ಪ್ರಭಾರ ಪ್ರಾಚಾರ್ಯರ ಅಧಿಕಾರದ ಗೊಂದಲ: ಮಹಾವಿದ್ಯಾಲಯಕ್ಕೆ MLA ಗಾಲಿ ಜನಾರ್ದನರೆಡ್ಡಿ ಭೇಟಿ
ಸೂಚನೆ ನೀಡಿದರೂ ಪ್ರಭಾರ ವಹಿಸಿದ್ದಕ್ಕೆ ಗರಂ ಆದ ಶಾಸಕ ಗಾಲಿ ರೆಡ್ಡಿ
Team Udayavani, Aug 16, 2023, 3:55 PM IST
ಗಂಗಾವತಿ: ನಗರದ ಪ್ರತಿಷ್ಠಿತ ಕೊಲ್ಲಿ ನಾಗೇಶ್ವರ ರಾವ್ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪ್ರಭಾರ ಪ್ರಾಚಾರ್ಯರ ಹುದ್ದೆ ವಹಿಸಿಕೊಳ್ಳುವ ಕುರಿತು ಏರ್ಪಟ್ಟಿರುವ ಗೊಂದಲ ಕುರಿತಂತೆ ಉದಯವಾಣಿ ವೆಬ್ ನ್ಯೂಸ್ ನಲ್ಲಿ ವಿಸ್ತ್ರತ ವರದಿ ಪ್ರಕಟಣೆಗೊಂಡಿತ್ತು.
ಈ ಹಿನ್ನೆಲೆಯಲ್ಲಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಾಲಿ ಜನಾರ್ದನರೆಡ್ಡಿ ಆ.16ರ ಬುಧವಾರ ಕಾಲೇಜಿಗೆ ಭೇಟಿ ನೀಡಿ ಎಲ್ಲಾ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತು ಅತಿಥಿ ಉಪನ್ಯಾಸಕರ ಸಭೆ ಕರೆದು ನಿಯಮ ಉಲ್ಲಂಘನೆ ಮತ್ತು ತಮ್ಮ ಸೂಚನೆಯನ್ನು ಮೀರಿ ಪ್ರಭಾರ ವಹಿಸಿಕೊಂಡಿರುವ ಡಾ. ಜಾಜಿ ದೇವೇಂದ್ರಪ್ಪ ಕೂಡಲೇ ಹುದ್ದೆಯಿಂದ ನಿರ್ಗಮಿಸಬೇಕು ಎಂದರು.
ಮೊದಲಿನಂತೆ ಪ್ರೋ. ಜಗದೇವಿ ಕೆಲಶೆಟ್ಟಿ ತಾತ್ಕಾಲಿಕ ಪ್ರಭಾರ ಪ್ರಾಚಾರ್ಯರ ಹುದ್ದೆಯಲ್ಲಿ ಮುಂದುವರೆಯಬೇಕು. ಶೀಘ್ರವೇ ನಿಯಮಾನುಸಾರ ಅನ್ಯರಿಗೆ ಪ್ರಾಚಾರ್ಯ ಹುದ್ದೆ ವಹಿಸಲಾಗುತ್ತದೆ ಎಂದು ಸೂಚನೆ ನೀಡಿದರು.
ಕಾಲೇಜಿನಲ್ಲಿ ಖಾಯಂ ಪ್ರಾಚಾರ್ಯರು ಒಂದು ವೇಳೆ ವರ್ಗವಾದರೆ ಅಥವಾ ಅನಾರೋಗ್ಯವಿದ್ದರೆ ಅವರು ಆಯುಕ್ತರು, ನಿರ್ದೇಶಕರಿಗೆ ಪತ್ರ ಬರೆದು ಪ್ರಭಾರ ವಹಿಸುವ ಕುರಿತು ಅನುಮತಿ ಕೇಳಿ ಇಲಾಖೆ ಸೂಚನೆ ಮೇರೆಗೆ ಬೇರೆಯವರಿಗೆ ಪ್ರಭಾವ ವಹಿಸಬೇಕು ಎಂದರು.
ಆದರೆ ಇಲ್ಲಿ ಪ್ರಭಾರ ಪ್ರಾಚಾರ್ಯರು ಮತ್ತೊಬ್ಬರಿಗೆ ಪ್ರಭಾವ ವಹಿಸುವ ಸಂದರ್ಭದಲ್ಲಿ ಉನ್ನತ ಶಿಕ್ಷಣ ಆಯುಕ್ತರು, ನಿರ್ದೇಶಕರಿಗೆ ಪತ್ರ ಬರೆದು ಅನುಮತಿ ಪಡೆದು ಕಾಲೇಜು ಅಭಿವೃದ್ಧಿ ಕಮಿಟಿ ಅಧ್ಯಕ್ಷರಾಗಿರುವ ಶಾಸಕರ ಗಮನಕ್ಕೆ ತಂದು, ಶಾಸಕರ ಸೂಚನೆ ಮೇರೆಗೆ ಇತರರಿಗೆ ಪ್ರಭಾರ ಕೊಡಬೇಕು ಎಂದ ಅವರು, ಆದರೆ ಇಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಇಷ್ಟ ಬಂದಂತೆ ಪ್ರಭಾರ ವಹಿಸಿರುವುದು ಸರಿಯಲ್ಲ ಎಂದು ಹೇಳಿದರು.
ತಾವು ಬಂದು ಸಭೆ ನಡೆಸುವ ತನಕ ತಡೆಯುವಂತೆ ಪ್ರೋ.ಜಗದೇವಿ ಕಲಶೆಟ್ಟಿ ಅವರಿಗೆ ಸೂಚನೆ ನೀಡಿದರೂ ಡಾ.ಜಾಜಿ ದೇವೆಂದ್ರಪ್ಪ ಅವರಿಗೆ ಪ್ರಭಾರ ವಹಿಸಿದ್ದು ಸರಿಯಲ್ಲ. ಆದ್ದರಿಂದ ಕಾಲೇಜಿನ ಶೈಕ್ಷಣಿಕ ವಾತಾವರಣ ಉತ್ತಮವಾಗಿದ್ದರೆ ಮಾತ್ರ ಕಾಲೇಜಿನ ಗುಣಮಟ್ಟ ಮತ್ತು ಫಲಿತಾಂಶ ಚೆನ್ನಾಗಿ ಬರುತ್ತದೆ. ಆದ್ದರಿಂದ ಸದ್ಯ ಪ್ರೋ. ಜಗದೇವಿ, ಕಲಶೆಟ್ಟಿಯವರು ಪುನ: ಪ್ರಭಾರ ಪ್ರಾಚಾರ್ಯ ಮುಂದುವರೆಯಲಿದ್ದು, ಶೀಘ್ರವೇ ಮತ್ತೊಮ್ಮೆ ಸಭೆ ನಡೆಸಿ ನಿಯಮ ಅನುಸಾರ ಅರ್ಹರಿರುವ ಬೇರೆಯವರಿಗೆ ಪ್ರಭಾರ ವಹಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆತಿಥಿ ಉಪನ್ಯಾಸಕರು ತಮಗೆ ಸೇವಾ ಭದ್ರತೆ ಕೊಡುವಂತೆ ಹಾಗೂ ಸರ್ಕಾರದಿಂದ ಎಂ.ಎ. ಇಂಗ್ಲಿಷ್ ಕೋರ್ಸ್ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕ ಗಾಲಿ ಜನಾರ್ದನರೆಡ್ಡಿ ಶೀಘ್ರದಲ್ಲಿ ಗಂಗಾವತಿಯಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭವಾಗಲ್ಲಿದ್ದು, ಸರ್ಕಾರದ ಮಟ್ಟದಲ್ಲಿ ಈಗಾಗಲೇ ಮಾತುಕತೆ ನಡೆದಿದ್ದು ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಕೊಲ್ಲಿ ನಾಗೇಶ್ವರ ರಾವ್ ಸರಕಾರಿ ಮಹಾವಿದ್ಯಾಲಯ ಬೃಹತ್ ಕಾಲೇಜು ಆಗಿದ್ದು ಇಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇವರ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಮತ್ತು ಕಾಲೇಜಿನ ಅಭಿವೃದ್ಧಿಗೆ ಭೂ ದಾನಿಗಳ ಸಹಕಾರದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ ಎಲ್ಲರೂ ಸಹಕಾರ ನೀಡುವಂತೆ ಕೋರಿದರು.
ಪ್ರಾಧ್ಯಾಪಕರಾದ ಕರಿಗೂಳಿ ಹಾಗೂ ಡಾ.ಮುಮ್ತಾಜ್ ಬೇಗಂ ಮಾತನಾಡಿ, ಪ್ರಭಾರ ಪ್ರಾಚಾರ್ಯರ ಹುದ್ದೆ ಸಂಬಂಧಪಟ್ಟಂತೆ ಗೊಂದಲವಿದ್ದು, ನಿಯಮಾನುಸಾರ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಕಾಲೇಜಿಗೆ ಕೆಟ್ಟ ಹೆಸರು ಬಂದಿದೆ. ಸಿಡಿಸಿ ಅಧ್ಯಕ್ಷರು ಮಧ್ಯೆ ಪ್ರವೇಶ ಮಾಡಿರುವುದು ಸರಿಯಿದ್ದು, ಪ್ರಭಾರ ವಹಿಸುವ ವಿಚಾರದಲ್ಲಿ ಈ ಹಿಂದಿನ ಪ್ರಾಚಾರ್ಯರು ಎಲ್ಲಾ ಪ್ರಾಧ್ಯಾಪಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿಡಿಸಿ ಅಧ್ಯಕ್ಷರ ಸೂಚನೆಯಂತೆ ನಡೆದುಕೊಳ್ಳಬೇಕಿತ್ತು. ಅವಸರದ ಪರಿಣಾಮ ಕಾಲೇಜಿಗೆ ಕೆಟ್ಟ ಹೆಸರು ಬಂದಿದೆ ಎಂದರು.
ಭೂದಾನಿಗಳ ಆಕ್ರೋಶ: ನಾಗೇಶ ರಾವ್ ಸರಕಾರಿ ಮಹಾವಿದ್ಯಾಲಯಕ್ಕೆ 5 ಎಕರೆ ಭೂಮಿ ದಾನ ನೀಡಿದ್ದಕೊಲ್ಲಿ ನಾಗೇಶರಾವ್ ಕುಟುಂಬದ ರಾಧ ಕೊಲ್ಲಿ, ಮಲ್ಲಿಕಾರ್ಜುನ ಕೊಲ್ಲಿ ಕಾಲೇಜಿಗೆ ಭೇಟಿ ನೀಡಿ ಸಿಡಿಸಿ ಅಧ್ಯಕ್ಷರು ಹಾಗೂ ಶಾಸಕ ಗಾಲಿ ಜನಾರ್ದನರೆಡ್ಡಿ ಅವರನ್ನು ಸನ್ಮಾನಿಸಿ ಕಾಲೇಜಿನ ಪ್ರಾಚಾರ್ಯರೂ ಸೇರಿ ಸಿಡಿಸಿಯವರು ಭೂದಾನಿಗಳಿಗೆ ಸರಿಯಾದ ಗೌರವ ಕೊಡಲ್ಲ. ಕಾಲೇಜ್ ನಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು ನಮ್ಮ ಕುಟುಂಬ ಕಾಲೇಜಿಗೆ ಭೂಮಿ ಕೊಟ್ಟಿದ್ದು ಸಾರ್ಥಕವಾಗುತ್ತಿಲ್ಲ ಎಂಬ ಭಾವ ಬರುತ್ತಿದೆ. ಕೂಡಲೇ ವ್ಯವಸ್ಥೆ ಸರಿಪಡಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು ಮತ್ತು ಕೆ.ಆರ್.ಪಿ ಪಕ್ಷದ ಕಾರ್ಯಕರ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ