲೆಯಲ್ಲಿ ನೆಲೆಸುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತಕ್ಕೆ ಸಕಾಲಕ್ಕೆ ಮಾಹಿತಿ ದೊರೆಯುತ್ತಿಲ್ಲ. ಜಿಲ್ಲೆಯ ಜನತೆ ವಿದೇಶದಿಂದ ಆಗಮಿಸುವ ಜನರ ಬಗ್ಗೆ ಕೂಡಲೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಇಲ್ಲವೇ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡುವಂತೆ ಪ್ರತಿ ದಿನವೂ ಹೇಳುತ್ತಿದೆ. ಕೊರೊನಾ ಬಗ್ಗೆ ಯಾವುದೇ ಸೋಂಕು ಕಾಣಿಸಿಕೊಳ್ಳದಂತೆ ಎಚ್ಚರಿಕೆ ವಹಿಸಿದೆ.

ವಿದೇಶಿಗರ ಸರ್ವೇ ಕಾರ್ಯ ಆರಂಭ: ಇದಲ್ಲದೇ ಕೊಪ್ಪಳ ಜಿಲ್ಲೆಯಲ್ಲಿ ವಿವಿಧೆಡೆ ಪ್ರಸಿದ್ದ ಪ್ರವಾಸಿ ತಾಣಗಳಿವೆ. ಅದರಲ್ಲೂ ಹಂಪಿ ಪಕ್ಕದಲ್ಲಿಯೇ ಪ್ರಸಿದ್ದ ಅಂಜಿನಾದ್ರಿ ಬೆಟ್ಟ, ಆನೆಗೊಂದಿ, ವಿರುಪಾಪುರ ಗಡ್ಡೆಯಿದೆ. ಇಲ್ಲಿಗೆ ನೂರಾರು ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ವಿಶ್ವದಲ್ಲಿ ಕೊರೊನಾ ಭೀತಿ ಹೆಚ್ಚಾಗಿದ್ದರಿಂದ ದೇಶದ ಜನರ ಸುರಕ್ಷತೆ ಜೊತೆಗೆ ವಿದೇಶಿಗರ ಮೇಲೂ ಹೆಚ್ಚಿನ ನಿಗಾ ವಹಿಸಲಾಗಿದೆ. ಜಿಲ್ಲೆಗೆ ತಿಂಗಳಲ್ಲಿ ಆಸ್ಟ್ರೇಲಿಯಾ, ಉಮನ್‌, ಇಟಲಿ, ಇರಾನ್‌ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸಿದ್ದು, ಅವರು ಏಷ್ಟು ಜನರಿದ್ದಾರೆ.

ಯಾವ ತಿಂಗಳು ಆಗಮಿಸಿದ್ದಾರೆ? ಅವರ ಆರೋಗ್ಯದ ಸ್ಥಿತಿ ಹೇಗಿದೆ? ಎಂದು ಜಿಲ್ಲೆಗೆ ಆಗಮಿಸಿದ್ದಾರೆ? ಸದ್ಯ ಏಲ್ಲಿ ನೆಲೆಸಿದ್ದಾರೆ? ಎನ್ನುವ ಸಂಪೂರ್ಣ ಮಾಹಿತಿ ಜಿಲ್ಲಾಡಳಿತ ಕಲೆಹಾಕಲು ಮುಂದಾಗಿದ್ದು, ಡಿಸಿ ಸೂಚನೆ ಮೇರೆಗೆ ಆರೋಗ್ಯ ಇಲಾಖೆಯು ವಿದೇಶಿಗರ ಸರ್ವೇ ಕಾರ್ಯ ಆರಂಭವಾಗಿದೆ.

ಆಧಾರ್‌ ನೋಂದಣಿ ಬಂದ್‌ಗೆ ಚಿಂತನೆ: ಜಿಲ್ಲೆಯಲ್ಲಿ ಆಧಾರ್‌ ನೋಂದಣಿಗೆ ಜನದಟ್ಟಣೆಯು ನಿತ್ಯವೂ ಹೆಚ್ಚಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆದು ಸೋಂಕು ತಗುಲದಂತೆ ಎಚ್ಚರ ವಹಿಸಲು ಆಧಾರ್‌ ನೋಂದಣಿ ಪ್ರಕ್ರಿಯೆಯನ್ನೂ ಬಂದ್‌ ಮಾಡುವ ಚಿಂತನೆ ನಡೆಸುತ್ತಿದೆ. ಇನ್ನು ಪಡಿತರ ವಿತರಣೆಯ ವೇಳೆ ಹೆಬ್ಬೆರಳು ತಂಬ್‌ ತಗೆದುಕೊಳ್ಳಲು ಕೈ ತೊಳೆಯುತ್ತಿರುವುದು ಒಳ್ಳೆಯದು.

ಕೆಲವೊಂದು ಪಡಿತರ ಕೇಂದ್ರದಲ್ಲಿ ಮಾಸ್ಕ್  ಗಳನ್ನು ದುಬಾರಿ ಧರದಲ್ಲಿ ಮಾರಾಟ ಮಾಡುವ ವಿಚಾರ ಬೆಳಕಿಗೆ ಬರುತ್ತಿವೆ. ಅಂತವರ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲದೇ, ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ 30 ಸಾವಿರ ಮಾಸ್ಕ್ ಗಳನ್ನು ವಿತರಣೆ ಮಾಡಲಾಗಿದೆ.

ಒಡನಾಟದಲ್ಲಿದ್ದವರ ಮೇಲೂ ನಿಗಾ : ಕೊರೊನಾ ವೈರಸ್‌ ಭೀತಿ ದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಜಿಲ್ಲೆಯಲ್ಲೂ ವಿದೇಶದಿಂದ ಆಗಮಿಸುವ ದೇಶದ ನಿವಾಸಿಗಳ ಮೇಲೆಯೂ ನಿಗಾ ವಹಿಸುತ್ತಿದ್ದಾರೆ. ಅಲ್ಲದೇ, ಅವರ ಅಕ್ಕಪಕ್ಕದವರ ಹಾಗೂ ಅವರ ಜೊತೆ ಒಡನಾಟದಲ್ಲಿರುವವರ ಮೇಲೆಯೂ ನಿಗಾ ವಹಿಸಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರದ ವರೆಗೂ 22 ಜನರ ಮೇಲೆ ನಿಗಾ ವಹಿಸಲಾಗಿದೆ. 14 ದಿನಗಳ ವರೆಗೂ 22 ಜನರ ಮೇಲೂ ನಿಗಾವಹಿಸಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಮಾಡಲಾಗಿದೆ. 14 ದಿನದಲ್ಲಿ 05 ಜನರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಆದರೆ ಅವರಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲ. ಅವರು ಆರೋಗ್ಯವಾಗಿಯೇ ಇದ್ದಾರೆ. ಇನ್ನೂ ಮಂಗಳವಾರದ ಅಂತ್ಯಕ್ಕೆ 17 ಜನರ ಮೇಲೆ ಜಿಲ್ಲಾಡಳಿತ ನಿರಂತರ ಕಣ್ಣಿಟ್ಟಿದೆ. ಅವರಲ್ಲಿ ಯಾವುದೇ ಸೋಂಕು ಇಲ್ಲವಾದರೂ ಆರೋಗ್ಯದ ಹಿತದೃಷ್ಟಿಯಿಂದ ನಿಗಾ ವಹಿಸಲಾಗಿದೆ.

ವಿಜ್ಞಾನ ಭವನದಲ್ಲಿ 50 ಬೆಡ್‌ ವ್ಯವಸ್ಥೆ : ಜಿಲ್ಲೆಯಲ್ಲಿ ಈ ವರೆಗೂ ಯಾವುದೇ ಸೋಂಕಿತರು ಕಂಡುಬಂದಿಲ್ಲವಾದರೂ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಅಂತಹ ಸೋಂಕಿತರು ಪತ್ತೆಯಾದರಲ್ಲಿ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ 12 ಬೆಡ್‌ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಎಲ್ಲ ವ್ಯವಸ್ಥೆಯನ್ನೂ ಮಾಡಲಾಗಿದೆ. ಇನ್ನೂ ಸೋಂಕಿತರು ಪತ್ತೆಯಾದಲ್ಲಿ ಅವರಿಗೆ ವಿಶೇಷ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಕೊಪ್ಪಳದ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ವಿಜ್ಞಾನ ಭವನದಲ್ಲಿ 50 ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಅದಕ್ಕೆ ತಕ್ಕಂತೆ ವೈದ್ಯರನ್ನು ನಿಯೋಜನೆ ಮಾಡಲಾಗುತ್ತಿದೆ.

ಬೋಟ್‌ಗಳ ಸಂಚಾರ ಸಂಪೂರ್ಣ ನಿಷಿದ್ಧ : ಬಳ್ಳಾರಿ ಭಾಗಕ್ಕೆ ಬರುವ ವಿದೇಶಿಗರು ಹಂಪಿ ಭಾಗದಿಂದ ನೀರಿನ ಹರಿವಿನ ತಾಣದಲ್ಲಿ ಬೋಟ್‌ಗಳ ಮೂಲಕ ಆನೆಗೊಂದಿ ಭಾಗಕ್ಕೆ ಆಗಮಿಸುತ್ತಿದ್ದು, ಅವರು ಜಿಲ್ಲೆಗೆ ಅಗಮಿಸುವುದನ್ನು ತಪ್ಪಿಸಲು ಬೋಟ್‌ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಿಲ್ಲೆಗೆ ಆಗಮಿಸಿರುವ ವಿದೇಶಿಗರ ಸರ್ವೇಕಾರ್ಯವೂ ನಡೆದಿದೆ. ಅಲ್ಲದೇ, ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಳ್ಳುತ್ತಿದ್ದು, ಅದರ ಮೇಲೆಯೂ ನಿಗಾ ವಹಿಸಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಫಾರಂಗಳಿದ್ದು ಅವುಗಳ ಮೇಲೆಯೂ ನಿಗಾ ವಹಿಸಲು ಪಶುಪಾಲನಾ ಇಲಾಖೆಗೆ ಸೂಚನೆ ನೀಡಲಾಗಿದೆ.-ಸುನೀಲ್‌ ಕುಮಾರ, ಜಿಲ್ಲಾಧಿಕಾರಿ. ಕೊಪ್ಪಳ

 

-ದತ್ತು ಕಮ್ಮಾರ

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Kushtagi: ನಿರ್ಲಕ್ಷ್ಯಕ್ಕೆ ತುತ್ತಾದ ನಾಡಿನ ಶಾಸನ-ಕುರುಹು

17

Dotihal: ಪ್ರೌಢಶಿಕ್ಷಣ;ಬಾಲಕಿಯರಿಗೆ ಪ್ರಯಾಸದ ಪಯಣ

17

Kushtagi: ಕುಡಿವ ನೀರಿಗಾಗಿ ಕುಷ್ಟಗಿ ಜನರ ಪರದಾಟ

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

Koppala: Those who call themselves Hindutva should shut up..: Madhu Bangarappa

Koppala: ಹಿಂದುತ್ವ ಎನ್ನುವವರು ಮುಚ್ಕೊಂಡು ಇರಲಿ..: ಮಧು ಬಂಗಾರಪ್ಪ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.