ಕರೆನ್ಸಿ ಚಸ್ಟ್‌ ಸೇವೆ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಖಂಡನೆ


Team Udayavani, Dec 12, 2019, 3:39 PM IST

kopala-tdy-3

ಕುಷ್ಟಗಿ: ಪಟ್ಟಣದ ಮಾರುತಿ ವೃತ್ತದ ಎಸ್‌ಬಿಐ ಬ್ಯಾಂಕ್‌ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಣ ಕ್ರೋಢೀಕರಣ ಘಟಕವನ್ನು (ಕರೆನ್ಸಿ ಚಸ್ಟ್‌) ಸೇವೆ ಇದೇ ಡಿ. 31ರಿಂದ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಉದ್ದಿಮೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಎಸ್‌ಬಿಐ ಶಾಖೆಯಲ್ಲಿದ್ದ ಕರೆನ್ಸಿ ಘಟಕಕ್ಕೆ ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಹಣ ಪೂರೈಕೆಯ ವ್ಯವಸ್ಥೆ ಇತ್ತು. ಆದರೆ ಈ ಸೇವೆ ಇದೇ ಡಿ. 31ಕ್ಕೆ ಬಂದ್‌ ಆಗುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬ್ಯಾಂಕಿನಿಂದ ಸ್ಥಳೀಯ ಅಂಚೆ ಕಚೇರಿ, ತಾವರಗೇರಾ, ಹನುಮಸಾಗರ, ಹೂಲಗೇರಾ ಮೊದಲಾದ ಎಸ್‌ಬಿಐ ಶಾಖೆಗಳಿಗೆ, ಸಹಕಾರ ಬ್ಯಾಂಕ್‌ ಸೇರಿದಂತೆ ಇತರೇ ಬ್ಯಾಂಕ್‌ ಹಣ ಸರಬರಾಜು ವ್ಯವಸ್ಥೆ ಇತ್ತು. ಇದರಿಂದ ಸಕಾಲದಲ್ಲಿ ಹಣ ಲಭ್ಯತೆ ಇರುತ್ತಿದ್ದು, ಯಾವಾಗಲೂ 10 ಕೋಟಿಗೂ ಅಧಿಕ ಹಣ ಮೀಸಲಿರುತ್ತಿತ್ತು. ಲಕ್ಷಕ್ಕೂ ಅಧಿಕ ಮೊತ್ತ ಅಗತ್ಯವಾದರೆ ಕೂಡಲೇ ಸಿಗುತ್ತಿತ್ತು. ಕರೆನ್ಸಿ

ಚಸ್ಟ್‌ ಸೇವೆ ಡಿ. 31ರಿಂದ ಸ್ಥಗಿತಗೊಂಡರೆ ಯಲಬುರ್ಗಾ ಎಸ್‌ಬಿಐ ಶಾಖೆಯಿಂದ ತರಿಸಿಕೊಳ್ಳಬೇಕಿದ್ದು, ಅಲ್ಲಿಯವರೆಗೂ ಕಾಯಬೇಕು. ಲಕ್ಷಕ್ಕೂ ಅಧಿಕ ಮೊತ್ತ ಅಗತ್ಯವಾದರೆ ಕ್ರೋಢಿಕೃತವಾಗುವರೆಗೂ ಕಾಯಬೇಕು. ಇಲ್ಲವೇ ದೊಡ್ಡ ಮೊತ್ತ ಹಣ ಅಗತ್ಯವಾದರೆ ಮುಂಚೆಯೇ ಶಾಖೆಗೆ ತಿಳಿಸುವ ಪರಿಸ್ಥಿತಿ ಬರಲಿದೆ.

ಮಾಹಿತಿ ಪ್ರಕಾರ ಆರ್‌ಬಿಐ ನಿರ್ದೇಶನದ ಮೇರೆಗೆ ಕರೆನ್ಸಿ ಚಸ್ಟ ಸೇವೆ ಸ್ಥಗಿತಕ್ಕೆ ಎಲ್ಲವೂ ಆನ್‌ಲೈನ್‌ನಲ್ಲಿ ವ್ಯವಹರಿಸಲು ಪೂರಕ ವ್ಯವಸ್ಥೆ ಇದಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ಒಪ್ಪುವುದಿಲ್ಲ. ಈ ಸೇವೆಯನ್ನು ಯಾವೂದೇ ಕಾರಣಕ್ಕೂ ಸ್ಥಗಿತಗೊಳಿಸದಿರಲಿ, ಇದೇ ಡಿ. 13ರಂದು ಬ್ಯಾಂಕ್‌ ಎಜಿಎಂ ಮೂಲಕ ಡಿಜಿಎಂಗೆ ಮನವಿ ಸಲ್ಲಿಸಲಾಗುತ್ತಿದೆ. ಅಲ್ಲದೇ ಕೊಪ್ಪಳ ಸಂಸದ ಕರಡಿ ಸಂಗಣ್ಣ ಹಾಗೂ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಅವರಿಗೂ ಸಲ್ಲಿಸಲಾಗುವುದು ಎಂದು ಹೈದ್ರಾಬಾದ್‌ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ್‌ ಗಾಣಗೇರ ತಿಳಿಸಿದರು. ಬ್ಯಾಂಕಿನಲ್ಲಿ ಗ್ರಾಹಕರಿಗೆ ಸೇವೆ ತೃಪ್ತಿಕರವಾಗಿಲ್ಲ. ತಾಸುಗಟ್ಟಲೇ ನಿಲ್ಲಬೇಕು ಇದನ್ನು ಸರಿಪಡಿಸದೇ ಬ್ಯಾಂಕಿನ ಕರೆನ್ಸಿ ಚಸ್ಟ್‌ ಸೇವೆ ಸ್ಥಗಿತಗೊಳಿಸಲು ಮುಂದಾಗಿರುವುದು ಖಂಡನೀಯ ಎಂದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.