ಎಲ್‌ಐಸಿ ಷೇರು ಮಾರಾಟಕ್ಕೆ ಖಂಡನೆ


Team Udayavani, Feb 5, 2020, 4:00 PM IST

kopala-tdy-2

ಗಂಗಾವತಿ: ಕೇಂದ್ರ ಸರಕಾರ ತನ್ನ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಎಲ್‌ಐಸಿ ಷೇರು ಮಾರಾಟವನ್ನು ವಿಮಾನೌಕರರು ಮತ್ತು ಪ್ರತಿನಿಧಿಗಳ ಸಂಘದವರು ಖಂಡಿಸಿ ಮಂಗಳವಾರ ದೇಶವ್ಯಾಪಿ ಪ್ರತಿಭಟನೆ ನಡೆಸಿದರು. ಸ್ಥಳೀಯ ಎಲ್‌ಐಸಿ ಕಚೇರಿ ಎದುರು ವಿಮಾನೌಕರರು ಮತ್ತು ಪ್ರತಿನಿಧಿಗಳ ಸಂಘದವರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ವಿಮಾ ಹಿರಿಯ ಅಧಿಕಾರಿಗಳ ಸಂಘದ ಮುಖಂಡರಾದ ಗಂಗಾಧರಸ್ವಾಮಿ ಮತ್ತು ಸುರೇಶ ಮಾತನಾಡಿ, 6 ದಶಕಗಳಿಂದ ದೇಶದಲ್ಲಿ ಎಲ್‌ಐಸಿ ದೇಶದ ಜನರ ಬದುಕಿನೊಂದಿಗೆ ಹಾಸುಹೊಕ್ಕಾಗಿದೆ. ದೇಶದ ಸದೃಢ ಆರ್ಥಿಕ ಶಕ್ತಿಯಾಗಿ ದೇಶದ ಮೂಲಸೌಕರ್ಯ ಕಲ್ಪಿಸಲು ನೆರವಾಗಿದೆ.ಪಂಚವಾರ್ಷಿಕ ಯೋಜನೆಯಲ್ಲಿ ಎಲ್‌ ಐಸಿಯಲ್ಲಿ ಸಂಗ್ರಹವಾದ ಜನರ ಹಣವನ್ನು ಬಳಕೆ ಮಾಡಲಾಗುತ್ತಿದೆ. ಪ್ರತಿ ವರ್ಷ ಕೇಂದ್ರ ಸರಕಾರ ಕೋಟ್ಯಾಂತರ ರೂ.ಗಳನ್ನು ಲಾಭಾಂಶ ನೀಡುವ ಎಲ್‌ಐಸಿ ದೇಶವನ್ನು ಎಲ್ಲಾ ಸಂದರ್ಭಗಳಲ್ಲಿ ಆರ್ಥಿಕವಾಗಿ ಸಂರಕ್ಷಣೆ ಮಾಡಿದೆ. ಈಗ ಸರಕಾರ ತನ್ನ ಪಾಲಿನ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಎಲ್‌ಐಸಿಯನ್ನು ಖಾಸಗೀಕರಣ ಮಾಡುವ ಪ್ರಥಮ ಹೆಜ್ಜೆ ಇಡುತ್ತಿರುವುದು ಖಂಡನೀಯವಾಗಿದೆ.

ಸ್ವಾತಂತ್ರ್ಯ ನಂತರ ಬ್ಯಾಂಕಿಂಗ್‌ ಸೇರಿ ಸಾರ್ವಜನಿಕ ಸಂಸ್ಥೆಗಳನ್ನು ರಾಷ್ಟ್ರೀಕರಣ ಮಾಡಿ ಲಾಭಾಂಶವನ್ನು ದೇಶದ ಜನರಿಗೆ ಹಂಚಿಕೆ ಮಾಡಲಾಗುತ್ತಿತ್ತು. ಇದೀಗ ಖಾಸಗೀಕರಣದ ನೆಪದಲ್ಲಿ ಲಾಭದಲ್ಲಿರುವ ಬ್ಯಾಂಕಿಂಗ್‌ ಹಾಗೂ ವಿಮಾ ಕ್ಷೇತ್ರವನ್ನು ಖಾಸಗೀಕರಣ ಮಾಡುವುದು ಅವೈಜ್ಞಾನಿಕವಾಗಿದೆ. ಎಲ್‌ ಐಸಿ ದೇಶದ ಸುಮಾರು 30 ಕೋಟಿ ಜನರಿಗೆ ವಿಮಾ ಸುರಕ್ಷತೆ ನೀಡಿದೆ. 15 ಲಕ್ಷಕ್ಕೂ ಅಧಿಕ ಪ್ರತಿನಿಧಿಗಳ ಬದುಕು ನಡೆಸಲು ಕಾರಣವಾಗಿದೆ. ಇಂತಹ ಹೆಮ್ಮೆಯ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಕೈಬಿಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿಮಾ ನೌಕರರ ಸಂಘದ ಗಂಗಾಧರಸ್ವಾಮಿ, ಸುರೇಶ, ರಾಮಣ್ಣ,  ಕುರಿರಾಮಣ್ಣ, ಗೋಪಾಲಕೃಷ್ಣ, ಹನುಮಂತಪ್ಪ, ನರೇಶ, ಶ್ರೀಲತಾ, ವೀಣಾ, ಅಂಜಿನಮ್ಮ, ನರಸಿಂಹ, ರಮೇಶ ಭಟ್‌, ಕಿಶನ್‌, ರಾಜು, ವಿಶ್ವಪ್ರಸಾದ, ಪ್ರತಿನಿಧಿ  ಸಂಘದ ಕೆ.ನಿಂಗಜ್ಜ, ವಲಿಮೋಹಿಯುದ್ದೀನ್‌, ಖಾಜವಲಿ, ರಾಘವೇಂದ್ರ ದೇಸಾಯಿ, ನಿಜಲಿಂಗಪ್ಪ, ಬಸವರಾಜ ಸಜ್ಜನ್‌, ಎಚ್‌. ಈಶ್ವರ, ಬಸವಣ್ಣಯ್ಯ, ಕಲ್ಯಾಣಬಸಪ್ಪ ಸೇರಿ ಪ್ರತಿನಿಧಿಗಳು ಹಾಗೂ ಗ್ರಾಹಕರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.